Self Harming: ಮದುವೆ ವಿಚಾರಕ್ಕೆ ಗಲಾಟೆ, ಮಗಳು ಬಾವಿಗೆ ಹಾರಿ ಆತ್ಮಹತ್ಯೆ, ರಕ್ಷಿಸಲು ಹೋದ ತಾಯಿಯೂ ಸಾವು
Kalaburagi: ಮಧುಮತಿ ಮದುವೆ ವಿಷಯಕ್ಕೆ ಕುಟುಂಬದಲ್ಲಿ ಜಗಳ ನಡೆದಿತ್ತು. ಮದುವೆ ವಿಷಯಕ್ಕೆ ಗಲಾಟೆಯಾಗಿ ಮಧುಮತಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗಳನ್ನು ರಕ್ಷಿಸಲು ಹೋಗಿ ತಾಯಿಯೂ ಬಾವಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

-

ಕಲಬುರಗಿ : ಮದುವೆ ವಿಚಾರಕ್ಕೆ ಸಂಭವಿಸಿದ ಗಲಾಟೆಯಿಂದ ನೊಂದ ಮಗಳು ಬಾವಿಗೆ ಹಾರಿ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾಳೆ. ಈ ವೇಳೆ ಆಕೆಯನ್ನು ರಕ್ಷಿಸಲು ಹೋದ ತಾಯಿಯೂ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ತಡಕಲ್ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ತಾಯಿ ಜಗದೇವಿ (47), ಪುತ್ರಿ ಮಧುಮತಿ (22) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಮಧುಮತಿ ಮದುವೆ ವಿಷಯಕ್ಕೆ ಕುಟುಂಬದಲ್ಲಿ ಜಗಳ ನಡೆದಿತ್ತು. ಮದುವೆ ವಿಷಯಕ್ಕೆ ಗಲಾಟೆಯಾಗಿ ಮಧುಮತಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗಳನ್ನು ರಕ್ಷಿಸಲು ಹೋಗಿ ತಾಯಿಯೂ ಬಾವಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರಡಿ ದಾಳಿ , ಇಬ್ಬರು ರೈತರಿಗೆ ಗಂಭೀರ ಗಾಯ
ಚಿಕ್ಕಬಳ್ಳಾಪುರ: ತಾಲೂಕಿನ ಗುರುಕುಲ ನಾಗೇನಹಳ್ಳಿ ಗ್ರಾಮದಲ್ಲಿ ಕರಡಿ ದಾಳಿಯಿಂದ (Bear Attack) ಇಬ್ಬರು ರೈತರು ಗಾಯಗೊಂಡಿದ್ದಾರೆ. ಟೊಮೇಟೊ ತೋಟದಲ್ಲಿ ಕೆಲಸ ಮಾಡುತ್ತಿದ್ದ ನರಸಿಂಹಪ್ಪ ಎಂಬುವರ ಮೇಲೆ ಕರಡಿ ದಾಳಿ ಮಾಡಿದ್ದು, ಇವರಿಗೆ ಮುಖ, ತಲೆ, ಕಿವಿ, ಕಣ್ಣು ಹಾಗೂ ದೇಹದ ಮೇಲೆ ಗಂಭೀರ ಗಾಯಗಳಾಗಿವೆ. ಇದೇ ವೇಳೆ ಪಕ್ಕದ ತೋಟದಲ್ಲಿದ್ದ ಕೃಷ್ಣಪ್ಪ ಎಂಬುವರ ಮೇಲೆಯೂ ಕರಡಿ ದಾಳಿ ಮಾಡಿದ್ದು, ಇವರ ಕೈಗೆ ಗಾಯವಾಗಿದೆ.
ಕರಡಿ ದಾಳಿಗೆ ಒಳಗಾದ ರೈತ ನರಸಿಂಹಪ್ಪ ಹಾಗೂ ಕೃಷ್ಣಪ್ಪ ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ನರಸಿಂಹಪ್ಪ ಸ್ಥಿತಿ ಗಂಭೀರವಾಗಿದೆ. ನರಸಿಂಹಪ್ಪನ ಮೇಲೆ ದಾಳಿ ಮಾಡಿದ ಕರಡಿ, ಪಕ್ಕದ ತೋಟದಲ್ಲಿದ್ದ ಕೃಷ್ಣಪ್ಪ ಎಂಬುವರ ಮೇಲೂ ದಾಳಿ ಮಾಡಿದೆ. ಕೃಷ್ಣಪ್ಪನ ಕೈಯನ್ನು ಬಲವಾಗಿ ಹಿಡಿದು ಕಚ್ಚಿದ್ದರಿಂದ ಆಘಾತಕ್ಕೊಳಗಾದ ಆತ ಸಹಾಯಕ್ಕಾಗಿ ಜೋರಾಗಿ ಕಿರುಚಿಕೊಂಡಿದ್ದಾರೆ. ಅತನ ನೋಡಿ ಅಕ್ಕಪಕ್ಕದ ತೋಟದ ರೈತರು ಓಡಿ ಬಂದಿದ್ದಾರೆ. ಜನರ ಗುಂಪು ಬರುತ್ತಿರುವುದನ್ನು ಗಮನಿಸಿದ ಕರಡಿ, ಕೃಷ್ಣಪ್ಪ ಅವರ ಕೈಬಿಟ್ಟು ಓಡಿಹೋಗಿದೆ.
ಗುರುಕುಲ ನಾಗೇನಹಳ್ಳಿ ಗ್ರಾಮದ ಬಳಿ ಇಬ್ಬರು ರೈತರ ಮೇಲೆ ಏಕಾಏಕಿ ಕರಡಿ ದಾಳಿ ನಡೆಸಿರುವ ಪ್ರಕರಣ ಸುತ್ತಮುತ್ತಲ ಗ್ರಾಮಗಳಲ್ಲಿ ಭೀತಿಯ ವಾತಾವರಣ ಸೃಷ್ಟಿಸಿದ್ದು ಒಬ್ಬೊಬ್ಬರೇ ತೋಟದ ಕಡೆ ಹೋಗಲು ಹಿಂಜರಿಯುವ ವಾತಾವರಣ ಸೃಷ್ಟಿಯಾಗಿದೆ. ಗಾಯಾಳು ಕೃಷ್ಣಪ್ಪ ಹೇಳುವಂತೆ ಈ ಭಾಗದಲ್ಲಿ ಇದೇ ಮೊದಲ ಬಾರಿಗೆ ಕರಡಿಯೊಂದು ಮನುಷ್ಯರ ಮೇಲೆ ದಾಳಿ ನಡೆಸಿದೆ ಎನ್ನಲಾಗಿದೆ. ಕರಡಿ ದಾಳಿಯ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಪೊಲೀಸರು ಗಾಯಾಳುಗಳನ್ನು ದಾಖಲಿಸಿರುವ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ: Man burnt alive: ಚಿತ್ರದುರ್ಗದಲ್ಲಿ ಕಾರು ಆಕಸ್ಮಿಕವಾಗಿ ಹೊತ್ತಿ ಉರಿದು ಯುವಕ ಸಜೀವ ದಹನ