ಕರ್ನಾಟಕ ಬಜೆಟ್​ ಮಹಿಳಾ ದಿನಾಚರಣೆ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Budget 2025 : ನೀರಾವರಿ ಕ್ಷೇತ್ರಕ್ಕೆ ಈ ಬಾರಿ ಬಜೆಟ್‌ನಲ್ಲಿ ಏನ್ ಸಿಕ್ತು? ಇಲ್ಲಿದೆ ಡಿಟೇಲ್ಸ್‌

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮ ದಾಖಲೆಯ 16ನೆ ಬಜೆಟ್​ ಮಂಡನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರ ದಾಖಲೆ 16ನೇ ಬಜೆಟ್​ನಲ್ಲಿ ಜನರು ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಆಯವ್ಯಯ​ ಬಜೆಟ್​ ಗಾತ್ರ 4,09,549 ಕೋಟಿ ರೂಪಾಯಿ ಇದೆ. ಇನ್ನು ಈ ಬಜೆಟ್‌ನಲ್ಲಿ ನೀರಾವರಿ ಕ್ಷೇತ್ರಕ್ಕೆ ಎಷ್ಟು ಅನುದಾದ ಸಿಕ್ಕಿದೆ ಎಂಬ ಮಾಹಿತಿ ಇಲ್ಲಿದೆ.

ನೀರಾವರಿ ಕ್ಷೇತ್ರಕ್ಕೆ ಎಷ್ಟು ಅನುದಾನ? ಇಲ್ಲಿದೆ ಡಿಟೇಲ್ಸ್‌

Profile Rakshita Karkera Mar 7, 2025 12:12 PM

ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಪ್ರಸಕ್ತ ಸಾಲಿನ ರಾಜ್ಯ ಬಜೆಟ್‌ ಮಂಡನೆ(Karnataka Budget 2025) ಮಾಡುತ್ತಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ರೈತರು, ಮೀನುಗಾರರು ಮುಂತಾದವರ ಆದಾಯ ಹೆಚ್ಚಿಸುವ ಈ ಯೋಜನೆಗಳು ಭವಿಷ್ಯದ ಕರ್ನಾಟಕದ ಆರ್ಥಿಕಾಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಲಿವೆ. ಕೃಷಿ ಮತ್ತು ಇನ್ನಿತರೆ ಆಸ್ತಿಗಳ ದಾಖಲೀಕರಣ, ಮೂಲಸೌಲಭ್ಯ ಒದಗಿಸುವಿಕೆ, ಸಮರ್ಪಕ ವಿದ್ಯುತ್‌ ಪೂರೈಕೆ, ಗೋದಾಮುಗಳ ಒದಗಿಸುವಿಕೆ ಮುