Elephant Attack: ಬೇಲೂರಿನಲ್ಲಿ ಕಾಡಾನೆ ದಾಳಿಗೆ ಯುವಕ ಬಲಿ
ಮೃತ ಅನಿಲ್ ಕೆಲಸ ಮುಗಿಸಿ ಅಣ್ಣಾಮಲೈ ಎಸ್ಟೇಟ್ನಿಂದ ಹೋಗುತ್ತಿದ್ದಾಗ ಕಾಡಾನೆ ದಾಳಿ ಮಾಡಿದೆ. ಸೊಂಡಲಿನಿಂದ ಎತ್ತಿ ಬಿಸಾಕಿ ತುಳಿದು ಸಾಯಿಸಿದೆ. ಸದ್ಯ ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಸಾಂದರ್ಭಿಕ ಚಿತ್ರ

ಹಾಸನ: ಜಿಲ್ಲೆಯಲ್ಲಿ ಕಾಡಾನೆ- ಮಾನವನ ನಡುವಿನ ಸಂಘರ್ಷ ಮುಂದುವರೆದಿದ್ದು, ಇದೀಗ ಕಾಡಾನೆ (Elephant attack) ದಾಳಿಗೆ ಯುವಕ ಬಲಿಯಾಗಿರುವ ಘಟನೆ (Hassan news) ಬೇಲೂರು ತಾಲೂಕಿನ ಬ್ಯಾದನೆ ಗ್ರಾಮದಲ್ಲಿ ನಡೆದಿದೆ. ಕಾಡಾನೆ ದಾಳಿಯಿಂದ ಗುಜನಹಳ್ಳಿಯ ನಿವಾಸಿ ಅನಿಲ್(28) ಮೃತಪಟ್ಟಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮೃತ ಅನಿಲ್ ಕೆಲಸ ಮುಗಿಸಿ ಅಣ್ಣಾಮಲೈ ಎಸ್ಟೇಟ್ನಿಂದ ಹೋಗುತ್ತಿದ್ದಾಗ ಕಾಡಾನೆ ದಾಳಿ ಮಾಡಿದೆ. ಸೊಂಡಲಿನಿಂದ ಎತ್ತಿ ಬಿಸಾಕಿ ತುಳಿದು ಸಾಯಿಸಿದೆ. ಸದ್ಯ ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮೃತನ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಆನೆ ದಾಳಿಗೆ ಮಹಿಳೆ ಸಾವು
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ಕಾಫಿ ತೋಟದಲ್ಲಿ ಕಾಫಿ ಕೊಯ್ಲು ಮಾಡುವ ವೇಳೆ ಕಾಡಾನೆ ಏಕಾಏಕಿ ದಾಳಿ ಮಾಡಿ 55 ವರ್ಷದ ಕಾರ್ಮಿಕ ಮಹಿಳೆ ವಿಜಯನಗರ ಮೂಲದ ವಿನೋದಾ ನಾಯ್ಕ್ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಮುಂಜಾನೆ ಕಾಫಿ ತೋಟದಲ್ಲಿ ಕಾಫಿ ಕೊಯ್ಲು ಮಾಡುವಾಗ ಕಾಡಾನೆ ವಿನೋದಾ ಅವರನ್ನ ಬಲಿ ಪಡೆದಿತ್ತು.
ಕಿರಿಕ್ ಕಾಮಿಯ ಕಾಟಕ್ಕೆ ಅಂಜಿ ವಿವಾಹಿತೆ ಆತ್ಮಹತ್ಯೆ
ಬೆಂಗಳೂರು: ವಿವಾಹಿತೆಯೊಬ್ಬರು ಮೂರನೇ ವ್ಯಕ್ತಿಯ ಕಾಟಕ್ಕೆ ಅಂಜಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಿಳೆಗೆ ಗಂಡ- ಮಗು ಇದ್ದರೂ ಈ ವ್ಯಕ್ತಿ ಅವರನ್ನು ಬಿಟ್ಟು ಬಂದು ತನ್ನ ಜೊತೆಗಿರುವಂತೆ ಪೀಡಿಸುತ್ತಿದ್ದ ಎಂದು ಗೊತ್ತಾಗಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಈ ದಾರುಣ ಘಟನೆ ನಡೆದಿದೆ. ಮೃತ ಮಹಿಳೆಯನ್ನು ನಂದಿನಿ ಎಂದು ಗುರುತಿಸಲಾಗಿದೆ.
