ವಿದೇಶ ಫ್ಯಾಷನ್‌ ಲೋಕ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್‌ ಹೌಸ್‌ ಸಂಪಾದಕೀಯ

DK Shivakumar: ಖರ್ಗೆ ಮಾತಿಗೆ ಬದ್ಧ: ಡಿ.ಕೆ.ಶಿವಕುಮಾರ್

ತಾವು ಸಿಎಂ ಆಗುವುದನ್ನು ಯಾರಿಂದಲೂ ತಪ್ಪಿಸಲು ಆಗುವುದಿಲ್ಲ ಎಂಬ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌, ʼʼವೀರಪ್ಪ ಮೊಯ್ಲಿ ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ನಾನು ಅದರ ಬಗ್ಗೆ ಚರ್ಚೆ ಮಾಡುವುದಿಲ್ಲ. ಅದರ ಅಗತ್ಯವಿಲ್ಲʼʼ ಎಂದು ತಿಳಿಸಿದ್ದಾರೆ.

ಖರ್ಗೆ ಮಾತಿಗೆ ಬದ್ಧ ಎಂದ ಡಿ.ಕೆ.ಶಿವಕುಮಾರ್

ಡಿಸಿಎಂ ಡಿ.ಕೆ. ಶಿವಕುಮಾರ್.

Profile Siddalinga Swamy Mar 3, 2025 5:32 PM

ಬೆಂಗಳೂರು: ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆ ಮಾಡದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಸೂಚನೆ ನೀಡಿದ್ದು, ನಾನು ಅವರ ಮಾತಿಗೆ ಬದ್ಧನಾಗಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಅವರು ಪ್ರತಿಕ್ರಿಯೆ ನೀಡಿದರು. ಡಿ.ಕೆ. ಶಿವಕುಮಾರ್ ಸಿಎಂ ಆಗುವುದನ್ನು ಯಾರಿಂದಲೂ ತಪ್ಪಿಸಲು ಆಗುವುದಿಲ್ಲ ಎಂಬ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, ʼವೀರಪ್ಪ ಮೊಯ್ಲಿ ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ನಾನು ಅದರ ಬಗ್ಗೆ ಚರ್ಚೆ ಮಾಡುವುದಿಲ್ಲ. ಅದರ ಅಗತ್ಯವಿಲ್ಲʼ ಎಂದು ಪ್ರತಿಕ್ರಿಯಿಸಿದರು.

ಈ ಸುದ್ದಿಯನ್ನೂ ಓದಿ | Budget session: ರಾಜ್ಯದಲ್ಲಿ ಅಭಿವೃದ್ಧಿ ವೇಗ ಚುರುಕು; ಗ್ಯಾರಂಟಿ ಯೋಜನೆಗಳನ್ನು ಹಾಡಿ ಹೊಗಳಿದ ರಾಜ್ಯಪಾಲ ಗೆಹ್ಲೋಟ್‌

ಭಾರತ, ಬೆಂಗಳೂರು ಜಾಗತಿಕವಾಗಿ ಬೆಳೆಯಲು ಕೊಡುಗೆ ನೀಡಿದವರು ಮನಮೋಹನ್ ಸಿಂಗ್: ಡಿ.ಕೆ.ಶಿವಕುಮಾರ್

ಬೆಂಗಳೂರು: ದೂರದೃಷ್ಟಿಯ ನಾಯಕ, ಆರ್ಥಿಕ ನೀತಿಗಳ ಮೂಲಕ ಜನಸಾಮಾನ್ಯರ ಹಾಗೂ ದೇಶ ಹಾಗೂ ಬೆಂಗಳೂರು ಜಾಗತಿಕವಾಗಿ ಬೆಳೆಯಲು, ಗುರುತಿಸಿಕೊಳ್ಳಲು ಕೊಡುಗೆ ನೀಡಿದ ವ್ಯಕ್ತಿ ಮನಮೋಹನ್ ಸಿಂಗ್ ಅವರು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ವಿಧಾನಸಭೆ ಬಜೆಟ್ ಅಧಿವೇಶನದ ಮೊದಲನೇ ದಿನದ ಸಂತಾಪ ಸೂಚನೆ ವೇಳೆ ಅವರು ಸೋಮವಾರ ಮಾತನಾಡಿದರು.

