Vitla Panchalingeshwara Jatre: ವಿಟ್ಲ ಜಾತ್ರೆ ವೇಳೆ ಅವಾಂತರ; ದೇವರ ಉತ್ಸವ ಮೂರ್ತಿಗೆ ಬಡಿದ ಡ್ರೋನ್‌

Vitla Panchalingeshwara Jatre: ಬಂಟ್ವಾಳ ತಾಲೂಕಿನಲ್ಲಿರುವ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ರಥೋತ್ಸವದ ವೇಳೆ ಅವಾಂತರ ನಡೆದಿದ್ದು, ರಥವೇರುತ್ತಿದ್ದ ದೇವರ ಉತ್ಸವ ಮೂರ್ತಿಗೆ ಡ್ರೋನ್ ಬಡಿದಿದೆ.

Panchalingeshwara Jatre
Profile Ramesh B Jan 23, 2025 1:18 PM

ವಿಟ್ಲ: ಇತ್ತೀಚಿನ ದಿನಗಳಲ್ಲಿ ಡ್ರೋನ್‌ಗಳ ಹಾವಳಿ ಹೆಚ್ಚಾಗಿದ್ದು, ಎಲ್ಲೆಂದರಲ್ಲಿ ಇದರ ಬಳಕೆ ಮಾಡುವುದರಿಂದ ಕೆಲವೊಮ್ಮೆ ಅನಾಹುತವೂ ನಡೆಯುತ್ತದೆ. ಇದಕ್ಕೆ ಉದಾಹರಣೆ ಎಂಬಂತೆ ರಥವೇರುತ್ತಿದ್ದ ದೇವರ ಉತ್ಸವ ಮೂರ್ತಿಗೆ ಡ್ರೋನ್ ಬಡಿದು ಅವಾಂತರ ಉಂಟಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪದ ವಿಟ್ಲದಲ್ಲಿ(Vitla Panchalingeshwara Jatre) ನಡೆದಿದೆ.

ಬಂಟ್ವಾಳ ತಾಲೂಕಿನಲ್ಲಿರುವ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ರಥೋತ್ಸವದ ವೇಳೆ ಈ ಘಟನೆ ನಡೆದಿದೆ. ದೇವರ ರಥೋತ್ಸವದ ವೇಳೆ ಡ್ರೋನ್ ಹಾರಿಸಿ ಹುಚ್ಚಾಟ ಮರೆದವರ ವಿರುದ್ದ ಇದೀಗ ಆಕ್ರೋಶ ವ್ಯಕ್ತವಾಗುತ್ತಿದೆ.



ಏನಿದು ಘಟನೆ?

ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೆ ನಡೆಯುತ್ತಿದೆ. ಇದರ ಅಂಗವಾಗಿ ಮಹಾರಥೋತ್ಸವ ಏರ್ಪಡಿಸಲಾಗಿತ್ತು. ಈ ವೇಳೆ ಕೆಲವರು ಡ್ರೋನ್‌ ಹಾರಿಸಿ ಚಿತ್ರೀಕರಣ ನಡೆಸುತ್ತಿದ್ದರು. ಈ ವೇಳೆ ರಥ ಏರುತ್ತಿದ್ದ ಪಂಚಲಿಂಗೇಶ್ವರ ಸ್ವಾಮಿಯ ಉತ್ಸವ ಮೂರ್ತಿ ಮತ್ತು ಅರ್ಚಕರಿಗೆ ಬಂದು ಡ್ರೋನ್ ಬಡಿದಿದೆ.

ಮೊದಲು ಉತ್ಸವ ಮೂರ್ತಿಗೆ ಬಡಿದ ಡ್ರೋನ್‌ ಬಳಿಕ ಸಹಾಯಕ ಅರ್ಚಕರ ಮೇಲೆ ಬಿದ್ದಿದೆ. ತಕ್ಷಣ ಎಚ್ಚೆತ್ತ ಅರ್ಚಕರು ಡ್ರೋನ್ ಅನ್ನು ಹೊರಗೆಸೆದಿದ್ದಾರೆ. ಡ್ರೋನ್ ಆಪರೇಟರ್ ಹುಚ್ಚಾಟದ ವಿರುದ್ದ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಯಂತ್ರಣ ತಪ್ಪಿ ಡ್ರೋನ್‌ ಉತ್ಸವ ಮೂರ್ತಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅದ್ಧೂರಿಯಾಗಿ ನೆರವೇರಿದ ಕೊಪ್ಪಳ ಗವಿ ಸಿದ್ದೇಶ್ವರ ಮಹಾರಥೋತ್ಸವ

ಕೊಪ್ಪಳ: ದಕ್ಷಿಣ ಭಾರತದ ಕುಂಭ ಮೇಳವೆಂದೇ ಪ್ರಸಿದ್ಧಿ ಪಡೆದಿರುವ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಜಾತ್ರೆ ಅಂಗವಾಗಿ ಗವಿಸಿದ್ದೇಶ್ವರ ಮಹಾರಥೋತ್ಸವವು ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಇತ್ತೀಚೆಗೆ ಅದ್ಧೂರಿಯಾಗಿ ನೆರವೇರಿತು.

ಶ್ರೀ ಗವಿಸಿದ್ದೇಶ್ವರ ಜಾತ್ರೆಗೆ ಕಳೆದ 3 ತಿಂಗಳಿನಿಂದಲೂ ನಿರಂತರ ತಯಾರಿ ನಡೆಯುತ್ತಿತ್ತು. ಜ. 15ರಂದು ಬೆಳಗ್ಗೆಯಿಂದಲೇ ಗವಿಮಠದ ಮಹಾರಥೋತ್ಸವ ಅಂಗವಾಗಿ ಕರ್ತೃ ಗದ್ದುಗೆಗೆ ಅಲಂಕಾರ, ವಿಶೇಷ ಪೂಜೆಗಳು ಬೆಳಗ್ಗೆಯಿಂದಲೇ ನೆರವೇರಿದವು. ಸಂಜೆ 5ಕ್ಕೆ ರಥೋತ್ಸವ ನಿಗದಿಯಾಗಿದ್ದರಿಂದ ಬೆಳಗ್ಗೆಯಿಂದಲೇ ದೂರದ ಊರುಗಳಿಂದ ಮಕ್ಕಳು, ಹಿರಿಯರೊಂದಿಗೆ ಕುಟುಂಬದ ಸದಸ್ಯರು ಆಗಮಿಸಿದ್ದರು. ಸಂಜೆ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಸೇರಿ ವಿವಿಧ ಮಠಾಧೀಶರು, ಸ್ವಾಮೀಜಿಗಳು, ಗಣ್ಯರ ಸಮ್ಮುಖದಲ್ಲಿ ರಥವನ್ನು ಎಳೆಯಲಾಯಿತು. ಈ ವೇಳೆ ಹಣ್ಣು, ಧವನ ಎಸೆದು ಜನರು ಭಕ್ತಿ ಭಾವ ಮೆರೆದರು.

ಈ ಸುದ್ದಿಯನ್ನೂ ಓದಿ | Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು

ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ್ದರಿಂದ ಈ ಬಾರಿಯೂ ಕೊಪ್ಪಳ ಪೊಲೀಸರು ಎಲ್ಲಾ ಭಾಗಗಳಲ್ಲೂ ವಾಹನ ನಿಲುಗಡೆಗೆ ಅವಕಾಶ ಮಾಡಿಕೊಟ್ಟು, ನಗರದಲ್ಲಿ ಸಂಚಾರ ದಟ್ಟಣೆ ಆಗದಂತೆ ನೋಡಿಕೊಂಡರು. ವಾಹನ ಸವಾರರು ನಗರದೊಳಗೆ ಬಾರದಂತೆ ಅಲ್ಲಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿತ್ತು. ಅಲ್ಲದೇ ಭದ್ರತೆಗಾಗಿ ಸಾವಿರಾರು ಪೊಲೀಸರು ನಿಯೋಜನೆಗೊಂಡಿದ್ದರು.

Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?