ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Hassan Tragedy: ಹಾಸನ ದುರಂತದಲ್ಲಿ ಮೃತರ ಸಂಖ್ಯೆ 10ಕ್ಕೆ ಏರಿಕೆ; ತಲಾ 1 ಲಕ್ಷ ಪರಿಹಾರ ಘೋಷಿಸಿದ ಎಚ್.ಡಿ ದೇವೇಗೌಡ

H. D. Deve Gowda: ಹಾಸನ ಗಣೇಶ ಮೆರವಣಿಗೆ ವೇಳೆ ನಡೆದ ದುರಂತದಲ್ಲಿ ಮೃತರಾದವರ ಕುಟುಂಬಸ್ಥರಿಗೆ ಜೆಡಿಎಸ್‌ ಪಕ್ಷದಿಂದಲೂ ಪರಿಹಾರ ನೀಡಲಾಗುತ್ತದೆ. ಮೃತರಿಗೆ ತಲಾ 1 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ 25 ಸಾವಿರ ಪರಿಹಾರ ನೀಡುವುದಾಗಿ ಮಾಜಿ ಸಿಎಂ ಎಚ್‌.ಡಿ.ದೇವೇಗೌಡ ಅವರು ಘೋಷಿಸಿದ್ದು,

ಹಾಸನ: ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ದುರಂತದಲ್ಲಿ (Hassan Tragedy) ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಶಿವಯ್ಯನ ಕೊಪ್ಪಲು ಗ್ರಾಮದ‌ ಯುವಕ ಚಂದನ್ (26) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಭೀಕರ ಅಪಘಾತ ನಡೆದ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರಗೆ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದು, ಈ ವೇಳೆ ಮೃತರು ಮತ್ತು ಗಾಯಾಳುಗಳ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಾರೆ.

ಹಾಸನದ ಮೊಸಳೆ ಹೊಸಳ್ಳಿಯಲ್ಲಿ ಟ್ರಕ್ ಹರಿದು ಹಲವರು ಸಾವನ್ನಪ್ಪಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಸ್ಥರಿಗೆ ಈ ದುಃಖ ಭರಿಸುವಂತ ಶಕ್ತಿ ಭಗವಂತ ನೀಡಲಿ. ಹಾಸನ ಗಣೇಶ ಮೆರವಣಿಗೆ ದುರಂತದಲ್ಲಿ ಮೃತರಾದವರ ಕುಟುಂಬಸ್ಥರಿಗೆ ಜೆಡಿಎಸ್‌ ಪಕ್ಷದಿಂದಲೂ ಪರಿಹಾರ ನೀಡಲಾಗುತ್ತದೆ. ಮೃತರಿಗೆ ತಲಾ 1 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದರು. ಅಲ್ಲದೇ ಗಂಭೀರವಾಗಿ ಗಾಯಗೊಂಡಿರುವವರಿಗೆ ತಲಾ 25 ಸಾವಿರ ಪರಿಹಾರ ನೀಡುವುದಾಗಿ ತಿಳಿಸಿದರು. ಜತೆಗೆ ಸ್ವಲ್ಪ ಪ್ರಮಾಣದಲ್ಲಿ ಗಾಯಗೊಂಡವರಿಗೆ ತಲಾ 20 ಸಾವಿರ ಪರಿಹಾರ ನೀಡಲಾಗುತ್ತದೆ ಎಂದರು.

ಇದೇ ವೇಳೆ ಸರ್ಕಾರ ಕೊಟ್ಟ ಪರಿಹಾರ ಸಾಲಲ್ಲ, ಹೆಚ್ಚಿನ ಪರಿಹಾರ ನೀಡಬೇಕು ಎಂದು ಮಾಜಿ ಪ್ರಧಾನಿಗಳು ಆಗ್ರಹಿಸಿದ್ದಾರೆ.

ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಗಣೇಶ ಮೂರ್ತಿ ವಿಸರ್ಜನೆ (Ganesha visarjan) ಮೆರವಣಿಗೆ ಸಂದರ್ಭದಲ್ಲಿ ಸಂಭವಿಸಿದ ಭೀಕರ ಅಪಘಾತದ (Hassan tragedy) ಹಿನ್ನೆಲೆಯಲ್ಲಿ ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡರು (Krishna Byregowda) ನೀಡಿದ ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಘಟನೆ ನಡೆದ ಕ್ಷಣದಿಂದ ರಾತ್ರಿಯಿಡೀ ಅಧಿಕಾರಿಗಳ ತಂಡ-ವೈದ್ಯರ ತಂಡಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡರು ತೀವ್ರ ನಿಗಾ ವಹಿಸಿದ್ದರು. ಮೃತರ ಕುಟುಂಬಗಳ ಜೊತೆ ಸತತ ಸಂಪರ್ಕದಲ್ಲಿದ್ದ ಅಧಿಕಾರಿಗಳು ಮೃತರ ಮರಣೋತ್ತರ ಪರೀಕ್ಷೆ ರಾತ್ರಿಯೇ ನಡೆಯಲು ಬೇಕಾದ ಅಗತ್ಯ ಕ್ರಮ ಕೈಗೊಂಡರು. ವೈದ್ಯರ ತಂಡ ಬೆಳಗಾಗುವವರೆಗೂ ಕಾಯದೇ ರಾತ್ರಿಯೇ ಮರಣೋತ್ತರ ಪರೀಕ್ಷೆ ಮತ್ತು ಕಾನೂನು ಪ್ರಕ್ರಿಯೆ ಮುಗಿಸಿ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದೆ.

ಗಾಯಾಳುಗಳ ಚಿಕಿತ್ಸೆಗೆ ಖುದ್ದಾಗಿ ಜಿಲ್ಲಾ ವೈದ್ಯಾಧಿಕಾರಿಗಳೇ ಉಸ್ತುವಾರಿ ವಹಿಸಿದ್ದು, ಅಗತ್ಯ ವೈದ್ಯರ ತಂಡವನ್ನು ರಚಿಸಿದ್ದಾರೆ. ಅಗತ್ಯವಾದ ಎಲ್ಲಾ ಆಧುನಿಕ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ವೈದ್ಯಾಧಿಕಾರಿಯವರ ಜೊತೆ ನಿರಂತರ ಸಂಪರ್ಕದಲ್ಲಿರುವ ಉಸ್ತುವಾರಿ ಸಚಿವರು ಆಸ್ಪತ್ರೆಗಳಿಗೆ ಭೇಟಿ ನೀಡುತ್ತಿದ್ದು, ಮೃತರ ಕುಟುಂಬದವರ ಜೊತೆಗೂ ಮಾತನಾಡುತ್ತಿದ್ದಾರೆ.

ಮೃತರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರದ ಹಣವನ್ನು ನಿನ್ನೆಯೇ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಘಟನೆಗೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಹಾಗೂ ಗಾಯಾಳುಗಳಿಗೆ 50,000 ರೂ ಘೋಷಿಸಿದ್ದಾರೆ.

ಇದನ್ನೂ ಓದಿ: Hassan Tragedy: ಹಾಸನ ದುರಂತಕ್ಕೆ ಸಿಎಂ ಸಂತಾಪ; ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