ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Kannada Rajyotsava: ಕನ್ನಡ ಭಾಷೆ ಹೆಚ್ಚು ಬಳಸಿ, ಬೆಳೆಸಿ: ಬಿ.ವೈ. ವಿಜಯೇಂದ್ರ

BY Vijayendra: ಶಿಕಾರಿಪುರದಲ್ಲಿ ತಾಲೂಕು ಆಡಳಿತ ಹಾಗೂ ಕನ್ನಡ ಯುವಕ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಿಸಿ, ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮಾತನಾಡಿದ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆ ನಮ್ಮ ಹೆಗ್ಗುರುತು. ಕನ್ನಡ ಭಾಷೆಯನ್ನು ಹೆಚ್ಚಾಗಿ ಬಳಸಿ, ಉಳಿಸಿ, ಬೆಳೆಸುವ ಮೂಲಕ ನಾವೆಲ್ಲರೂ ಕನ್ನಡಮ್ಮನ ಸೇವೆ ಮಾಡೋಣ ಎಂದು ತಿಳಿಸಿದ್ದಾರೆ.

ಕನ್ನಡ ಭಾಷೆ ಹೆಚ್ಚು ಬಳಸಿ, ಬೆಳೆಸಿ: ಬಿ.ವೈ. ವಿಜಯೇಂದ್ರ

-

Profile Siddalinga Swamy Nov 1, 2025 4:11 PM

ಶಿಕಾರಿಪುರ, ನ.1: ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆ ನಮ್ಮ ಹೆಗ್ಗುರುತು. ಕನ್ನಡ ಭಾಷೆಯನ್ನು ಹೆಚ್ಚಾಗಿ ಬಳಸಿ, ಉಳಿಸಿ, ಬೆಳೆಸುವ ಮೂಲಕ ನಾವೆಲ್ಲರೂ ಕನ್ನಡಮ್ಮನ ಸೇವೆ ಮಾಡೋಣ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ತಿಳಿಸಿದರು. ಶಿಕಾರಿಪುರದಲ್ಲಿ ತಾಲೂಕು ಆಡಳಿತ ಹಾಗೂ ಕನ್ನಡ ಯುವಕ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ (Kannada Rajyotsava) ಕಾರ್ಯಕ್ರಮಗಳ ಉದ್ಘಾಟನೆ ನೆರವೇರಿಸಿ, ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಬಳಿಕ ಅವರು ಮಾತನಾಡಿದರು.

ಕನ್ನಡವು ನಮ್ಮೆಲ್ಲರ ಉಸಿರಾಗಲಿ. ಕನ್ನಡ ಭಾಷೆಯನ್ನು ಹೆಚ್ಚಾಗಿ ಬಳಸಿ, ಉಳಿಸಿ, ಬೆಳೆಸುವ ಮೂಲಕ ನಾವೆಲ್ಲರೂ ಕನ್ನಡಮ್ಮನ ಸೇವೆ ಮಾಡೋಣ ಎಂದು ಅವರು ಹೇಳಿದರು.

BY Vijayendra 1

ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಗಳು, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರಘು ಎಚ್.ಎಸ್., ವಿವಿಧ ಇಲಾಖೆಗಳ ಅಧಿಕಾರಿಗಳು, ಕನ್ನಡ ಯುವಕ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.‌

ಈ ಸುದ್ದಿಯನ್ನೂ ಓದಿ | Karnataka Rajyotsava: ಕನ್ನಡ ನಾಡು ನುಡಿಯ ಶ್ರೇಷ್ಠತೆ ಸಾರುವ ಚಿತ್ರ ಗೀತೆಗಳಿವು

ಕನ್ನಡ ರಾಜ್ಯೋತ್ಸವಕ್ಕೆ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ (Namma Metro) ಬಿಎಮ್‌ಆರ್‌ಸಿಎಲ್‌ ಗುಡ್‌ ನ್ಯೂಸ್‌ ನೀಡಿದೆ. ನವೆಂಬರ್.1ರ ಇಂದಿನಿಂದ ( Kannada Rajyotsava) ಹೆಚ್ಚುವರಿಯಾಗಿ ಐದು ರೈಲುಗಳು ವಾಣಿಜ್ಯ ಸಂಚಾರ ಆರಂಭಿಸಲಿವೆ. ಹೀಗಾಗಿ ಪ್ರತಿ 15 ನಿಮಿಷಕ್ಕೊಂದು ರೈಲುಗಳು ಸಂಚರಿಸಲಿವೆ ಎಂದು ಬಿಎಮ್‌ಆರ್‌ಸಿಎಲ್‌ ತಿಳಿಸಿದೆ. ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ರಾಜ್ಯೋತ್ಸವದ 70 ನೇ ವರ್ಷದ ಆಚರಣೆಯ ಸಂದರ್ಭದಲ್ಲಿ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (BMRCL), ದಿನಾಂಕ 1ನೇ ನವೆಂಬರ್ 2025ರಿಂದ ಹಳದಿ ಮಾರ್ಗದಲ್ಲಿ (Yellow Line) ಐದನೇ ಮೆಟ್ರೋ ರೈಲನ್ನು ವಾಣಿಜ್ಯ ಸೇವೆಗೆ ಒಳಪಡಿಸುತ್ತಿದೆ ಎಂದು ತಿಳಿಸಲಾಗಿದೆ.