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ, ನೆಲಮಂಗಲ, ವಿಮಾನ ನಿಲ್ದಾಣ, ಕೋಲಾರ ಕಡೆಯ ಮೇಲ್ಸೆತುವೆಗೆ ಅನುದಾನ ನೀಡಿದರು. ನರ್ಮ್ ಯೋಜನೆ ಮುಖಾಂತರ ಬೆಂಗಳೂರಿನ ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡಿದರು. ಬೆಂಗಳೂರಿನ ಬಗ್ಗೆ ಅಪಾರವಾದ ವಿಶ್ವಾಸವನ್ನು ಹೊಂದಿದ್ದವರು ಡಾ.ಸಿಂಗ್. ಹೃದಯ ಶ್ರೀಮಂತಿಕೆಯಿಂದ ಹಣದ ಸಹಾಯ ಮಾಡಿದ್ದಾರೆ. ಇಲ್ಲಿ ಆದಾಯವೂ ಸಹ ಅದೇ ರೀತಿ ಮರಳಿ ಬರುತ್ತಿತ್ತು. ಈಗ ಐಟಿ- ಬಿಟಿ ರಫ್ತು ಮೂಲಕ ಶೇ. 39ರಷ್ಟು ಆದಾಯ ದೇಶಕ್ಕೆ ಬೆಂಗಳೂರಿನಿಂದ ಬರುತ್ತಿದೆ. ಇಂತಹ ದೂರದೃಷ್ಟಿಯಿಂದ ಸಿಂಗ್ ಅವರು ಬೆಂಗಳೂರಿನ ಅಭಿವೃದ್ಧಿಗೆ ಕೊಡುಗೆ ನೀಡಿದ್ದರು ಎಂದರು.

ಮನಮೋಹನ್ ಸಿಂಗ್ ಅವರ ಹೆಸರಿನಲ್ಲಿ ಯೋಜನೆ ಮಾಡುವ ಕುರಿತು ಈ ಹಿಂದೆ ಉನ್ನತ ಶಿಕ್ಷಣ ಸಚಿವರ ಬಳಿ ಚರ್ಚೆ ನಡೆಸಿದ್ದೆ. ಅವರ ಹೆಸರು ಶಾಶ್ವತವಾಗಿ ಉಳಿಯುವಂತಹ ಕೆಲಸವನ್ನು ನಾವು ಮಾಡಬೇಕು ಎನ್ನುವ ಆಲೋಚನೆಯಿದೆ. ಇದಕ್ಕೆ ಯಾವ ರೀತಿ ಹೆಸರನ್ನು ಇಡಬೇಕು ಎಂದು ಮುಂದಿನ ದಿನಗಳಲ್ಲಿ ಆಲೋಚನೆ ಮಾಡಲಾಗುವುದು ಎಂದು ಅವರು ಹೇಳಿದರು.

ಯುಪಿಎ ಅವಧಿಯಲ್ಲಿ ಮಾಡಿರುವ ಕಾರ್ಯಕ್ರಮಗಳನ್ನು, ಜನರ ಬದುಕು, ಕಲ್ಯಾಣಕ್ಕೆ ತೆಗೆದುಕೊಂಡಿರುವ ತೀರ್ಮಾನಗಳನ್ನು ನಾವುಗಳು ಮರೆಯಬಾರದು. ರಾಷ್ಟ್ರ್ರೀಕೃತ ಬ್ಯಾಂಕ್‌ಗಳಲ್ಲಿ ಇದ್ದ ಸುಮಾರು 70 ಸಾವಿರ ಕೋಟಿ ರೂ.ಗೂ ಹೆಚ್ಚಿನ ರೈತರ ಸಾಲವನ್ನು ಮನ್ನಾ ಮಾಡಿದ್ದರು. ದೇಶದಲ್ಲಿ ಯಾರೂ ಕೂಡ ಹಸಿವಿನಿಂದ ಬಳಲಬಾರದು ಎಂದು ಆಹಾರ ಭದ್ರತಾ ಕಾಯ್ದೆ ಎನ್ನುವ ಅತ್ಯುತ್ತಮ ಯೋಜನೆ ತಂದವರು. ನರೇಗಾ ಮೂಲಕ ಪ್ರತಿ ಪಂಚಾಯತ್‌ 3-4 ಕೋಟಿ ರೂ.ಯಷ್ಟು ಅನುದಾನ ಬಳಸಿಕೊಳ್ಳಲು ಅವಕಾಶ ಮಾಡಿಕೊಟ್ಟವರು. ಇದಕ್ಕೂ ಹಿಂದೆ ಒಂದು ಪಂಚಾಯಿತಿಗೆ 1 ಲಕ್ಷ ಅನುದಾನವೂ ಸಿಗುತ್ತಿರಲಿಲ್ಲ. ಜೆ.ಎಚ್.ಪಟೇಲರ ಕಾಲದಲ್ಲಿ 5 ಲಕ್ಷ ರೂ. ಅನುದಾನ ಬರುತ್ತಿತು. ಜತೆಗೆ ನರೇಗಾ ಮೂಲಕ ರೈತನು ತನ್ನ ಸ್ವಂತ ಜಮೀನಿನಲ್ಲಿ ಕೆಲಸ ಮಾಡಿ ಹಣ ಪಡೆಯುವ ಯೋಜನೆ ನರೇಗಾದಲ್ಲಿದೆ ಎಂದು ಹೇಳಿದರು.

