ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Dharmasthala case: ನದಿಯಲ್ಲಿ ಹೆಣಗಳಿಂದ ಚಿನ್ನ ಕದಿಯುತ್ತಿದ್ದ ʻಚಿನ್ನಯ್ಯʼ; ಮುಸುಕುಧಾರಿಯ ಮುಖವಾಡ ಬಯಲು!

Mask Man Chinnaiah: ದೂರುದಾರ ಮೂಲತಃ ಮಂಡ್ಯ ಜಿಲ್ಲೆಯವನಾಗಿದ್ದು, ಸಿ.ಎನ್ ಚಿನ್ನಯ್ಯ ಅಲಿಯಾಸ್ ಚಿನ್ನಪ್ಪ ಎಂದು ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಸದ್ಯ ಚಿನ್ನಯ್ಯನನ್ನು 10 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ (police custody) ನೀಡಿ ಬೆಳ್ತಂಗಡಿ ನ್ಯಾಯಾಲಯ ಆದೇಶಿಸಿದೆ.

ನದಿಯಲ್ಲಿ ಹೆಣಗಳಿಂದ ಚಿನ್ನ ಕದಿಯುತ್ತಿದ್ದ ಚಿನ್ನಯ್ಯ!

Prabhakara R Prabhakara R Aug 23, 2025 4:46 PM

ಮಂಗಳೂರು: ಧರ್ಮಸ್ಥಳದಲ್ಲಿ ಹಲವು ಶವಗಳನ್ನು ಹೂತಿಟ್ಟಿದ್ದೇನೆ ಎಂದು ದೂರು ನೀಡಿದ್ದ ಮುಸುಕುಧಾರಿಯನ್ನು ವಿಶೇಷ ತನಿಖಾ ತಂಡ ಬಂಧಿಸಿ, ಆತನ ಹೆಸರು, ಊರು, ಹಿನ್ನೆಲೆಯನ್ನು ಬಹಿರಂಗಪಡಿಸಿದೆ. ನೂರಾರು ಶವಗಳನ್ನು ತಾನೇ ಹೂತಿರುವುದಾಗಿ ಮತ್ತು ಹೂಳುವಾಗ ಶವಗಳು ಕೊಲೆ ಮತ್ತು ಅತ್ಯಾಚಾರ ಮಾಡಿದ್ದ ಸ್ಥಿತಿಯಲ್ಲಿರುತ್ತಿದ್ದವು ಎಂದು ಹೇಳಿದ್ದ ಮಾಸ್ಕ್‌ ಮ್ಯಾನ್‌ ಮುಖವಾಡವನ್ನು ಎಸ್‌ಐಟಿ ಅಧಿಕಾರಿಗಳು ಕಳಚಿದ್ದಾರೆ.

ದೂರುದಾರ ಮೂಲತಃ ಮಂಡ್ಯ ಜಿಲ್ಲೆಯವನಾಗಿದ್ದು, ಸಿ.ಎನ್ ಚಿನ್ನಯ್ಯ ಅಲಿಯಾಸ್ ಚಿನ್ನಪ್ಪ ಅಲಿಯಾಸ್ ಚಿನ್ನಯ್ಯ ಅಲಿಯಾಸ್ ಚೆನ್ನಯ್ಯ ಎಂದು ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಮುಸುಕುಧಾರಿಗೆ ಈ ಹೆಸರು ಬರೋದಕ್ಕೂ ಒಂದು ಕಾರಣವಿದೆ. ಈತ ನದಿಯಲ್ಲಿ ಮುಳುಗಿದ ಹೆಣಗಳಿಂದ ಈತ ಚಿನ್ನ ಕದಿಯುತ್ತಿದ್ದನಂತೆ. ಮಹಿಳೆಯರ ಮೂಗುತಿ, ಕಿವಿಯೋಲೆ, ಸರಗಳನ್ನೂ ಕದಿಯುತ್ತಿದ್ದನಂತೆ. ಈ ಕಾರಣದಿಂದಾಗಿಗೇ ಚಿನ್ನಪ್ಪ, ಚಿನ್ನಯ್ಯ ಎಂದು ಕರೆಯುತ್ತಿದ್ದರಂತೆ.

