ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

TA Narayana Gowda: ಮೂರ್ಖ ಕಮಲ್‌ ಹಾಸನ್‌ ಇನ್ಮುಂದೆ ಕರ್ನಾಟಕಕ್ಕೆ ಬರಲು ಬಿಡಲ್ಲ: ಕರವೇ ನಾರಾಯಣ ಗೌಡ ಎಚ್ಚರಿಕೆ

ಜೂನ್ 5ರಂದು ರಿಲೀಸ್ ಆಗಬೇಕಿದ್ದ ಸಿನಿಮಾ ಮಾತ್ರ ಅಲ್ಲ, ಇನ್ಮುಂದೆ ಕಮಲ್ ಹಾಸನ್ ಯಾವುದೇ ಸಿನಿಮಾ ಕರ್ನಾಟಕದಲ್ಲಿ ರಿಲೀಸ್ ಆಗುವುದಿಲ್ಲ. ಆಗಲು ನಾವು ಬಿಡುವುದಿಲ್ಲ. ಕ್ಷಮೆ ಕೇಳದೇ, ದುರಹಂಕಾರ ಮೆರೆದಿದ್ದಾರೆ ಎಂದು ಕರವೇ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ಕಿಡಿಕಾರಿದ್ದಾರೆ.

ಕಮಲ್‌ ಇನ್ಮುಂದೆ ಕರ್ನಾಟಕಕ್ಕೆ ಬರಲು ಬಿಡಲ್ಲ: ಟಿ.ಎ. ನಾರಾಯಣ ಗೌಡ

Profile Prabhakara R Jun 3, 2025 7:37 PM

ಬೆಂಗಳೂರು: ಮಹಾನ್‌ ಮೂರ್ಖ, ಅವಿವೇಕಿ, ಕನ್ನಡದ ಭಾಷಾ ಜ್ಞಾನ ಇಲ್ಲದ ಮಹಾನ್‌ ಸ್ವಾರ್ಥಿ ಕಮಲ್‌ ಹಾಸನ್‌ ಅಹಂಕಾರಕ್ಕೆ ಅಂತ್ಯ ಕಾಣಬೇಕು. ಕಮಲ್‌ ಜೂನ್‌ 5ರಂದು ಬಿಡುಗಡೆಯಾಗುವ ಸಿನಿಮಾ ಮಾತ್ರವಲ್ಲ, ಇನ್ನೆಂದೂ ಕಮಲ್‌ ಹಾಸನ್ (Kamal Haasan) ಸಿನಿಮಾ ಆಗಲಿ ಹಾಗೂ ಅವರಾಗಲಿ ಕರ್ನಾಟಕಕ್ಕೆ ಬರಲು ಬಿಡಬಾರದು ಎಂದು ಕರ್ನಾಟಕ ರಕ್ಷಣಾ ವೇದಿಕೆ ತೀರ್ಮಾನ ಮಾಡಿದೆ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಾಣ ಗೌಡ (TA Narayana Gowda) ತಿಳಿಸಿದ್ದಾರೆ.

`ಥಗ್‌ಲೈಫ್’ (Thug Life) ಚಿತ್ರ ಬಿಡುಗಡೆಗೆ ಭದ್ರತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ರಾಜ್ಯ ಹೈಕೋರ್ಟ್ ಮತ್ತು ನ್ಯಾಯಾಧೀಶರು ಕಮಲ್ ಹಾಸನ್‌ಗೆ ಸರಿಯಾದ ಪಾಠ ಕಲಿಸಿದ್ದಾರೆ. ನ್ಯಾಯಾಧೀಶರು ಕನ್ನಡಿಗರ ಭಾವನೆ, ಕನ್ನಡ ಜನರ ಕಳಕಳಿಯನ್ನ ಅರ್ಥ ಮಾಡಿಕೊಂಡಿದ್ದಾರೆ. ಮಧ್ಯಾಹ್ನದ ತೀರ್ಪು ಕೂಡ ಭಾಷಾ ವಿರೋಧಿಗಳಿಗೆ ತಕ್ಕ ಪಾಠ ಆಗಲಿದೆ ಎಂದರು.



ಜೂನ್ 5ರಂದು ರಿಲೀಸ್ ಆಗಬೇಕಿದ್ದ ಸಿನಿಮಾ ಮಾತ್ರ ಅಲ್ಲ, ಇನ್ಮುಂದೆ ಕಮಲ್ ಹಾಸನ್ ಯಾವುದೇ ಸಿನಿಮಾ ಕರ್ನಾಟಕದಲ್ಲಿ ರಿಲೀಸ್ ಆಗುವುದಿಲ್ಲ. ಆಗಲು ನಾವು ಬಿಡುವುದಿಲ್ಲ. ಕ್ಷಮೆ ಕೇಳದೇ, ದುರಹಂಕಾರ ಮೆರೆದಿದ್ದಾರೆ. ಇನ್ನೂ ಕಮಲ್ ಹಾಸನ್ ಯಾವತ್ತೂ ಕರ್ನಾಟಕಕ್ಕೆ ಬರಲ್ಲ ಹಾಗೂ ಒಂದು ವೇಳೆ ಬಂದರೆ ನಾವು ತಡೆಯುತ್ತೇವೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಕಮಲ್‌ ಹಾಸನ್‌ ಕನ್ನಡ ಮತ್ತು ಕನ್ನಡಿಗರ ಕ್ಷಮೆ ಕೇಳಲೇಬೇಕು: ಬಿಎಸ್‌ವೈ ಆಗ್ರಹ

