Essay Competition Winners: ʼಸದಾತನʼ ದಿಂದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ; ಫಲಿತಾಂಶ ಪ್ರಕಟ

Essay Competition Winners: ʼಸದಾತನʼ ದಿಂದ ಶಾಲಾ ಶಿಕ್ಷಕರಿಗಾಗಿ ನಡೆಸಲಾದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ 964 ಶಿಕ್ಷಕರು ಭಾಗವಹಿಸಿದ್ದು, ಸ್ಪರ್ಧೆಯ ಫಲಿತಾಂಶ ಪ್ರಕಟಿಸಲಾಗಿದೆ. ಈ ಕುರಿತ ವಿವರ ಇಲ್ಲಿದೆ.

Essay Competition
Profile Siddalinga Swamy Feb 5, 2025 10:06 PM

ಬೆಂಗಳೂರು: ʼಸದಾತನʼ ದಿಂದ ಶಾಲಾ ಶಿಕ್ಷಕರಿಗಾಗಿ ನಡೆಸಲಾದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ (Essay Competition Winners) ರಾಜ್ಯದ ವಿವಿಧ ಭಾಗಗಳಿಂದ 964 ಶಿಕ್ಷಕರು ಭಾಗವಹಿಸಿದ್ದು, ಸ್ಪರ್ಧೆಯ ಫಲಿತಾಂಶ ಪ್ರಕಟಿಸಲಾಗಿದೆ. ಕನಕಪುರದ ವಾಸುದೇವ ನಾಡಿಗ್ ಅವರಿಗೆ ಪ್ರಥಮ ಬಹುಮಾನ (ರೂ. 21,000), ಬೆಳಗಾವಿಯ ಗಂಗಾದೇವಿ ಚಕ್ರಸಾಲಿ ಅವರಿಗೆ ದ್ವಿತೀಯ ಬಹುಮಾನ (ರೂ. 18,000), ಮಾಗಡಿಯ ಶ್ರುತಿ ವಿ. ಡಿ. ಅವರಿಗೆ ತೃತೀಯ ಬಹುಮಾನ (ರೂ. 15,000) ಲಭಿಸಿದೆ.

ಇನ್ನು ಮೆಚ್ಚುಗೆ ಬಹುಮಾನ (ತಲಾ ರೂ. 10,000) ವನ್ನು ಡಾ. ಕಾರ್ತಿಕ್ ವಾಗ್ಳೆ, ಕೊಪ್ಪ, ರಾಮ ದೇವಾಡಿಗ, ಬೈಂದೂರು, ಪ್ರಶಾಂತಿ ಪಾಟೀಲ್, ತೀರ್ಥಹಳ್ಳಿ, ಸುಪ್ರಿಯಾ ನಾರಾಯಣರಾವ್, ಬೆಂಗಳೂರು, ಸೀಮಾ ಮಡಿವಾಳ, ಸಿದ್ದಾಪುರ, ಕುರುಬರ ನಾರಾಯಣಮ್ಮ, ಹೊಸಪೇಟೆ, ಸುಮಿತ್ರಾ ಗಾಜರೆ, ವಿಜಯಪುರ, ಉಮೇಶ್ ಕುಮಾರ್ ಎನ್., ಬೆಂಗಳೂರು, ಅನ್ನಪೂರ್ಣ ಕಾಂಬಳೆ, ಘಟಪ್ರಭಾ, ಶಂಕರ್ ಜಿ.ಕೆ., ಸಾಗರ ಅವರಿಗೆ ಲಭಿಸಿದೆ.

