ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಹಾವೇರಿ ಎಸ್‌ಪಿ ಅಂಶುಕುಮಾರ್‌ ಸೇರಿ ಮೂವರಿಗೆ ಮುಖ್ಯಮಂತ್ರಿ ಪದಕ

Karnataka Police: ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ್ ‌ಅವರು ಸೇರಿ ಜಿಲ್ಲೆಯ ಮೂವರಿಗೆ ಮುಖ್ಯಮಂತ್ರಿಗಳ ಮೆಡಲ್ ಲಭಿಸಿದ್ದಕ್ಕೆ ಪೊಲೀಸ್ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ. ಒಳಾಡಳಿತ ಇಲಾಖೆಯ ಸರಕಾರದ ಅಪರ‌ ಮುಖ್ಯ ಕಾರ್ಯದರ್ಶಿಗಳು, ಸಿಎಂ ಪದಕ ವಿಜೇತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

ಹಾವೇರಿ ಎಸ್‌ಪಿ ಅಂಶುಕುಮಾರ್‌ ಸೇರಿ ಮೂವರಿಗೆ ಮುಖ್ಯಮಂತ್ರಿ ಪದಕ

Profile Prabhakara R Mar 30, 2025 12:19 PM

ಹಾವೇರಿ: ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ರಾಜ್ಯ ಸರ್ಕಾರದಿಂದ ಮುಖ್ಯಮಂತ್ರಿಗಳ ಪದಕ ಘೋಷಿಸಲಾಗಿದೆ. 2024ನೇ ಸಾಲಿನ ಸಿಎಂ ಪದಕ ವಿಜೇತರ ಪಟ್ಟಿಗೆ ಸರ್ಕಾರ ಅನುಮೋದನೆ ನೀಡಿದ್ದು, ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ್, ಶಿಗ್ಗಾಂವಿ ಪೊಲೀಸ್ ಠಾಣೆಯ ಸಿಬ್ಬಂದಿ ಎಚ್. ತಿಪ್ಪೆಸ್ವಾಮಿ (ಸ್ಪೆಷಲ್ ಆರ್‌ಎಚ್‌ಸಿ: 66, 10ನೇ ಪಡೆ, ಕೆಎಸ್‌ಆರ್‌ಪಿ, ಬೆಟಾಲಿಯನ್‌) ಹಾಗೂ ಸವಣೂರು ಪೊಲೀಸ್ ಠಾಣೆಯ ಬಸವರಾಜ ಡಿ ಮಲ್ಲೂರ್ (ಸಿಎಚ್‌ಸಿ: 783) ಅವರಿಗೂ ಸಿಎಂ ಮೆಡಲ್ ಲಭಿಸಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ್ ‌ಅವರು ಸೇರಿ ಜಿಲ್ಲೆಯ ಮೂವರಿಗೆ ಸಿಎಂ ಮೆಡಲ್ ಲಭಿಸಿದ್ದಕ್ಕೆ ಪೊಲೀಸ್ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ. ಒಳಾಡಳಿತ ಇಲಾಖೆಯ ಸರಕಾರದ ಅಪರ‌ ಮುಖ್ಯ ಕಾರ್ಯದರ್ಶಿಗಳು, ಸಿಎಂ ಪದಕ ವಿಜೇತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

219 ಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿಗೆ ಮುಖ್ಯಮಂತ್ರಿಗಳ ಪದಕ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರದಿಂದ 2024ನೇ ಸಾಲಿನ ಮುಖ್ಯಮಂತ್ರಿಗಳ ಪದಕ ಪ್ರಕಟಿಸಿದ್ದು, ರಾಜ್ಯದ ಮೂವರು ಐಪಿಎಸ್ ಅಧಿಕಾರಿಗಳು ಸೇರಿ 219 ಮಂದಿ ಈ ಬಾರಿ ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಎಸ್‌ಪಿ ಸಿ.ಕೆ. ಬಾಬಾ, ಸಿಐಡಿ ಎಸ್‌ಪಿ ಡಾ. ಅನೂಪ್ ಎ. ಶೆಟ್ಟಿ, ಹಾವೇರಿ ಎಸ್‌ಪಿ ಅಂಶು ಕುಮಾ‌ರ್, ಬೆಂಗಳೂರಿನ ಕೆ.ಜಿ. ಹಳ್ಳಿ ಉಪವಿಭಾಗದ ಎಸಿಪಿ ಪ್ರಕಾಶ್ ರಾಥೋಡ್, ಸಿಸಿಬಿ ಪಿಐ ಸಂತೋಷ್ ರಾಮ್, ಜಯನಗರ ಠಾಣೆ ಪಿಐ ಆರ್. ದೀಪಕ್, ಕಾಮಾಕ್ಷಿಪಾಳ್ಯ ಸಂಚಾರ ಠಾಣೆಯ ಪಿಐ ಎಸ್.ಟಿ. ಯೋಗೇಶ್, ಪೂರ್ವ ವಿಭಾಗದ ಮಹಿಳಾ ಠಾಣೆ ಪಿಐ ಶೋಭಾ ನರಸಿಂಹಯ್ಯ ಸೇರಿ 197 ಮಂದಿ ಪೊಲೀಸ್ ಅಧಿಕಾರಿ ಹಾಗೂ ಸಿಬಂದಿಗೆ ಮುಖ್ಯಮಂತ್ರಿಗಳ ಪದಕ ಘೋಷಣೆ ಮಾಡಲಾಗಿದೆ.‌

ಈ ಸುದ್ದಿಯನ್ನೂ ಓದಿ | Job Recruitment: ರಾಜ್ಯ ಸಿವಿಲ್‌ ಸೇವೆ ಹುದ್ದೆಗಳ ಹೊಸ ನೇಮಕಾತಿಗೆ ಸರ್ಕಾರ ತಡೆ

ಇದೇ ವೇಳೆ ರಾಜ್ಯ ಮತ್ತು ನೆರೆ ರಾಜ್ಯದ ನಕ್ಸಲರ ಶರಣಾಗತಿಗಾಗಿ ರಾಜ್ಯ ಗುಪ್ತವಾರ್ತೆ ಹಾಗೂ ರಾಜ್ಯ ನಕ್ಸಲ್ ನಿಗ್ರಹ ಪಡೆಯ 22 ಮಂದಿ ಅಧಿಕಾರಿ-ಸಿಬಂದಿಗೂ ಮುಖ್ಯಮಂತ್ರಿ ಪದಕ ಘೋಷಣೆ ಮಾಡಲಾಗಿದೆ.