ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CET 2025: ಜನಿವಾರಕ್ಕೆ ಕತ್ತರಿ; ಸಿಇಟಿ ವಂಚಿತ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಲು ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಆಗ್ರಹ

CET 2025: ಸಿಇಟಿ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡಿ, ವಿಚಾರಣೆ ಕೈಗೊಳ್ಳಬೇಕು. ಹಾಗೆಯೇ ಪರೀಕ್ಷೆಯಿಂದ ವಂಚಿತನಾಗಿರುವ ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ಬರೆಯಲು ಸೂಕ್ತ ಅವಕಾಶ ಮಾಡಿಕೊಡಬೇಕು ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌ ಅವರಿಗೆ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧ ಮಂಡಳಿ ಮನವಿ ಮಾಡಿದೆ.

ಜನಿವಾರಕ್ಕೆ ಕತ್ತರಿ; ಅಧಿಕಾರಿಗಳ ಅಮಾನತಿಗೆ ಆಗ್ರಹ

Profile Prabhakara R Apr 19, 2025 3:38 PM

ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ (CET 2025) ಬ್ರಾಹ್ಮಣ ಸಮುದಾಯದ ಕೆಲವು ವಿದ್ಯಾರ್ಥಿಗಳಿಗೆ ಒಂದೆರಡು ಕಡೆಗಳಲ್ಲಿ ಪವಿತ್ರ ಜನಿವಾರ ತೆಗೆಸಿರುವುದು ಬ್ರಾಹ್ಮಣ ಸಮಾಜಕ್ಕೆ ಆಘಾತ ಉಂಟು ಮಾಡಿದೆ. ಇದು ರಾಜ್ಯದ ಒಂದು ಸಣ್ಣ ಸಮುದಾಯದ ಮೇಲೆ ನಡೆಸಲಾದ ದೌರ್ಜನ್ಯ ಎಂದು ಜನತೆ ಪ್ರತಿಭಟಿಸುತ್ತಿದ್ದಾರೆ. ಹೀಗಾಗಿ ಇದಕ್ಕೆ ಸಂಬಂಧಿಸಿದವರನ್ನು ಸೇವೆಯಿಂದ ಅಮಾನತು ಮಾಡಿ, ವಿಚಾರಣೆ ಕೈಗೊಳ್ಳಬೇಕು. ಹಾಗೆಯೇ ಪರೀಕ್ಷೆಯಿಂದ ವಂಚಿತನಾಗಿರುವ ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ಬರೆಯಲು ಸೂಕ್ತ ಅವಕಾಶ ಮಾಡಿಕೊಡಬೇಕು ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌ ಅವರಿಗೆ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧ ಮಂಡಳಿ ಅಧ್ಯಕ್ಷ ಅಸಗೋಡು ಜಯಸಿಂಹ ಮನವಿ ಮಾಡಿದ್ದಾರೆ.

ಈ ಬಗ್ಗೆ ಉನ್ನತ ಶಿಕ್ಷಣ ಸಚಿವರಿಗೆ ಪತ್ರ ಬರೆದಿರುವ ಅಸಗೋಡು ಜಯಸಿಂಹ ಅವರು, ಇಂತಹ ಘಟನೆಗಳು ಸುಸಂಸ್ಕೃತ ಮತ್ತು ನಾಗರಿಕ ಸಮಾಜದಲ್ಲಿ ನಡೆಯಬಾರದು. ಇದಕ್ಕಾಗಿ ನಾವೆಲ್ಲರೂ ತಲೆ ತಗ್ಗಿಸುವ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಸಂಬಂಧಿಸಿದವರನ್ನು ಸೇವೆಯಿಂದ ಅಮಾನತ್ತು ಮಾಡಬೇಕು ಹಾಗೂ ಪರೀಕ್ಷೆಯಿಂದ ವಂಚಿತನಾಗಿರುವ ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು. ಈಗಾಗಲೇ ತಾವು ಈ ವಿಷಯದಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆಯನ್ನು ನೀಡಿರುತ್ತೀರಿ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ | CET 2025: ಶಿವಮೊಗ್ಗದಲ್ಲಿ ಜನಿವಾರ ವಿವಾದಕ್ಕೆ ಟ್ವಿಸ್ಟ್‌; ಅಧಿಕಾರಿ ವಿರುದ್ಧ ಕಂಪ್ಲೇಂಟ್‌, ಈವರೆಗೆ ಏನೇನು ಬೆಳವಣಿಗೆ ಆಗಿದೆ?

ಪ್ರಕರಣದಲ್ಲಿ ವಿಳಂಬ ನೀತಿಗೆ ಅವಕಾಶ ಕೊಡದೆ ಸಾರ್ವಜನಿಕರೆಲ್ಲರಿಗೂ ತಿಳಿದಿರುವ ಈ ವಿಚಾರದಲ್ಲಿ ಸಂಬಂಧಿಸಿದವರ ವಿರುದ್ಧ ಮೊದಲು ಕ್ರಮ ಕೈಗೊಂಡು, ಆನಂತರ ಇಲಾಖಾ ವಿಚಾರಣೆಯನ್ನು ನಡೆಸುವುದು ಸೂಕ್ತ. ಇದರಿಂದ ಇನ್ನು ಮುಂದೆ ಸರ್ಕಾರಿ ನೌಕರರು ಇಂತಹ ವಿಚಾರಗಳಲ್ಲಿ ಸೂಕ್ಷ್ಮವಾಗಿ ನಡೆದುಕೊಳ್ಳುವಂತಾಗುತ್ತದೆ ಎಂದು ತಿಳಿಸಿದ್ದಾರೆ.