ಫೆ.9 ರಂದು ವಿಚಾರ ಸಂಕಿರಣ

ಬೆಂಗಳೂರಿನ ಜಯನಗರದಲ್ಲಿರುವ ಶ್ರೀ ಜಯರಾಮಸೇವಾ ಮಂಡಲಿಯಲ್ಲಿ ಫೆ.9 ರಂದು ಭಾನುವಾರ ಬೆಳಗ್ಗೆ 9.30 ಕ್ಕೆ ‘ಸನಾತನ ಧರ್ಮ ಮತ್ತು ವರ್ತಮಾನʼ ವಿಷಯವಾಗಿ ಒಂದು ದಿನದ ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿದೆ. ಬಸವನಗುಡಿ ಶ್ರೀರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ನಿತ್ಯಸ್ಥಾನಂದಜೀ ಅವರು ವಿಚಾರ ಸಂಕಿರಣವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎನ್. ಎಂ. ಶಾಂತಿನಾಥ ಹಾಗೂ ಎಸ್. ಕೆ. ಗೋಪಾಲಕೃಷ್ಣ ಪಾಲ್ಗೊಳ್ಳಲಿದ್ದಾರೆ.

ವಿಚಾರ ಸಂಕಿರಣದಲ್ಲಿ ‘ಸನಾತನ ಧರ್ಮದ ಮೂಲ ಲಕ್ಷಣಗಳುʼ ವಿಷಯವಾಗಿ ಕೊರ್ಗಿ ಶಂಕರನಾರಾಯಣ ಉಪಾಧ್ಯಾಯ, ‘ಸನಾತನ ಧರ್ಮ ಮತ್ತು ಮಹಿಳೆʼ ವಿಷಯವಾಗಿ ಡಾ. ವಿ. ಬಿ. ಆರತಿ, ‘ಸನಾತನ ಧರ್ಮ ಮತ್ತು ಸಮಾಜ ವ್ಯವಸ್ಥೆʼ ವಿಷಯವಾಗಿ ವಿದ್ವಾನ್ ಕೃಷ್ಣರಾಜ ಕುತ್ಪಾಡಿ, ‘ಸನಾತನ ಧರ್ಮದ ಅಭಿವ್ಯಕ್ತಿ ರಾಮಾಯಣʼ ವಿಷಯವಾಗಿ ದಿವಾಕರ ಹೆಗಡೆ ಉಪನ್ಯಾಸ ಮತ್ತು ಸಂವಾದ ನಡೆಸಿಕೊಡಲಿದ್ದಾರೆ.

ಸಂಜೆ ನಡೆಯುವ ಸಮಾರೋಪ ಕಾರ್ಯಕ್ರಮದಲ್ಲಿ ತುಮಕೂರಿನ ಶ್ರೀರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಶ್ರೀ ವೀರೇಶಾನಂದಜೀ ಮಹಾರಾಜ್ ಅವರು ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಯರಾಮ ಸೇವಾಮಂಡಲಿಯ ಗೌ. ಕಾರ್ಯದರ್ಶಿ ಡಾ. ಎಚ್. ಸುಂದರಮೂರ್ತಿ ಉಪಸ್ಥಿತರಿರುವರು.

ಈ ಸುದ್ದಿಯನ್ನೂ ಓದಿ | Reliance: ರಿಲಯನ್ಸ್ ಗ್ರೂಪ್ ಸಿಎಂಒ ಆಗಿ ಗಾಯತ್ರಿ ವಾಸುದೇವ ಯಾದವ್ ನೇಮಕ

ವಿಚಾರಸಂಕಿರಣದಲ್ಲಿ ಭಾಗವಹಿಸಲು ಆಸಕ್ತರೆಲ್ಲರಿಗೂ ಮುಕ್ತ-ಉಚಿತ ಪ್ರವೇಶವಿದ್ದು, ಭಾಗವಹಿಸಲು ಇಚ್ಛಿಸುವವರು ಮೊದಲೇ ನೋಂದಣಿ ಮಾಡಿಕೊಳ್ಳಲು ಕೋರಲಾಗಿದೆ. ನೋಂದಣಿಗಾಗಿ 7483681708 ಸಂಖ್ಯೆಗೆ ವಾಟ್ಸಾಪ್‌ ಮಾಡಬಹುದು ಎಂದು ಟ್ರಸ್ಟಿ ಕೆ.ಎಸ್. ಉಪಾಧ್ಯಾಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?