ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Heart Failure: ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೆ ನಾಲ್ವರು ಸಾವು, 40 ದಿನಗಳಲ್ಲಿ 22 ಬಲಿ

Heart Failure: ಹಾಸನ ಜಿಲ್ಲೆಯಲ್ಲಿ ಕಳೆದ 40 ದಿನಗಳಲ್ಲಿ ಒಟ್ಟು 22 ಜನರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಇತ್ತೀಚಿಗೆ ಜಯದೇವ ಹೃದ್ರೋಗ ಆಸ್ಪತ್ರೆಯ ವೈದ್ಯರು, ಮಹಿಳೆಯರಲ್ಲಿ ಈ ರೀತಿಯ ಹೃದಯಾಘಾತ ಹೆಚ್ಚಾಗಿ ಕಂಡುಬರುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಸಣ್ಣ ವಯಸ್ಸಿನವರು ದೊಡ್ಡ ಸಂಖ್ಯೆಯಲ್ಲಿ ಮೃತಪಡುತ್ತಿರುವುದು ಕಳವಳ ಮೂಡಿಸಿದೆ.

ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೆ ನಾಲ್ವರು ಸಾವು, 40 ದಿನಗಳಲ್ಲಿ 22 ಬಲಿ

ಸಾಂದರ್ಭಿಕ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ Jun 30, 2025 1:03 PM

ಹಾಸನ: ಹಾಸನದಲ್ಲಿ ಇಂದು ಒಂದೇ ದಿನ ನಾಲ್ವರು ಹೃದಯಾಘಾತಕ್ಕೆ (Heart faiure) ಬಲಿಯಾಗಿದ್ದಾರೆ. ಆ ಮೂಲಕ ಕಳೆದ 40 ದಿನಗಳಲ್ಲಿ ಹಾಸನ ಜಿಲ್ಲೆಯಲ್ಲಿ (Hassan district) ಒಟ್ಟು 22 ಜನರು ಹೃದಯಾಘಾತಕ್ಕೆ (Heart attack) ಬಲಿಯಾದಂತಾಗಿದೆ. ಇದರಲ್ಲಿ ಒಬ್ಬರು ಸಣ್ಣ ವಯಸ್ಸಿನ ಯೋಧ ಕೂಡ ಇದ್ದಾರೆ. ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳುನಲ್ಲಿ ತಡರಾತ್ರಿ ಸಾವನ್ನಪ್ಪಿದ್ದರೆ, ಇಂದು ಬೆಳಿಗ್ಗೆ ತಾನೇ ಹೃದಯಾಘಾತದಿಂದ ಬೇಲೂರು ಪಟ್ಟಣದಲ್ಲಿ ಮಹಿಳೆಯೊಬ್ಬರು ಕುಸಿದು ಬಿದ್ದು ಸಾವನಪ್ಪಿದ್ದಾರೆ. ಹೊಳೆನರಸೀಪುರದಲ್ಲಿ ಟೀ ಕುಡಿಯುತ್ತಿದ್ದಾಗ ಪ್ರಾಧ್ಯಾಪಕರೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಚನ್ನರಾಯಪಟ್ಟಣದಲ್ಲಿ ಡಿ ಗ್ರೂಪ್ ನೌಕರರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಒಂದೇ ದಿನ ಹೃದಯಾಘಾತಕ್ಕೆ ನಾಲ್ಕು ಜನ ಬಲಿಯಾಗಿದ್ದಾರೆ. ಹಾಸನ ಜಿಲ್ಲೆಯ ಬೇಲೂರಿನ ಜೆಪಿ ನಗರದ ಲೇಪಾಕ್ಷಿ (50), ಹೊಳೆ ನರಸೀಪುರದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಮುತ್ತಯ್ಯ (58) ಹೃದಯ ವೈಫಲ್ಯದಿಂದ ಸಾವಿಗೀಡಾಗಿದ್ದಾರೆ. ಇವರು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದರು. ಕೆಂಬಾಳು ಗ್ರಾಮದಲ್ಲಿ ಹೃದಯಾಘಾತದಿಂದ ಯೋಧ ಲೋಹಿತ್ (38) ಸಾವನ್ನಪ್ಪಿದ್ದಾರೆ. ನಾಡಕಚೇರಿ ಡಿ ಗ್ರೂಪ್ ನೌಕರ ಕುಮಾರ್ (53) ಎನ್ನುವವರು ಸಾವನಪ್ಪಿದ್ದಾರೆ. ಚೆನ್ನರಾಯಪಟ್ಟಣ ತಾಲೂಕಿನ ನಲ್ಲೂರು ಗ್ರಾಮದ ನಿವಾಸಿಯಾಗಿರುವ ಅವರು ರಾತ್ರಿ ಮನೆಯಲ್ಲಿ ಮಲಗಿದ್ದಾಗ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಚನ್ನರಾಯಪಟ್ಟಣ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ಆದರೆ ಅಷ್ಟರಲ್ಲೇ ಅವರು ಸಾವನ್ನಪ್ಪಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಕಳೆದ 40 ದಿನಗಳಲ್ಲಿ ಒಟ್ಟು 22 ಜನರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಇತ್ತೀಚಿಗೆ ಜಯದೇವ ಹೃದ್ರೋಗ ಆಸ್ಪತ್ರೆಯ ವೈದ್ಯರು, ಮಹಿಳೆಯರಲ್ಲಿ ಈ ರೀತಿಯ ಹೃದಯಾಘಾತ ಹೆಚ್ಚಾಗಿ ಕಂಡುಬರುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಸಣ್ಣ ವಯಸ್ಸಿನವರು ದೊಡ್ಡ ಸಂಖ್ಯೆಯಲ್ಲಿ ಮೃತಪಡುತ್ತಿರುವುದು ಕಳವಳ ಮೂಡಿಸಿದೆ.

ಇದನ್ನೂ ಓದಿ: Shefali Jariwala: ʻತೊಂದ್ರೆ ಇಲ್ಲಾ ಪಂಕಜಾ...ʼ ಹಾಡಿನ ನಟಿ ಶೆಫಾಲಿ ಜರಿವಾಲಾ ಹೃದಯಾಘಾತದಿಂದ ನಿಧನ