ಬೆಂಗಳೂರು: ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ನಟ ಕಮಲ್‌ ಹಾಸನ್‌(Kamal Haasan controversy) ಯಾವುದೇ ಕಾರಣಕ್ಕೂ ಕ್ಷಮೆಯಾಚಿಸಲ್ಲ ಎಂದು ಹೇಳಿದ್ದಾರೆ. ಈ ನಡುವೆ ಅವರಿಗೆ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಇದೀಗ ಮಾಜಿ ಸಿಎಂ ಯಡಿಯೂರಪ್ಪ (BS Yediyurappa) ಅವರು ತಿರುಗೇಟು ನೀಡಿದ್ದಾರೆ. ಕಮಲ್‌ ಹಾಸನ್‌ ಅವರು ಗೌರವಯುತವಾಗಿ ಕನ್ನಡ ಮತ್ತು ಕನ್ನಡಿಗರ ಕ್ಷಮೆ ಕೇಳಲೇಬೇಕು. ಕ್ಷಮೆ ಕೇಳುವುದರಿಂದ ಯಾರೂ ಸಣ್ಣವರಾಗುವುದಿಲ್ಲ, ದುರಹಂಕಾರದಿಂದ ಯಾರೂ ದೊಡ್ಡವರಾಗುವುದಿಲ್ಲ ಎಂದು ಕಿಡಿಕಾರಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ‘ಕನ್ನಡವೇ ಸತ್ಯ, ಕನ್ನಡವೇ ನಿತ್ಯ’ ಕನ್ನಡಿಗರ ಘೋಷ ವಾಕ್ಯ ಮಾತ್ರವಲ್ಲ, ಇದು ಕನ್ನಡಾಂಬೆ ತಾಯಿ ಭುವನೇಶ್ವರಿ ದೇವಿಯ ಮೇಲಿರುವ ಕನ್ನಡಿಗರ ದೀಕ್ಷೆ. ಕನ್ನಡ ಯಾವುದೇ ನಿರ್ದಿಷ್ಟ ಭಾಷೆಯಿಂದ ಹುಟ್ಟಿಕೊಂಡಿಲ್ಲ ಎಂದು ಅನೇಕ ಹಿರಿಯ ಭಾಷಾ ಪರಿಣಿತರು ಸಿದ್ದ ಮಾಡಿ ತೋರಿಸಿದ್ದಾರೆ.

ಇತಿಹಾಸ, ಭಾಷಾಶಾಸ್ತ್ರ ತಜ್ಞರಲ್ಲದ ಕಲಾವಿದ ಕಮಲ್ ಹಾಸನ್ ಕನ್ನಡ ಭಾಷೆಯ ಬಗ್ಗೆ ಸಂವೇದನಾರಹಿತವಾಗಿ ಮಾತನಾಡಿರುವುದು ಅತ್ಯಂತ ಖೇದನೀಯ ಮತ್ತು ಖಂಡನಾರ್ಹ. ಅನಗತ್ಯವಾಗಿ ಶಾಂತಿ, ಸೌಹಾರ್ದತೆ, ಸಾಮರಸ್ಯಕ್ಕೆ ಭಂಗವುಂಟು ಮಾಡುವ ಅವರ ವರ್ತನೆ ಸರಿಯಲ್ಲ. ಅವರ ಅಭಿಪ್ರಾಯ ಮಂಡನೆಯ ಭರದಲ್ಲಿ ಕೋಟ್ಯಂತರ ಕನ್ನಡಿಗರ ಭಾವನೆಗಳಿಗೆ ಘಾಸಿಯುಂಟು ಮಾಡಿದ್ದು, ಅವರು ಗೌರವಯುತವಾಗಿ ಕನ್ನಡ ಮತ್ತು ಕನ್ನಡಿಗರ ಕ್ಷಮೆ ಕೇಳಲೇಬೇಕು. ಕ್ಷಮೆ ಕೇಳುವುದರಿಂದ ಯಾರೂ ಸಣ್ಣವರಾಗುವುದಿಲ್ಲ, ದುರಹಂಕಾರದಿಂದ ಯಾರೂ ದೊಡ್ಡವರಾಗುವುದಿಲ್ಲ ಎಂದು ತಿಳಿಸಿದ್ದಾರೆ.