ಸದ್ಯ ಚಿನ್ನಯ್ಯನನ್ನು 10 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ (police custody) ನೀಡಿ ಬೆಳ್ತಂಗಡಿ ನ್ಯಾಯಾಲಯ ಆದೇಶಿಸಿದೆ. ನಿನ್ನೆ ರಾತ್ರಿ ಆತನನ್ನು ಸತತ ವಿಚಾರಣೆ ನಡೆಸಿದ್ದ ಎಸ್‌ಐಟಿ (SIT) ಪೊಲೀಸರು ಇಂದು ಬೆಳಗ್ಗೆ ಚಿನ್ನಯ್ಯನನ್ನು ಬಂಧಿಸಿದ್ದರು. ಬಂಧನ ಬಳಿಕ ವೈದ್ಯಕೀಯ ಪರೀಕ್ಷೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಧರ್ಮಸ್ಥಳ ದೇವಸ್ಥಾನದ ವಿರುದ್ಧ ನಡೆಸಿದ ಷಡ್ಯಂತ್ರದಲ್ಲಿ ಈತ ಭಾಗಿಯಾಗಿರುವ ಕಾರಣ ಎಸ್‌ಐಟಿ ಪೊಲೀಸರು ವಶಕ್ಕೆ ಕೇಳಿದ್ದರು.

ಪೊಲೀಸರ ಮನವಿಯನ್ನು ಪುರಸ್ಕರಿಸಿದ ಕೋರ್ಟ್‌ 10 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶ ಪ್ರಕಟಿಸಿದೆ. ಈ ಪ್ರಕರಣದಲ್ಲಿ ಇನ್ನಷ್ಟು ಮಂದಿ ಷಡ್ಯಂತ್ರದಲ್ಲಿ ಭಾಗಿಯಾಗಿದ್ದಾರೆ. ತಮಿಳುನಾಡಿನಿಂದ ಚಿನ್ನಯ್ಯನನ್ನು ಕರೆತಂದು ಧರ್ಮಸ್ಥಳದ ಬಗ್ಗೆ ಕಥೆ ಕಟ್ಟಿ ಅದನ್ನು ಜಾರಿಗೆ ತರಲು ಈತನನ್ನು ಮುಂದು ಮಾಡಲಾಗಿದೆ. ಈತನಿಗೆ ಹಣದ ನೆರವನ್ನೂ ಕೆಲವರು ಒದಗಿಸಿದ್ದಾರೆ. ಈ ಪ್ರಕರಣದ ಸೂತ್ರಧಾರಿಗಳೇ ಬೇರೆ ಇದ್ದಾರೆ. ಅವರ ಮಾಹಿತಿ ಪಡೆಯಲು ಚಿನ್ನಯ್ಯ ಪೊಲೀಸ್‌ ಕಸ್ಟಡಿಗೆ ಬೇಕಾಗಿದ್ದಾನೆ ಎಂದು ಎಸ್‌ಐಟಿ ತಿಳಿಸಿತ್ತು.

ಈ ಸುದ್ದಿಯನ್ನೂ ಓದಿ | Dharmasthala Case: ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಬಂಧನ; ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ

ಇದರೊಂದಿಗೆ ಗಿರೀಶ್‌ ಮಟ್ಟೆಣವರ್‌ಗೆ ಢವಢವ ಶರುವಾಗಿದೆ. ತನ್ನನ್ನು ಧರ್ಮಸ್ಥಳಕ್ಕೆ ಕರೆತರುವಲ್ಲಿ ಗಿರೀಶ್‌ ಪಾತ್ರವಿದೆ ಎಂದು ಚಿನ್ನಯ್ಯ ತಿಳಿಸಿದ್ದಾನೆ ಎಂದು ತಿಳಿದುಬಂದಿದೆ.