ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Moral Policing: ನೈತಿಕ ಪೊಲೀಸ್‌ಗಿರಿ; ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಿದ್ದ 6 ಮಂದಿ ಬಂಧನ

Moral Policing: ಕಲಬುರಗಿ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಬೈಲಪ್ಪ ಎಂಬ ಯುವಕ, ಅದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಯುವತಿಗೆ ಬೈಕ್‌ನಲ್ಲಿ ಡ್ರಾಪ್ ನೀಡಿದ್ದ. ಇದನ್ನು ಕಂಡ ಅನ್ಯಕೋಮಿನ 15 ಯುವಕರು ಬೈಕ್ ಅಡ್ಡಗಟ್ಟಿ, ಮಾರಣಾಂತಿಕ ಹಲ್ಲೆ ನಡೆಸಿದ್ದರು. ಇದೀಗ ಆರೋಪಿಗಳ ಪೈಕಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ನೈತಿಕ ಪೊಲೀಸ್‌ಗಿರಿ; ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಿದ್ದ 6 ಮಂದಿ ಬಂಧನ

Profile Prabhakara R Jun 28, 2025 5:46 PM

ಕಲಬುರಗಿ: ತುರ್ತು ಕೆಲಸವಿದೆ ನನ್ನನ್ನೂ ಬೈಕ್ ಮೇಲೆ ಡ್ರಾಪ್ ಮಾಡು ಎಂದು ಕೇಳಿದ ಯುವತಿಯನ್ನು ಬೈಕ್‌ನಲ್ಲಿ ಕರೆದುಕೊಂಡು ಹೋಗಿದ್ದಕ್ಕೆ ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ನಗರದ ಸಂತ್ರಾಸವಾಡಿ ಪ್ರದೇಶದಲ್ಲಿ ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರಿಂದ ಪೊಲೀಸ್ ಪೊಲೀಸ್‌ಗಿರಿ ನಡೆದಿತ್ತು. ಈ ಕುರಿತು ಮಾಧ್ಯಮಗಳು ವರದಿ ಪ್ರಕಟಿಸಿದ್ದವು. ಇದರಿಂದ ಎಚ್ಚೆತ್ತುಕೊಂಡ ಎಂ.ಬಿ. ನಗರ ಠಾಣೆಯ ಪೊಲೀಸರು, ಆರು ಕಿಡಿಗೇಡಿಗಳನ್ನು ಬಂಧಿಸಿದ್ದಾರೆ.

ಮಹ್ಮದ್ ಸಲ್ಮಾನ್, ಮಹ್ಮದ್ ಆದಿಲ್, ಮಹ್ಮದ್ ರೆಹಾನ್, ಮಹ್ಮದ್ ಉಜೈರ್, ಮಹ್ಮದ್ ಫೈಜ್, ಮಹ್ಮದ್ ಆಸಿಫ್ ಬಂಧಿತ ಆರೋಪಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ.

ನಗರದ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಬೈಲಪ್ಪ, ಅದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಯುವತಿಗೆ ಬೈಕ್ ಮೇಲೆ ಡ್ರಾಪ್ ನೀಡಿದ್ದ. ಇದನ್ನು ಕಂಡ ಅನ್ಯಕೋಮಿನ 15 ಯುವಕರು ಬೈಕ್ ಅಡ್ಡಗಟ್ಟಿ, ಮಾರಣಾಂತಿಕ ಹಲ್ಲೆ ನಡೆಸಿದ್ದರು. ಇದೀಗ ಆರೋಪಿಗಳ ಪೈಕಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Bengaluru stampede: ಕಾಲ್ತುಳಿತ ಪ್ರಕರಣ; ಮೂವರು ಐಪಿಎಸ್ ಅಧಿಕಾರಿಗಳ ಅಮಾನತು ಆದೇಶ ಅನುಮೋದಿಸಿದ ಕೇಂದ್ರ

ತಮ್ಮನ ಅಂತ್ಯ ಸಂಸ್ಕಾರಕ್ಕೆ ಬಂದಿದ್ದ ಅಕ್ಕನೂ ಅಪಘಾತದಲ್ಲಿ ಸಾವು!

accident (9)

ಮಂಗಳೂರು: ತಮ್ಮನ ಅಂತ್ಯ ಸಂಸ್ಕಾರಕ್ಕೆಂದು ಚೆನ್ನೈನಿಂದ ಬಂದಿದ್ದ ಅಕ್ಕ ಕೂಡ ಅಪಘಾತದಲ್ಲಿ ಮೃತಪಟ್ಟಿರುವ ಘೋರ ಘಟನೆ (Road Accident) ನಗರದ ಹೊರವಲಯದ ಪಾವಂಜೆ ಬಳಿ ನಡೆದಿದೆ. ಅಪಘಾತದಲ್ಲಿ ಗಾಯಗೊಂಡ ಯುವತಿ ಚಿಕಿತ್ಸೆ ಫಲಿಸದೆ, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ನಗರದ ಬಂಗ್ರಕೂಳೂರು ನಿವಾಸಿ ಶ್ರುತಿ (27) ಮೃತೆ.

