ವಿದೇಶ ಫ್ಯಾಷನ್‌ ಲೋಕ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್‌ ಹೌಸ್‌ ಸಂಪಾದಕೀಯ

Basavaraj Bommai: ಗದಗ-ಬೆಟಗೇರಿ ನಗರಸಭೆಯಲ್ಲಿ ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಬಸವರಾಜ ಬೊಮ್ಮಾಯಿ ಆರೋಪ

ಗದಗ-ಬೆಟಗೇರಿ ನಗರಸಭೆಯಲ್ಲಿ ಬಿಜೆಪಿಯ ಮೂರು ಜನ ಸದಸ್ಯರನ್ನು ರಾತ್ರಿ 12 ಗಂಟೆಗೆ ಅಮಾನತು ಮಾಡಿ ಅವರನ್ನು ಮತ ಹಾಕದಂತೆ ನೋಡಿಕೊಂಡಿದ್ದಾರೆ. ಅಮಾನತುಗೊಂಡ ಸದಸ್ಯರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಕೊಟ್ಟು ಆದೇಶ ನೀಡಿದೆ. ಚುನಾವಣಾಧಿಕಾರಿ ಅದನ್ನು ದಿಕ್ಕರಿಸಿ, ಎಲ್ಲ ಸಂಪರ್ಕ ಬಂದು ಮಾಡಿ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್ ಅವರ ನಿರ್ದೇಶನದಂತೆ ಕೆಲಸ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಕಾಂಗ್ರೆಸ್‌ನ ಕಾನೂನು ಬಾಹಿರ ಜಯ ತಾತ್ಕಾಲಿಕ: ಬಸವರಾಜ ಬೊಮ್ಮಾಯಿ

ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ.

Profile Siddalinga Swamy Feb 28, 2025 7:59 PM

ಗದಗ: ಗದಗ-ಬೆಟಗೇರಿ ನಗರಸಭೆಯಲ್ಲಿ ಕಾಂಗ್ರೆಸ್ (Congress) ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿ, ಹೈಕೋರ್ಟ್ ಆದೇಶ ಉಲ್ಲಂಘನೆ ಮಾಡಿ, ನ್ಯಾಯಾಂಗ ನಿಂದನೆ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಆರೋಪಿಸಿದ್ದಾರೆ. ಗದಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗದಗ-ಬೆಟಗೇರಿ ನಗರಸಭೆಯಲ್ಲಿ ಬಿಜೆಪಿಯ ಮೂರು ಜನ ಸದಸ್ಯರನ್ನು ರಾತ್ರಿ 12 ಗಂಟೆಗೆ ಅಮಾನತು ಮಾಡಿ ಅವರನ್ನು ಮತ ಹಾಕದಂತೆ ನೋಡಿಕೊಂಡಿದ್ದಾರೆ. ಅಮಾನತುಗೊಂಡ ಸದಸ್ಯರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಕೊಟ್ಟು ಆದೇಶ ನೀಡಿದೆ. ಚುನಾವಣಾಧಿಕಾರಿ ಅದನ್ನು ದಿಕ್ಕರಿಸಿ, ಎಲ್ಲ ಸಂಪರ್ಕ ಬಂದು ಮಾಡಿ, ಜಿಲ್ಲಾ ಉಸ್ತುವಾರಿ ಸಚಿವ ಎಚ್. ಕೆ. ಪಾಟೀಲ್ (HK Patil) ಅವರ ನಿರ್ದೇಶನದಂತೆ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಗದಗ ಬೆಟಗೇರಿ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ನಡೆದಿದ್ದು, ಕಾಂಗ್ರೆಸ್ ಜಯಶಾಲಿಯಾಗಿದೆ. ಹೈಕೋರ್ಟ್ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿತ್ತು. ಆದರೆ ಕೋರ್ಟ್​ ಆದೇಶ ಪ್ರತಿ ಚುನಾವಣಾಧಿಕಾರಿ ಕೈ ಸೇರದಿದ್ದರಿಂದ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಿದ್ದು, ಕಾಂಗ್ರೆಸ್​ ಜಯಗಳಿಸಿದೆ. ಇದಕ್ಕೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಯ ತಾತ್ಕಾಲಿಕ

