Hit And Run Case: ಧಾರವಾಡದಲ್ಲಿ ಹಿಟ್ ಆ್ಯಂಡ್ ರನ್ ಕೇಸ್: ASI ಸ್ಥಳದಲ್ಲೇ ಸಾವು
ಧಾರವಾಡದಲ್ಲಿ ಹಿಟ್ ಆಂಡ್ ರನ್ ಕೇಸ್ ನಡೆದಿದ್ದು, ಪೊಲೀಸ್ ಅಧಿಕಾರಿಯೊಬ್ಬರು ಬಲಿಯಾಗಿದ್ದಾರೆ. ಮೃತರ ಅಧಿಕಾರಿಯನ್ನು ASI ಎಲ್ಲಪ್ಪ ಕುಂಬಾರ್ ಎಂದು ಗುರುತಿಸಲಾಗಿದೆ. ಮೃತ ASI ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಧಾರವಾಡದಿಂದ ಹುಬ್ಬಳ್ಳಿ ಕಡೆಗೆ ಬೈಕಿನಲ್ಲಿ ತೆರಳುವಾಗ ಅಪಘಾತ ಸಂಭವಿಸಿದೆ.


ಹುಬ್ಬಳ್ಳಿ: ಧಾರವಾಡದಲ್ಲಿ ಹಿಟ್ ಆಂಡ್ ರನ್ ಕೇಸ್ (Hit And Run Case) ನಡೆದಿದ್ದು, ಪೊಲೀಸ್ ಅಧಿಕಾರಿಯೊಬ್ಬರು ಬಲಿಯಾಗಿದ್ದಾರೆ. ಮೃತರ ಅಧಿಕಾರಿಯನ್ನು ASI ಎಲ್ಲಪ್ಪ ಕುಂಬಾರ್ ಎಂದು ಗುರುತಿಸಲಾಗಿದೆ. ಮೃತ ASI ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಧಾರವಾಡದಿಂದ ಹುಬ್ಬಳ್ಳಿ ಕಡೆಗೆ ಬೈಕಿನಲ್ಲಿ ತೆರಳುವಾಗ ಅಪಘಾತ ಸಂಭವಿಸಿದೆ. ಪರಿಣಾಮ ಪೊಲೀಸ್ ಅಧಿಕಾರಿಯ ತಲೆಗೆ ತೀವೃವಾದ ಪೆಟ್ಟು ಬಿದ್ದಿದೆ. ತೀವೃ ರಕ್ತಸ್ರಾವದಿಂದ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ವಿಷಯ ತಿಳಿದು ಧಾರವಾಡ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ಮೇಲ್ನೋಟಕ್ಕೆಇದು ಹಿಟ್ ಆಂಡ್ ರನ್ ಪ್ರಕರಣವಾಗಿದ್ದು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೇ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್ ಬ್ಯಾಕೋಡ್ ಅವರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ,ಪರಿಶೀಲನೆ ನಡೆಸಿದ್ದಾರೆ.
ಚಾಕು ಇರಿತ
ಹಣಕಾಸಿನ ವಿಚಾರಕ್ಕೆ ಗಲಾಟೆಯಾಗಿ ಯುವಕನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಅಂಗನವಾಡಿ ಕೇಂದ್ರದಲ್ಲಿ ಚಾಕುವಿನಿಂದ ಇರಿದು ಯಾಸೀರ್ ಜಾತಗಾರ (24) ಹತ್ಯೆ ಮಾಡಲಾಗಿದೆ. ಯಾಸೀರ್ ಕೊಲೆಗೈದು ಪೊಲೀಸರಿಗೆ ಆರೋಪಿ ರೋಹಿತ್ ಶರಣಾಗಿದ್ದಾನೆ. ಸ್ಥಳಕ್ಕೆ ಎಸ್ ಪಿ ಭೀಮಾಶಂಕರ್ ಗುಳೇದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸುದ್ದಿಯನ್ನೂ ಓದಿ: knife attack: ರೈಲ್ವೆ ನಿಲ್ದಾಣದಲ್ಲಿ ಚಾಕು ಇರಿತ; 18 ಮಂದಿಗೆ ಗಂಭೀರ ಗಾಯ
ಇತ್ತೀಚೆಗೆ ಬೆಳಗಾವಿಯ ತಾಲೂಕಿನ ಪಂಚಬಾಳೇಕುಂದ್ರಿ ಗ್ರಾಮದಿಂದ ಸಿಬಿಟಿಗೆ ಹೋಗುತ್ತಿದ್ದ ಬಸ್ನಲ್ಲಿ ಸೀಟ್ಗಾಗಿ ಯುವಕರ ನಡುವೆ ಜಗಳ ನಡೆದು ಚಾಕು ಇರಿತ ಸಂಭವಿಸಿರುವಂತಹ ಘಟನೆ ನಡೆದಿತ್ತು. ಸನದಿ(20) ಎಂಬ ಯುವಕ ಎದೆ ಭಾಗಕ್ಕೆ ಯುವಕರ ಗ್ಯಾಂಗ್ ಒಂದು ಚಾಕು ಇರಿದು ಪರಾರಿ ಆಗಿದೆ. ಬೆಳಗಾವಿ ಬಿಮ್ಸ್ ಆಸ್ಪತ್ರೆ ಐಸಿಯುನಲ್ಲಿ ಮಜ್ಜುಗೆ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್ ಭೇಟಿ ನೀಡಿ ಪರಿಶೀಲನೆ ಮಾಡಿದರು. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.