ಕಂಪ್ಯೂಟರ್ ಎಂಜಿನಿಯರಿಂಗ್ ಮುಗಿಸಿರುವ ಶ್ರುತಿ, ಚೆನ್ನೈನಲ್ಲಿ ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದರು. ಮೆಕ್ಯಾನಿಕ್ ಆಗಿದ್ದ ತನ್ನ ಸಹೋದರ ಸುಜಿತ್, ಜೂನ್ 10ರಂದು ಮೃತಪಟ್ಟ ಹಿನ್ನೆಲೆಯಲ್ಲಿ ಅವರು ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಲು ಕೆಲಸಕ್ಕೆ ರಜೆ ಹಾಕಿ ಮನೆಗೆ ಬಂದಿದ್ದಳು.

ಈ ನಡುವೆ ಬ್ಯಾಂಕ್ ಕೆಲಸಕ್ಕೆಂದು ತಂದೆಯೊಂದಿಗೆ ಸ್ಕೂಟರ್​ನಲ್ಲಿ ಕಿನ್ನಿಗೋಳಿ ಕಡೆಗೆ ಹೋಗಿ ಮತ್ತೆ ಮನೆಯತ್ತ ಹಿಂದೆ ಬರುತ್ತಿದ್ದಳು. ಮಳೆ ಬಂದ ಹಿನ್ನೆಲೆಯಲ್ಲಿ ಪಾವಂಜೆ ಬಳಿ‌ ಸ್ಕೂಟರ್ ನಿಲ್ಲಿಸಿ, ರೈನ್ ಕೋಟ್ ಹಾಕುತ್ತಿದ್ದ ವೇಳೆ ಉಡುಪಿಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಸ್ಕೂಟರ್​ ಹಾಗೂ ಅಲ್ಲೇ ನಿಂತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಕಾರು, ಯುವತಿಯ ಸಹಿತ ಎಳೆದೊಯ್ದು ಹೆದ್ದಾರಿ ಬದಿಯಿದ್ದ ಸಿಮೆಂಟ್ ಸ್ಲ್ಯಾಬ್‌ಗೆ ಅಪ್ಪಳಿಸಿದೆ.

ಇದರಿಂದ ಗಂಭೀರ ಗಾಯಗೊಂಡ ಶ್ರುತಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಈಕೆಯ ಜತೆಗಿದ್ದ ತಂದೆ ಗೋಪಾಲ ಆಚಾರ್ಯ (57) ಕೂಡ ಅಪಘಾತದಲ್ಲಿ ಗಾಯಗೊಂಡಿದ್ದು, ಅವರ ಕಾಲಿನ ಮೂಳೆ ಮುರಿದಿದೆ. ಘಟನೆಯಲ್ಲಿ ಮತ್ತೊಬ್ಬ ಮಹಿಳೆಯೂ ಗಾಯಗೊಂಡಿದ್ದಾರೆ.

ಈ ಸುದ್ದಿಯನ್ನೂ ಓದಿ | Murder Case: 3ನೇ ಹೆಂಡ್ತಿಯನ್ನು ಕೊಂದು ಶವವನ್ನು ಲಗೇಜ್‌ ಎಂದು ಬಸ್‌ನಲ್ಲಿ ಹಾಕಿದ್ದ ಭೂಪ; 23 ವರ್ಷಗಳ ಬಳಿಕ ಅರೆಸ್ಟ್‌!

ಗೋಪಾಲ ಆಚಾರ್ಯರಿಗೆ ಇಬ್ಬರೇ ಮಕ್ಕಳಿದ್ದು, ಪುತ್ರ 15 ದಿನಗಳ ಹಿಂದಷ್ಟೇ ಮೃತಪಟ್ಟಿದ್ದ. ಆ ನೋವು ಮಾಸುವ ಮುನ್ನವೇ ಪುತ್ರಿಯೂ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾಳೆ. ಅಪಘಾತದ ಬಗ್ಗೆ ಮುಲ್ಕಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.