ಹಾವೇರಿ, ಫೆ.13: ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ (MLA Basavaraj Shivannavar) ಅವರಿಗೆ ಶುಕ್ರವಾರ ಬೆಳಗ್ಗೆ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಅವರನ್ನು ಹುಬ್ಬಳ್ಳಿ ವಿಹಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಫೆ.14ರಂದು ಹಾವೇರಿಯಲ್ಲಿ ಭೂ ಗ್ಯಾರಂಟಿ ಸಮರ್ಪಣಾ ಸಾಧನಾ ಸಮಾವೇಶ ಯಶಸ್ವಿಯಾಗಿ ನಡೆಸಲು ಅಧಿಕಾರಿಗಳೊಂದಿಗೆ ಹಾಗೂ ಸಚಿವರು, ಶಾಸಕರೊಂದಿಗೆ ನಿರಂತರ ಕೆಲಸದಲ್ಲಿ ತೊಡಗಿಕೊಂಡಿದ್ದರು.
Hampi Utsav 2026: ಹಂಪಿ ಉತ್ಸವದಲ್ಲಿ ಅಗ್ನಿ ಅವಘಡ; ಸಿಎಂ ಇದ್ದ ವೇದಿಕೆ ಎದುರೇ ಹೊತ್ತಿಕೊಂಡ ಬೆಂಕಿ
ಶುಕ್ರವಾರ ಬೆಳಗ್ಗೆ ಆರೋಗ್ಯದಲ್ಲಿ ಎದೆ ನೋವು, ಸುಸ್ತು ಕಾಣಿಸಿಕೊಂಡಿತ್ತು.ಇದರಿಂದ ತಕ್ಷಣವೇ ಹುಬ್ಬಳ್ಳಿಗೆ ತೆರಳಿ ವಿಹಾನ್ ಖಾಸಗಿ ಆಸ್ಪತ್ರೆ ದಾಖಲಾಗಿದ್ದಾರೆ. ಚಿಕಿತ್ಸೆ ನೀಡಿರುವ ವೈದ್ಯರು ಹೃದಯದಲ್ಲಿ ಸಮಸ್ಯೆ ಇರುವುದನ್ನು ಗುರುತಿಸಿ, ಸ್ಟಂಟ್ ಅಳವಡಿಕೆ ಮಾಡಿದ್ದಾರೆ. ಶಾಸಕರಿಗೆ ಸದ್ಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ.