ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IPS Alok Kumar: ಅಲೋಕ್ ಕುಮಾರ್​ಗೆ ಡಿಜಿಪಿಯಾಗಿ ಬಡ್ತಿ, ಕಾರಾಗೃಹ ಇಲಾಖೆಗೆ ವರ್ಗ

2019 ರಲ್ಲಿ ನಡೆದಿದ್ದ ಫೋನ್ ಟ್ಯಾಪಿಂಗ್ ಹಗರಣ ಪ್ರಕರಣದಲ್ಲಿ ಅಲೋಕ್ ಕುಮಾರ್ (IPS Alok Kumar) ಸೇರಿ ಕೆಲ ಅಧಿಕಾರಿಗಳ ವಿರುದ್ಧ ರಾಜ್ಯ ಸರ್ಕಾರ ಇಲಾಖಾ ತನಿಖೆಗೆ ಆದೇಶ ಹೊರಡಿಸಿತ್ತು. ಅಲೋಕ್‌ ಕುಮಾರ್‌ ಮೇಲಿನ ತನಿಖೆ ರದ್ದುಗೊಳಿಸಿ ಮಹತ್ವದ ತೀರ್ಪು ನೀಡಲಾಗಿತ್ತು. ಜೊತೆಗೆ ತಡೆಹಿಡಿಯಲಾಗಿದ್ದ ಬಡ್ತಿ ಮತ್ತು ಸೌಲಭ್ಯಗಳನ್ನು ನೀಡುವಂತೆ ಆದೇಶಿಸಲಾಗಿತ್ತು. ಹೀಗಾಗಿ ಅಲೋಕ್‌ ಕುಮಾರ್‌ ಗೆದ್ದಿದ್ದಾರೆ.

ಅಲೋಕ್ ಕುಮಾರ್​ಗೆ ಡಿಜಿಪಿಯಾಗಿ ಬಡ್ತಿ, ಕಾರಾಗೃಹ ಇಲಾಖೆಗೆ ವರ್ಗ

ಐಪಿಎಸ್‌ ಅಲೋಕ್‌ ಕುಮಾರ್ -

ಹರೀಶ್‌ ಕೇರ
ಹರೀಶ್‌ ಕೇರ Dec 11, 2025 9:31 AM

ಬೆಂಗಳೂರು, ಡಿ.10: ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ (IPS Alok Kumar) ವಿರುದ್ಧದ ಫೋನ್ ಟ್ಯಾಪಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆದೇಶಿಸಿದ್ದ ಇಲಾಖಾ ತನಿಖೆಯನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಇತ್ತೀಚೆಗೆ ರದ್ದುಗೊಳಿಸಿತ್ತು. ಈ ಬೆನ್ನಲ್ಲೇ ಇದಿಗ ಅಲೋಕ್ ಕುಮಾರ್​ಗೆ ಎಡಿಜಿಪಿಯಿಂದ ಡಿಜಿಪಿಯಾಗಿ (DGP) ಬಡ್ತಿ ನೀಡಿದ ರಾಜ್ಯ ಸರ್ಕಾರ, ಕಾರಾಗೃಹ ಇಲಾಖೆಗೆ ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ. ಆ ಮೂಲಕ 8 ತಿಂಗಳ ಹೋರಾಟಕ್ಕೆ ಜಯ ಸಿಕ್ಕಿದೆ.

