Road Accident: ಚನ್ನಗಿರಿ ಬಳಿ ಭದ್ರಾ ಕಾಲುವೆಗೆ ಕಾರು ಉರುಳಿ ಇಬ್ಬರು ಸಾವು
Davanagere news: ದಾವಣಗೆರೆ ಮೂಲದ 6 ಜನ ಮಂಗಳೂರು ಕಡೆ ಪ್ರವಾಸಕ್ಕೆ ಹೋಗಿದ್ದರು. ಪ್ರವಾಸ ಮುಗಿಸಿ ವಾಪಸ್ ಬರುವಾಗ ಚಾಲಕ ನಿದ್ರೆ ಮಂಪರಿನಲ್ಲಿದ್ದ ಪರಿಣಾಮ ನಿಯಂತ್ರಣ ತಪ್ಪಿ ಕಾರು ಭದ್ರಾ ಕಾಲುವೆಗೆ ಬಿದ್ದಿದೆ. ಈ ವೇಳೆ ಕಾರಿನಲ್ಲಿದ್ದ ಇಬ್ಬರು ಸಾವಿಗೀಡಾಗಿದ್ದು, ನಾಲ್ಕು ಮಂದಿ ಈಜಿ ದಡ ಸೇರಿದ್ದಾರೆ. ಸ್ಥಳಕ್ಕೆ ಸಂತೆಬೆನ್ನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಭದ್ರಾ ಕಾಲುವೆಗೆ ಕಾರು ಉರುಳಿ ಇಬ್ಬರ ಸಾವು -
ದಾವಣಗೆರೆ : ರಾಜ್ಯದಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಭದ್ರಾ ಕಾಲುವೆಗೆ (Bhadra canal) ಕಾರು ಬಿದ್ದು (Road Accident) ಇಬ್ಬರು ಸಾವಿಗೆ (Death) ಈಡಾಗಿದ್ದಾರೆ. ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ದುರ್ಘಟನೆ ದಾವಣಗೆರೆ (Davanagere news) ಜಿಲ್ಲೆಯ ಚನ್ನಗಿರಿ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ. ಹೊಸೂರು ಬಳಿಯ ಭದ್ರಾ ಮುಖ್ಯ ಕಾಲುವೆಯಲ್ಲಿ ಕಾರು ನಾಲೆಗೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಮಲ್ಲಿಕಾರ್ಜುನ (29) ಹಾಗೂ ಸಿದ್ದೇಶ್ (38) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ದಾವಣಗೆರೆ ಮೂಲದ 6 ಜನ ಮಂಗಳೂರು ಕಡೆ ಪ್ರವಾಸಕ್ಕೆ ಹೋಗಿದ್ದರು. ಪ್ರವಾಸ ಮುಗಿಸಿ ವಾಪಸ್ ಬರುವಾಗ ಚಾಲಕ ನಿದ್ರೆ ಮಂಪರಿನಲ್ಲಿದ್ದ ಪರಿಣಾಮ ನಿಯಂತ್ರಣ ತಪ್ಪಿ ಕಾರು ಭದ್ರಾ ಕಾಲುವೆಗೆ ಬಿದ್ದಿದೆ. ಈ ವೇಳೆ ಕಾರಿನಲ್ಲಿದ್ದ ಇಬ್ಬರು ಸಾವಿಗೀಡಾಗಿದ್ದು, ನಾಲ್ಕು ಮಂದಿ ಈಜಿ ದಡ ಸೇರಿದ್ದಾರೆ. ಸ್ಥಳಕ್ಕೆ ಸಂತೆಬೆನ್ನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಿಮೆಂಟ್ ಮಿಕ್ಸರ್ ಲಾರಿ ಹರಿದು ಮಗು ಸಾವು
ಬೆಂಗಳೂರು: ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ (Wall Collapse) ಬಲಿಯಾಗಿರುವ ಘಟನೆ ಕುಂದಲಹಳ್ಳಿ ಕಾಲೋನಿಯಲ್ಲಿ ನಡೆದಿದೆ. ನವಂಬರ್ 7 ರಂದು ಸಂಜೆ 3:11 ಸುಮಾರಿಗೆ ಈ ಘಟನೆ ನಡೆದಿದ್ದು, ಸಿಮೆಂಟ್ ಮಿಕ್ಸರ್ ಲಾರಿ 1 ವರ್ಷ 8 ತಿಂಗಳ ಮುದ್ದಾದ ಮಗು ಪ್ರಣವ್ನ ಬಲಿ ಪಡೆದಿದೆ. ಹೊಸ ಮನೆಯೊಂದರ ಮೋಲ್ಡಿಂಗ್ ಕೆಲಸ ಮುಗಿಸಿ ಬರ್ತಿದ್ದ ಸಿಮೆಂಟ್ ಮಿಕ್ಸರ್ ಲಾರಿ, ಪ್ರಣವ್ ಮನೆಯ ರಸ್ತೆಯಲ್ಲೇ ಹಾದು ಹೋಗ್ತಿತ್ತು. ಈ ವೇಳೆ (Wall Collapse) ಲಾರಿಯು ಮೇಲಿದ್ದ ವಿದ್ಯುತ್ ತಂತಿಗೆ ತಾಗಿದೆ. ಇದನ್ನ ಅರಿಯದ ಚಾಲಕ ತಂತಿಯನ್ನು ಎಳೆದುಕೊಂಡೆ ಹೋಗಿದ್ದಾನೆ.
ಇದನ್ನೂ ಓದಿ: Uttara Kannada News: ಕಟ್ಟಡ ಕಾಮಗಾರಿ ವೇಳೆ ಲಿಫ್ಟ್ ಕುಸಿದು ಇಬ್ಬರು ಕಾರ್ಮಿಕರ ಸಾವು
ವೈರಿಂಗ್ ಕಂಬ ಕಿತ್ತು ಬಂದು ಮನೆಯ ಗೋಡೆ ಮೇಲೆ ಕುಸಿದಿದೆ. ಈ ವೇಳೆ ಮನೆ ಕಾಂಪೌಂಡ್ನಲ್ಲಿ ಆಟ ಆಡ್ತಿದ್ದ ಏನೂ ಅರಿಯದ ಮಗು ಮೇಲೆ ಮನೆ ಗೋಡೆ ಅವಶೇಷ ಬಿದ್ದಿದೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಪ್ರಣವ್ನನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಘಟನೆಗೆ ಸಂಬಂಧಿಸಿದಂತೆ ಹೆಚ್ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಹೋಗಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಆದ್ರೆ ಈ ಘಟನೆ ಬಳಿಕ ಕಾಂಕ್ರೀಟ್ ಮಿಕ್ಸರ್ ಚಾಲಕ ಪರಾರಿಯಾಗಿದ್ದಾನೆ.
ಸಿದ್ದಪ್ಪ ಹಾಗೂ ಲಾವಣ್ಯ ದಂಪತಿಯ ಮಗು ಪ್ರಣವ್ ಸಾವನ್ನಪ್ಪಿದ ಬಾಲಕ. ಮಗನನ್ನು ಕಳೆದುಕೊಂಡ ಪೋಷಕರು ಗೋಳಿಡುತ್ತಿದ್ದಾರೆ. ಸದ್ಯ ಬೌರಿಂಗ್ ಆಸ್ಪತ್ರೆ ಶವಾಗಾರಕ್ಕೆ ಮೃತದೇಹವನ್ನ ಶಿಫ್ಟ್ ಮಾಡಲಾಗಿದೆ.