ಅರಣ್ಯ ಭೂಮಿ ಹಕ್ಕು ಕಾಯ್ದೆ, ಶಿಕ್ಷಣದ ಹಕ್ಕು, ಮಾಹಿತಿ ಹಕ್ಕು ಕಾನೂನುಗಳನ್ನು ತಂದರು. ಭೂಮಿ ಕಳೆದುಕೊಂಡ ಜನರಿಗೆ ದುಪ್ಪಟ್ಟು ಪರಿಹಾರ ಯೋಜನೆ, 15 ಕಿಮೀ ವ್ಯಾಪ್ತಿಯಿದ್ದರೆ ಮೂರುಪಟ್ಟು, ಗ್ರಾಮೀಣ ಭಾಗದಲ್ಲಿ 4 ಪಟ್ಟು ಪರಿಹಾರ ನೀಡುವ ಯೋಜನೆ ಜಾರಿಗೆ ತಂದರು. ಇದರಿಂದ ಅನೇಕರಿಗೆ ಉಪಯೋಗವಾಗಿದೆ. ಸರ್ಕಾರದಲ್ಲಿ ಕುಳಿತಿರುವ ನಮಗೆ ಈ ಹಣ ಹೊರೆ ಎಂದು ಅನ್ನಿಸಬಹುದು. ರಾಜ್ಯಪಾಲರ ಭಾಷಣದ ವೇಳೆ ಭೂಸ್ವಾಧಿನಕ್ಕೆ ಸುಮಾರು ರೂ. 20 ಸಾವಿರ ಕೋಟಿ ಹಣ ನೀಡಬೇಕು ಎಂದು ಹೇಳಿದರು. ಈ ಕಾಯ್ದೆ ಬರುವ ಮೊದಲು ರೂ. 3-4 ಸಾವಿರ ಕೋಟಿಗೆ ಮುಗಿಯುತಿತ್ತು. ಆದರೆ ಇದರಿಂದ ಭೂಮಿ ಕಳೆದುಕೊಂಡ ರೈತರಿಗೆ ಅನುಕೂಲವಾಗಿದೆ. ಇದು ಮನಮೋಹನ್ ಸಿಂಗ್ ಅವರ ದೂರದೃಷ್ಟಿ ಎಂದು ತಿಳಿಸಿದರು.

ಸಿಎಸ್‌ಆರ್ ಸದ್ಬಳಕೆಗೆ ನಾಂದಿ ಹಾಡಿದವರು ಡಾ. ಸಿಂಗ್

ನಮ್ಮ ರಾಜ್ಯವೊಂದರಲ್ಲಿಯೇ 8,100 ಕೋಟಿ ರೂ. ಸಿಎಸ್‌ಆರ್ ಹಣ ಸಂಗ್ರಹವಾಗುತ್ತಿದೆ. ಈ ಸಿಎಸ್‌ಆರ್ ಯೋಜನೆ ಪರಿಚಯಿಸಿದವರು ಮನಮೋಹನ್ ಸಿಂಗ್ ಅವರು. ಅಂದು ಪ್ರಣಬ್ ಮುಖರ್ಜಿ ಅವರು ಹಣಕಾಸು ಸಚಿವರಾಗಿದ್ದರು. ಆಗ ಕಾರ್ಪೋರೇಟ್ ವಲಯದವರು ಶೇ. 2ರಷ್ಟು ಹಣವನ್ನು ಸಾಮಾಜಿಕ ಕೆಲಸಗಳಿಗೆ ಮೀಸಲಿಡಬೇಕು ಎಂದು ಈ ಯೋಜನೆ ಜಾರಿಗೆ ತಂದರು ಎಂದು ಹೇಳಿದರು.

