ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

DK Shivakumar: ಡಿಸಿಎಂ ಡಿಕೆ ಶಿವಕುಮಾರ್‌ಗೆ ಶಾಕ್‌, ಅಕ್ರಮ ಆಸ್ತಿ ಪ್ರಕರಣ ಸುಪ್ರೀಂ ಮುಂದೆ ವಿಚಾರಣೆಗೆ

supreme court: ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಅವರು ಕರ್ನಾಟಕ ಹೈಕೋರ್ಟ್​ ಆದೇಶವನ್ನು ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ, ನ್ಯಾಯಮೂರ್ತಿ ಕೆ.ವಿನೋದ್ ಚಂದ್ರನ್ ಅವರ ನೇತೃತ್ವದ ಪೀಠವು ಇವುಗಳ ವಿಚಾರಣೆ ನಡೆಸಿತು.

ಡಿಸಿಎಂ ಡಿಕೆ ಶಿವಕುಮಾರ್‌ಗೆ ಶಾಕ್‌, ಅಕ್ರಮ ಆಸ್ತಿ ಪ್ರಕರಣ ಸುಪ್ರೀಂ ಮುಂದೆ

-

ಹರೀಶ್‌ ಕೇರ ಹರೀಶ್‌ ಕೇರ Sep 23, 2025 6:44 AM

ನವದೆಹಲಿ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DCM DK Shivakumar) ವಿರುದ್ಧದ ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (CBI) ತನಿಖೆ ವಾಪಸ್​ ಪಡೆದ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದ ಮುಂದೆ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಸುಪ್ರೀಂ ಕೋರ್ಟ್​ (Supreme court) ಸೋಮವಾರ ತಿಳಿಸಿದೆ.

ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಅವರು ಕರ್ನಾಟಕ ಹೈಕೋರ್ಟ್​ ಆದೇಶವನ್ನು ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ, ನ್ಯಾಯಮೂರ್ತಿ ಕೆ.ವಿನೋದ್ ಚಂದ್ರನ್ ಅವರ ನೇತೃತ್ವದ ಪೀಠವು ಇಂದು ಇವುಗಳ ವಿಚಾರಣೆ ನಡೆಸಿತು.

ಇದೇ ಪ್ರಕರಣವನ್ನು ಈ ಹಿಂದೆ ನ್ಯಾಯಮೂರ್ತಿ ಸೂರ್ಯಕಾಂತ್​ ಅವರ ನೇತೃತ್ವದ ಪೀಠವು ವಿಚಾರಣೆ ನಡೆಸಿತ್ತು. ಈಗ ಅವರ ಪೀಠಕ್ಕೆ ವಿಚಾರಣೆ ನಡೆಸುವಂತೆ ಅರ್ಜಿಗಳನ್ನು ಪಟ್ಟಿ ಮಾಡಲಾಗುವುದು ಎಂದು ಸುಪ್ರೀಂಕೋರ್ಟ್​ ತಿಳಿಸಿತು. ಈ ವೇಳೆ ಡಿ.ಕೆ.ಶಿವಕುಮಾರ್​ ಅವರ ಪರ ಹಿರಿಯ ವಕೀಲರಾದ ಅಭಿಷೇಕ್ ಎಂ. ಸಿಂಘ್ವಿ ಅವರು, ರಾಜಕೀಯ ವಿಷಯಗಳು ಕೋರ್ಟಿನ ಆಚೆಗೆ ಇತ್ಯರ್ಥಪಡಿಸಿಕೊಳ್ಳಬೇಕು ಎಂದು ಎಂದು ಸಿಜೆಐ ಈ ಹಿಂದೆ ಹೇಳಿದ್ದರು ಎಂದು ಪೀಠದ ಗಮನಕ್ಕೆ ತಂದರು.

ಡಿ.ಕೆ.ಶಿವಕುಮಾರ್ ಅವರು ಆದಾಯಕ್ಕಿಂತ ಅಧಿಕ ಅಕ್ರಮ ಆಸ್ತಿ ಗಳಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ 2019ರ ಸೆಪ್ಟೆಂಬರ್​ 25 ರಂದು ಸಿಬಿಐ ತನಿಖೆಗೆ ವಹಿಸಿತ್ತು. ಕೇಂದ್ರ ತನಿಖಾ ಸಂಸ್ಥೆಯು ಶಿವಕುಮಾರ್ ವಿರುದ್ಧ ಅಕ್ಟೋಬರ್ 3, 2020 ರಂದು ಪ್ರಕರಣ ದಾಖಲಿಸಿ ವಿಚಾರಣೆ ನಡೆಸುತ್ತಿದೆ.

ಇದನ್ನೂ ಓದಿ: Caste Census: ಇದು ಜಾತಿಗಣತಿಯಲ್ಲ, ಸಾಮಾಜಿಕ ನ್ಯಾಯ ಒದಗಿಸುವ ಸಮೀಕ್ಷೆ: ಡಿಸಿಎಂ ಡಿಕೆಶಿ