ಅಲೋಕ್ ಕುಮಾರ್‌ಗೆ ಕಾರಾಗೃಹ ಇಲಾಖೆಯ ಡಿಜಿಪಿಯಾಗಿ ವರ್ಗಾವಣೆ ಹಿನ್ನಲೆ ಪೊಲೀಸ್ ತರಬೇತಿ ಇಲಾಖೆಯ ಎಡಿಜಿಪಿಯಾಗಿ ಬಿ.ದಯಾನಂದ್​​​ರನ್ನು ವರ್ಗಾವಣೆ ಮಾಡಿದೆ. 2019 ರಲ್ಲಿ ನಡೆದಿದ್ದ ಫೋನ್ ಟ್ಯಾಪಿಂಗ್ ಹಗರಣ ಪ್ರಕರಣದಲ್ಲಿ ಅಲೋಕ್ ಕುಮಾರ್ ಸೇರಿ ಕೆಲ ಅಧಿಕಾರಿಗಳ ವಿರುದ್ಧ ರಾಜ್ಯ ಸರ್ಕಾರ ಇಲಾಖಾ ತನಿಖೆಗೆ ಆದೇಶ ಹೊರಡಿಸಿತ್ತು. ಈ ವೇಳೆ ಅಲೋಕ್ ಕುಮಾರ್ ನಗರ ಪೊಲೀಸ್ ಆಯುಕ್ತರಾಗಿದ್ದರು. ಸಿಬಿಐ ಪ್ರಕರಣದ ಬಗ್ಗೆ ತನಿಖೆ ನಡೆಸಿ ಬಿ ರಿಪೋರ್ಟ್ ಸಲ್ಲಿಸಿತ್ತು. ಆದರೆ 2025 ಮೇ ತಿಂಗಳಿನಲ್ಲಿ ಇಲಾಖಾ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿತ್ತು. ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಅಲೋಕ್ ಕುಮಾರ್ ಅವರು ಇತ್ತೀಚೆಗೆ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಮೊರೆ ಹೋಗಿದ್ದರು. ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗಿದೆ ಎಂದು ವಾದಿಸಿದ್ದರು.

ಜನಸ್ನೇಹಿ ಕಾರ್ಯನಿರ್ವಹಣೆಗೆ ಪೊಲೀಸ್ ಇಲಾಖೆ ಬದ್ದ: ಎಡಿಜಿಪಿ ಅಲೋಕ್‌ಕುಮಾರ್

ಅಲೋಕ್ ಕುಮಾರ್​ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾಡಿದ್ದ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿಯ ಇಬ್ಬರು ನ್ಯಾಯಮೂರ್ತಿಗಳು ವಿಭಿನ್ನ ತೀರ್ಪು ನೀಡಿದ್ದರು. ಹೀಗಾಗಿ ವಿಚಾರಣೆ ಸಿಎಟಿ ಮುಖ್ಯಸ್ಥ ನ್ಯಾಯಮೂರ್ತಿ ರಣ್‌ಜೀತ್ ಬಳಿಗೆ ಹೋಗಿತ್ತು. ಈ ವೇಳೆ ವಾದ ಪ್ರತಿವಾದದ ಬಳಿಕ ಅಕ್ಟೋಬರ್ 14ರಂದು ತನಿಖೆಯನ್ನು ರದ್ದುಗೊಳಿಸಿ ಮಹತ್ವದ ತೀರ್ಪು ನೀಡಲಾಗಿತ್ತು. ಜೊತೆಗೆ ತಡೆಹಿಡಿಯಲಾಗಿದ್ದ ಬಡ್ತಿ ಮತ್ತು ಸೌಲಭ್ಯಗಳನ್ನು ನೀಡುವಂತೆ ಆದೇಶಿಸಲಾಗಿತ್ತು. ಆ ಮೂಲಕ ಅಲೋಕ್ ಕುಮಾರ್​​ ಅವರು ಗೆದ್ದಿದ್ದರು.

ಸರ್ಕಾರ ಸಿಐಟಿ ಆದೇಶ ಪ್ರಶ್ನಿಸಿ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು. ಆದರೆ ಸಿಎಟಿ ಆದೇಶಕ್ಕೆ ಹೈಕೋರ್ಟ್ ತಡೆ ನೀಡಲು ನಿರಾಕರಿಸಿತ್ತು. ಹೀಗಾಗಿ ಇದೀಗ ಅಲೋಕ್ ಕುಮಾರ್​ಗೆ ಬಡ್ತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.