ಈಗ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಈ ವಿಚಾರವಾಗಿ ನನ್ನ ಅಧ್ಯಕ್ಷತೆಯಲ್ಲಿ ಸಮಿತಿ ಮಾಡಿದೆ. ಇದರ ಮೂಲಕ ಪ್ರತಿ ಗ್ರಾಮೀಣ ಪ್ರದೇಶದಲ್ಲಿ ಕೆಪಿಎಸ್ ಶಾಲೆಗಳನ್ನು ನಿರ್ಮಾಣ ಮಾಡಬೇಕು ಎಂದು ಮುಂದಾಗಿದ್ದೇವೆ. ಈಗಾಗಲೇ ಮೊದಲನೇ ಹಂತದಲ್ಲಿ 500 ಶಾಲೆಗಳ ನಿರ್ಮಾಣಕ್ಕೆ ಹೆಜ್ಜೆಯಿಟ್ಟಿದ್ದೇವೆ. ಒಟ್ಟು 2 ಸಾವಿರ ಶಾಲೆಗಳ ನಿರ್ಮಾಣ ಗುರಿ ನಮ್ಮ ಮುಂದಿದೆ. ಒಂದು ಕ್ಷೇತ್ರಕ್ಕೆ ಕನಿಷ್ಠ 5- 8 ಶಾಲೆಗಳು ನಿರ್ಮಾಣವಾಗುವ ಅವಕಾಶವಿದೆ. ಪ್ರತಿ ಶಾಲೆಗೆ ಕನಿಷ್ಠ ರೂ.7- 10 ಕೋಟಿ ಹಣವನ್ನು ವಿನಿಯೋಗಿಸಲಾಗುವುದು. ಜನರು ಉದ್ಯೋಗ ಅಥವಾ ಶಿಕ್ಷಣಕ್ಕಾಗಿ ಬೆಂಗಳೂರಿಗೆ ಹಾಗೂ ಜಿಲ್ಲಾ ಕೇಂದ್ರಗಳಿಗೆ ಬರುತ್ತಿದ್ದಾರೆ. ಇದನ್ನು ತಪ್ಪಿಸಲು ಈ ಯೋಜನೆ ಸಹಕಾರಿಯಾಗಲಿದೆ. ಇದಕ್ಕೆಲ್ಲಾ ಮನಮೋಹನ್ ಸಿಂಗ್ ಅವರು ಜಾರಿಗೆ ತಂದ ಸಿಎಸ್‌ಆರ್ ಯೋಜನೆ ಕಾರಣ ಎಂದರು.

ಮನಮೋಹನ್ ಸಿಂಗ್ ಅವರು ತಮ್ಮ ಜೀವಿತಾವಧಿಯಲ್ಲಿ ದೊಡ್ಡ ಸಾಧನೆ ಮಾಡಿ ತೆರಳಿದ್ದಾರೆ. 6 ಬಾರಿ ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದವರು. ಜನಾರ್ಧನ ಪೂಜಾರಿ ಅವರು ವಿತ್ತ ಮಂತ್ರಿಗಳಾಗಿದ್ದ ಸಮಯದಲ್ಲಿ ಇವರು ಸರ್ಕಾರಕ್ಕೆ ಆರ್ಥಿಕ ಸಲಹೆಗಾರರಾಗಿ ಕೆಲಸ ಮಾಡುತ್ತಿದ್ದರು. ಅವರು ಪ್ರಧಾನಿಗಳಾಗಿದ್ದ ಸಮಯ, ನಂತರದ ದಿನಗಳಲ್ಲಿಯೂ ಅವರನ್ನು ಭೇಟಿ ಮಾಡಿದ್ದೇನೆ ಎಂದರು.

ಗಾಂಧಿ ಭಾರತ ಕಾರ್ಯಕ್ರಮ, ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ಹಾಗೂ ಸುವರ್ಣಸೌಧ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣವಿತ್ತು. ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿ ಅವರಿಗೆ ಹಾಗೂ ನಮಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಮರಣ ಹೊಂದಿದ್ದಾರೆ ಎನ್ನುವ ಸುದ್ದಿ ಬಂದಿತು. ನಂತರ ಗಾಂಧಿ ಭಾರತ ಕಾರ್ಯಕ್ರಮದ ವೇದಿಕೆಯಲ್ಲಿಯೇ ಮನಮೋಹನ್ ಸಿಂಗ್ ಅವರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು ಎಂದು ಹೇಳಿದರು.