ಸೂರ್ಯ ಮತ್ತು ನಂದಿನಿ ಅಕ್ಕ ಪಕ್ಕದ ಮನೆಯವರಾಗಿದ್ದು, ಇಬ್ಬರೂ ಎಂಟು ವರ್ಷದ ಹಿಂದೆ ಪ್ರೀತಿಸಿ ಮದುವೆ ಆಗಿದ್ದರು. ನಂದಿನಿ ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರೆ, ಸೂರ್ಯ ಇನ್ವಿಟೇಷನ್ ಕಾರ್ಡ್ ಪ್ರಿಂಟ್ ಮಾಡೋ ಕೆಲಸ ಮಾಡುತ್ತಿದ್ದ. ಇವರ ಬಾಳಲ್ಲಿ ಈಗ ಬಿರುಗಾಳಿ ಎದ್ದಿದ್ದು, ಪತ್ನಿ ಸಾವಿನ ಮನೆ ಸೇರಿದ್ದಾರೆ. ಫೆ.23 ರಂದು ರಾತ್ರಿ 9.30ಕ್ಕೆ ಚಾಮರಾಜಪೇಟೆ ಏರಿಯಾದಲ್ಲಿರುವ ಮನೆಯಲ್ಲಿ ಪತ್ನಿ ನೇಣು ಹಾಕಿಕೊಂಡು ಮೃತಪಟ್ಟಿದ್ದಾಳೆ.
ಗಂಡ ಮತ್ತು ಮಗ ಬೇಕರಿಗೆ ಹೋಗಿದ್ದರು. ಅಲ್ಲಿಂದ ಬಂದು ನೋಡುವಷ್ಟರಲ್ಲಿ ನಂದಿನಿ ನೇಣು ಹಾಕಿಕೊಂಡಿರುವುದು ಕಂಡಿದೆ. ರೂಂ ಲಾಕ್ ಆಗಿತ್ತು. ಹಗ್ಗಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ನಂದಿನಿ ಕಂಡಿದ್ದಾಳೆ. ಕೂಡಲೇ ತನ್ನ ಅಣ್ಣನನ್ನ ಕರಿಸಿಕೊಂಡ ಸೂರ್ಯ ಬಾಗಿಲು ಓಪನ್ ಮಾಡಿ ನಂದಿನಿಯನ್ನು ಕೆಳಗಿಳಿಸಿದ್ದಾರೆ. ತಕ್ಷಣ ಚಾಮರಾಜಪೇಟೆ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ನಂದಿನಿಯ ಹಿಂದೆ ವ್ಯಕ್ತಿಯೊಬ್ಬ ಬಿದ್ದಿದ್ದು, ತನ್ನನ್ನು ಪ್ರೀತಿಸು ಎಂದು ಕಾಡುತ್ತಿದ್ದ. ಗಂಡನನ್ನ ಬಿಟ್ಟು ಬರುವಂತೆಯೂ ಪೀಡಿಸುತ್ತಿದ್ದ. ನಂದಿನಿ ಪತಿಗೂ ಕರೆ ಮಾಡಿ ಆಕೆಯನ್ನು ಬಿಟ್ಟು ಬಿಡುವಂತೆ ಹೇಳುತ್ತಿದ್ದನಂತೆ. ಇದೇ ವಿಚಾರವಾಗಿ ಪತಿ-ಪತ್ನಿ ಮಧ್ಯೆ ಗಲಾಟೆ ಆಗಿತ್ತು. ಇದರಿಂದ ಬೇಸತ್ತ ನಂದಿನಿ ಮನೆಯಲ್ಲಿ ಯಾರೂ ಇಲ್ಲದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಚಾಮರಾಜಪೇಟೆ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ: Child Death: ಚಿಕ್ಕಬಳ್ಳಾಪುರದಲ್ಲಿ ತೆಂಗಿನ ಮರ ಮುರಿದು ಬಿದ್ದು 3 ವರ್ಷದ ಮಗು ಸಾವು