Karnataka Rains: ನಾಳೆ ಕರಾವಳಿ ಸೇರಿ 6 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ; ರೆಡ್ ಅಲರ್ಟ್ ಘೋಷಣೆ
Karnataka Rains: ರಾಜ್ಯದಲ್ಲಿ ನೈರುತ್ಯ ಮುಂಗಾರು (ಜೂನ್-ಸೆಪ್ಟೆಂಬರ್) – 2025 ಅವಧಿಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಇನ್ನು ಕರಾವಳಿ ತೀರದಲ್ಲಿ ಮೇ 31 ರವರೆಗೆ ಬಿರುಗಾಳಿಯು ಪ್ರತಿ ಗಂಟೆಗೆ 60 ಕಿ.ಮೀ ತಲುಪುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಸಮುದ್ರದ ಅಲೆಗಳು ಉಲ್ಬಣಗೊಳ್ಳಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಸಮುದ್ರತೀರದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.


ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು (ಜೂನ್-ಸೆಪ್ಟೆಂಬರ್) – 2025 ಅವಧಿಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ತಿಳಿಸಿದೆ. ಅದರಂತೆ ರಾಜ್ಯದ ಬಹುತೇಕ ಕಡೆ ವರುಣ ಅಬ್ಬರಿಸುತ್ತಿದ್ದಾನೆ. ಇನ್ನು ಮೇ 29ರಂದು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ , ಕೊಡಗು ಜಿಲ್ಲೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಹಾಗೆಯೇ ಮೈಸೂರು ಉಡುಪಿ, ದಾವಣಗೆರೆ, ರಾಯಚೂರು, ಯಾದಗಿರಿ, ಕಲಬುರಗಿ ಬೀದರ್ ಜಿಲ್ಲೆಗೆ ಆರೆಂಜ್ ಅಲರ್ಟ್ ಹಾಗೂ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಬಿರುಸಿನ ಮಳೆಯಾಗಲಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯೊಂದಿಗೆ ನಿರಂತರ ಗಾಳಿ (ಗಾಳಿಯ ವೇಗ ಗಂಟೆಗೆ 40-50 ಕಿ.ಮೀ.) ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 21°C ಇರುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ
ಕರ್ನಾಟಕ ರಾಜ್ಯದ ಕರಾವಳಿ ತೀರದಲ್ಲಿ ಮೇ 31 ರವರೆಗೆ, ಜೋರಾದ ಗಾಳಿಯು ಪ್ರತಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬೀಸಲಿದ್ದು, ಪ್ರತಿ ಗಂಟೆಗೆ 60 ಕಿ.ಮೀ ತಲುಪುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಸಮುದ್ರದ ಅಲೆಗಳು ಉಲ್ಬಣಗೊಳ್ಳಲಿದೆ. ಆದ್ದರಿಂದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಸಮುದ್ರತೀರದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.
#ಪ್ರವಾಹ ದ ಸಮಯದಲ್ಲಿ ಅನುಸರಿಸಬೇಕಾದ ಕ್ರಮಗಳನ್ನು ಈ ಜಾಗೃತಿ ವಿಡಿಯೋಗಳ ಮೂಲಕ ತಿಳಿಯಿರಿ ಹಾಗೂ #ಮುನ್ನೆಚ್ಚರಿಕೆವಹಿಸಿ #ಸುರಕ್ಷಿತವಾಗಿರಿ #ಮುಂಗಾರುಮಳೆ pic.twitter.com/Mq7obK0j1F
— Karnataka State Natural Disaster Monitoring Centre (@KarnatakaSNDMC) May 26, 2025
ಮೇ 30ರಂದು ಕರಾವಳಿ ಸೇರಿ 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಇನ್ನು ಮೇ 30ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ ಸೇರಿ 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಇನ್ನುಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅದೇ ರೀತಿ ಮೇ 31ರಂದು ರಾಜ್ಯ ಎಲ್ಲ 31 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ಜೂನ್ 1ರಂದು ಕರಾವಳಿ ಜಿಲ್ಲೆಗಳಿಗೆ ಮಾತ್ರ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಈ ಸುದ್ದಿಯನ್ನೂ ಓದಿ | Health Tips: ಜೀರ್ಣಾಂಗ ಆರೋಗ್ಯ ದಿನ: ಹೊಟ್ಟೆ ಕೆಡಿಸಿಕೊಳ್ಳಬೇಡಿ