ಹೈಕೋರ್ಟ್ ಆದೇಶವನ್ನು ದಿಕ್ಕರಿಸಿ ಚುನಾವಣೆ ನಡೆಸಿರುವುದು ನ್ಯಾಯಾಂಗ ನಿಂದನೆಯಾಗುತ್ತದೆ. ಹೈಕೋರ್ಟ್ ಆದೇಶವನ್ನು ದಿಕ್ಕರಿಸುವ ಉದ್ದಟತನವನ್ನು ಅಸಿಸ್ಟೆಂಟ್ ಕಮಿಷನರ್ ಮಾಡಿದ್ದಾರೆ. ಅಧಿಕಾರಿ ಆಗಲು ಯೋಗ್ಯತೆ ಇಲ್ಲ ಇವರಿಗೆ, ಕಾನೂನು ಪರಿಪಾಲನೆ ಮಾಡುವ ಯೋಗ್ಯತೆ ಇಲ್ಲ. ಇವರು ನ್ಯಾಯಾಂಗ ನಿಂದನೆ ಮಾಡಿದ್ದು, ಅದರ ವಿರುದ್ದ ಕೋರ್ಟ್‌ಗೆ ಹೋಗುತ್ತೇವೆ. ಮೂರು ಜನ ಅಮಾಯಕ ಸದಸ್ಯರ ಸದಸ್ಯತ್ವ ಅಮಾನತಿಗೆ ಹುನ್ನಾರ ಮಾಡಿರುವುದರ ವಿರುದ್ದವೂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುತ್ತೇವೆ. ಇವತ್ತಿನ ಜಯ ತಾತ್ಕಾಲಿಕವಾಗಿದ್ದು, ಅಸಂವಿಧಾನಿಕವಾಗಿದೆ. ಕಾನೂನುಬಾಹಿರವಾಗಿದೆ ಎಂದು ಆರೋಪಿಸಿದ ಅವರು, ಇದನ್ನು ಜನರೂ ಒಪ್ಪುವುದಿಲ್ಲ ನಾವೂ ಒಪ್ಪುವುದಿಲ್ಲ, ಯಾರೂ ಒಪ್ಪುವುದಿಲ್ಲ. ಈ ಚುನಾವಣೆಗೆ ಧಿಕ್ಕಾರ ಹಾಕಿ ನಾವು ಬಹಿಷ್ಕಾರ ಹಾಕಿದ್ದೇವೆ. ಮತ್ತೆ ಚುನಾವಣೆ ನಡೆಯಲಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Reliance: ವಿರಳ ಕಾಯಿಲೆಗಳ ಪತ್ತೆಗೆ ವೈದ್ಯರಿಗೆ ನೆರವಾಗಲು ಪೋರ್ಟಲ್ ಆರಂಭಿಸಿದ ಸ್ಟ್ರಾಂಡ್ ಲೈಫ್ ಸೈನ್ಸಸ್‌

ಚುನಾವಣೆಯನ್ನು ಬುಧವಾರದವರೆಗೂ ಮುಂದೂಡಿ ಡಿಸಿಯವರನ್ನು ಸಂಪರ್ಕಿಸುವಂತೆ ಎಜಿಯವರಿಗೆ ಸೂಚಿಸಿದ್ದಾರೆ. ಡಿಸಿಯವರಿಗೂ ಸಂಪರ್ಕಿಸುವುದು ಎಜಿಯವರ ಕೆಲಸ. ಆದರೆ ಎಲ್ಲ ಸಂಪರ್ಕವನ್ನು ಬಂದ್ ಮಾಡಿಕೊಂಡು ಕೂತಿದ್ದಾರೆ. ನಮಗೂ ಯಾರನ್ನೂ ಸಂಪರ್ಕ ಮಾಡಲು ಅವಕಾಶ ನೀಡಿಲ್ಲ. ಸರ್ಕಾರ ಚುನಾವಣೆ ವ್ಯವಸ್ಥೆಯನ್ನು ದುರುಯೋಗ ಮಾಡಿಕೊಂಡು ಕೃತಕ ಬಹುಮತ ಪಡೆದುಕೊಂಡು ಚುನಾವಣೆ ನಡೆಸಿದ್ದಾರೆ. ಅಂತಿಮವಾಗಿ ಜಯ ನಮಗೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ಎಂದು ಬಸವರಾಜ ಬೊಮ್ಮಾಯಿ ಭರವಸೆ ವ್ಯಕ್ತಪಡಿಸಿದ್ದಾರೆ.