ಈ ಹೊಸ ರೈಲಿನ ಸೇರ್ಪಡೆಯೊಂದಿಗೆ, ಹಳದಿ ಮಾರ್ಗದಲ್ಲಿ ಪೀಕ್ ಅವರ್‌ನಲ್ಲಿ ರೈಲುಗಳ ಆವರ್ತನವು 19 ನಿಮಿಷಗಳಿಗೆ ಬದಲಾಗಿ ಪ್ರತಿ 15 ನಿಮಿಷಕ್ಕೆ ರೈಲುಗಳು ಚಲಿಸಲಿವೆ ಎಂದು ಅದು ಹೇಳಿದೆ. ಇದರಿಂದಾಗಿ ಪ್ರಯಾಣಿಕರಿಗೆ ಕಡಿಮೆ ಅವಧಿಯಲ್ಲಿ ಸುಗಮ ಮತ್ತು ನಿರಂತರ ಸೇವೆ ನೀಡಲು ಸಹಾಯಕವಾಗಲಿದೆ. ಈ ಬದಲಾವಣೆಯು ಎಲ್ಲ ದಿನಗಳಿಗೆ ಅನ್ವಯವಾಗುತ್ತದೆ' ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಹೇಳಿಕೆಯಲ್ಲಿ ತಿಳಿಸಿದೆ.

ಸದ್ಯ 4 ರೈಲುಗಳು ಸಂಚಾರ ನಡೆಸುತ್ತಿದ್ದು, 19 ನಿಮಿಷ ಅಂತರದಲ್ಲಿ ರೈಲು ಸೇವೆ ಲಭ್ಯವಿತ್ತು. ಈ ಹೊಸ ರೈಲಿನ ಚಾಲನೆಯಿಂದ, ಹಳದಿ ಮಾರ್ಗದಲ್ಲಿ ಪ್ರಯಾಣ ಅನುಕೂಲಕರವಾಗಲಿದೆ. ಆರ್‌ವಿ ರಸ್ತೆ ಮತ್ತು ಬೊಮ್ಮಸಂದ್ರ ಟರ್ಮಿನಲ್‌ಗಳಿಂದ ಹೊರಡುವ ಮೊದಲ ಮತ್ತು ಕೊನೆಯ ರೈಲುಗಳ ಸಮಯಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಪ್ರಯಾಣಿಕರು ಈ ಸುಧಾರಿತ ಮೆಟ್ರೋ ಸೇವೆಗಳ ಸದುಪಯೋಗ ಪಡೆಯುವಂತೆ ಎಂದು ನಿಗಮ ಸೂಚಿಸಿದೆ. ಈ ಹಿಂದೆ ಸೆಪ್ಟೆಂಬರ್ ತಿಂಗಳಲ್ಲಿ ಬಿಎಂಆರ್‌ಸಿಎಲ್ ನಾಲ್ಕನೇ ರೈಲು ಅನ್ನು ಹಳದಿ ಮಾರ್ಗದಲ್ಲಿ ಸೇರಿಸಿತ್ತು. ಅದರಿಂದ ರೈಲುಗಳ ಪ್ರಯಾಣದ ಅಂತರ 25 ನಿಮಿಷಗಳಿಂದ 19 ನಿಮಿಷಗಳಿಗೆ ಇಳಿಕೆಯಾಗಿತ್ತು. ಈಗ ಐದನೇ ರೈಲು ಸೇರ್ಪಡೆಯೊಂದಿಗೆ, ಆ ಅಂತರವನ್ನು ಮತ್ತಷ್ಟು ಕಡಿಮೆ ಮಾಡಿ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

ಈ ಸುದ್ದಿಯನ್ನೂ ಓದಿ | LPG Gas Price: ಗುಡ್‌ನ್ಯೂಸ್‌... ಗುಡ್‌ನ್ಯೂಸ್‌! LPG ಗ್ಯಾಸ್‌ ಮತ್ತಷ್ಟು ಅಗ್ಗ!

ಮಾರ್ಗ ವಿಸ್ತರಿಸಲು ಚಿಂತನೆ

ಸಾವಿರಾರು ಜನರಿಗೆ ಅನುಕೂಲವಾಗಿರುವ ಹಳದಿ ಮೆಟ್ರೋ ಮಾರ್ಗದ ವಿಸ್ತರಣೆಗೆ ಸರ್ಕಾರ ಚಿಂತನೆ ನಡೆಸಿದೆ. ಸದ್ಯ ಈ ಹಳದಿ ಮಾರ್ಗವನ್ನು 10 ರಿಂದ 12 ಕಿ.ಮೀವರೆಗೂ ವಿಸ್ತರಣೆ ಮಾಡಲು ಸರ್ಕಾರ ಮುಂದಾಗಿದೆ. ಹೈದರಾಬಾದ್‌ ಮೂಲಕ ಸಂಸ್ಥೆಗೆ ವಿಸ್ತೃತ ಯೋಜನಾ ವರದಿ (ಡಿಪಿಆರ್‌) ಸಿದ್ಧಪಡೆಸುವ ಜವಾಬ್ದಾರಿ ನಡೆದಿದೆ. ಮಾರ್ಗ ಸಮೀಕ್ಷೆ ಕಾರ್ಯಗಳು ನಡೆಯುತ್ತಿದೆ. ಎಲ್ಲಾ ಅಂದುಕೊಂಡತೆ ಆದರೆ, ಆರ್‌ ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೂ ಇರುವ ಹಳದಿ ಮಾರ್ಗವು ಚಂದಾಪುರ ಮೂಲಕ ಅತ್ತಿಬೆಲೆವರೆಗೂ ವಿಸ್ತರಣೆಯಾಗಲಿದೆ.