Dharmasthala Case: ಧರ್ಮಸ್ಥಳ ಪ್ರಕರಣಗಳ ತನಿಖೆ ಶೀಘ್ರದಲ್ಲಿ ಮುಕ್ತಾಯ: ಗೃಹ ಸಚಿವ ಪರಮೇಶ್ವರ್
G Parameshwara: ಧರ್ಮಸ್ಥಳ ಪ್ರಕರಣದಲ್ಲಿ ಆದಷ್ಟು ಶೀಘ್ರದಲ್ಲಿ ಎಸ್ಐಟಿಯಿಂದ (SIT) ತನಿಖಾ ವರದಿ ಪಡೆಯಲು ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತಾಡಿದ ಗೃಹ ಸಚಿವ ಪರಮೇಶ್ವರ್, ಇಡೀ ತನಿಖೆಯನ್ನು ಆದಷ್ಟು ಬೇಗ ಮುಗಿಸಬೇಕು ಅಂತ ಎಸ್ಐಟಿಗೆ ತಿಳಿಸಿದ್ದೇವೆ ಎಂದಿದ್ದಾರೆ.

-

ಬೆಂಗಳೂರು: ಧರ್ಮಸ್ಥಳ ಪ್ರಕರಣಗಳ (Dharmasthala Case) ತನಿಖೆ ಆದಷ್ಟು ಬೇಗ ಮುಕ್ತಾಯವಾಗಲಿದ್ದು, ಇಡೀ ತನಿಖೆಯನ್ನು ಆದಷ್ಟು ಬೇಗ ಮುಗಿಸಬೇಕು ಎಂದು ಎಸ್ಐಟಿಗೆ (SIT) ತಿಳಿಸಿದ್ದೇವೆ ಎಂದು ಗೃಹ ಸಚಿವ ಪರಮೇಶ್ವರ್ (Home minister G Parameshwara) ತಿಳಿಸಿದ್ದಾರೆ. ಎಲ್ಲವನ್ನೂ ಅಂತಿಮಗೊಳಿಸಿ ವರದಿ ಕೊಡಲು ಎಸ್ಐಟಿಗೆ ಹೇಳಿದ್ದೇವೆ ಎಂದಿದ್ದಾರೆ.
ಧರ್ಮಸ್ಥಳ ಪ್ರಕರಣದಲ್ಲಿ ಆದಷ್ಟು ಶೀಘ್ರದಲ್ಲಿ ಎಸ್ಐಟಿಯಿಂದ (SIT) ತನಿಖಾ ವರದಿ ಪಡೆಯಲು ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತಾಡಿದ ಅವರು, ಇಡೀ ತನಿಖೆಯನ್ನು ಆದಷ್ಟು ಬೇಗ ಮುಗಿಸಬೇಕು ಅಂತ ಎಸ್ಐಟಿಗೆ ತಿಳಿಸಿದ್ದೇವೆ ಎಂದಿದ್ದಾರೆ.
ಎಫ್ಎಸ್ಎಲ್ ವರದಿ ಇನ್ನೂ ಬಂದಿಲ್ಲ. ಇತ್ತೀಚಿನ ಸಾಕ್ಷ್ಯಗಳನ್ನು ಎಫ್ಎಸ್ಎಲ್ಗೆ ಕಳಿಸಲಾಗಿದೆ. ಆದರೆ ಎಸ್ಐಟಿಯವರು ಅವರ ಕೆಲಸ ಮಾಡುತ್ತಿದ್ದಾರೆ. ಎಲ್ಲವನ್ನೂ ಅಂತಿಮಗೊಳಿಸಿ ವರದಿ ಕೊಡಲು ಎಸ್ಐಟಿಗೆ ಹೇಳಿದ್ದೇವೆ. ಆದಷ್ಟು ಶೀಘ್ರದಲ್ಲಿ ಇಡೀ ತನಿಖೆಯನ್ನು ಮುಗಿಸಬೇಕು ಎಂದು ಎಸ್ಐಟಿಗೆ ತಿಳಿಸಿದ್ದೇವೆ. ಸುಪ್ರೀಂ ಕೋರ್ಟ್ ನಲ್ಲಿ ಚಿನ್ನಯ್ಯ ಪಿಐಎಲ್ ವಜಾ ಆದ ವಿಚಾರವನ್ನೂ ಎಸ್ಐಟಿಯವರು ವರದಿಯಲ್ಲಿ ಸೇರಿಸಿಯೇ ಕೊಡುತ್ತಾರೆ. ಹೊಸ ದೂರುಗಳು ಬಂದಿವೆ. ಹಲವರು ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಇದಕ್ಕೆಲ್ಲ ಅಂತಿಮ ಚರಣ ಹಾಡಲು ಹೇಳಿದ್ದೇವೆ ಎಂದು ಹೇಳಿದ್ದಾರೆ.
ಇನ್ನು ಮಹೇಶ್ ಶೆಟ್ಟಿ ತಿಮರೋಡಿ ಬಂಧನವಾಗದ ವಿಚಾರ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಂಧನಕ್ಕೆ ಕಾನೂನು ತೊಡಕುಗಳು ಏನೇನಿದೆಯೋ ಅದರ ಬಗ್ಗೆ ನಾನು ಇನ್ನೂ ಚರ್ಚೆ ಮಾಡಿಲ್ಲ. ಏನೇ ಮಾಡಿದರೂ ಕಾನೂನು ಚೌಕಟ್ಟಿನಲ್ಲೇ ಮಾಡಬೇಕು. ಗಡಿಪಾರು ವಿಚಾರವನ್ನು ಅವರು ಕೋರ್ಟ್ನಲ್ಲಿ ಪ್ರಶ್ನಿಸಿದ್ದಾರೆ. ಅದೇನಾಗುತ್ತೆ ಅಂತ ನೋಡೋಣ. ಆದರೆ ತಿಮರೋಡಿ ಬಂಧಿಸೋದಾಗಲೀ, ಕ್ರಮ ಕೈಗೊಳ್ಳೋದಾಗಲೀ ಕಾನೂನು ಪ್ರಕಾರವೇ ಮಾಡಲಾಗುತ್ತೆ. ಇದರ ಬಗ್ಗೆ ಸರ್ಕಾರ ಎಸ್ಐಟಿಗೆ ಸೂಚನೆ ಕೊಡಲಾಗುವುದಿಲ್ಲ. ಅಂತಿಮವಾಗಿ ಎಸ್ಐಟಿಯವರು ತೀರ್ಮಾನ ಮಾಡ್ತಾರೆ ಎಂದಿದ್ದಾರೆ.
ಇದನ್ನೂ ಓದಿ: Dharmasthala Case: ಧರ್ಮಸ್ಥಳದ ವಿರುದ್ಧ ಷಡ್ಯಂತ್ರ: ನ್ಯಾಯಾಧೀಶರ ಮುಂದೆ ಮಾಹಿತಿ ನೀಡಿದ ಚಿನ್ನಯ್ಯ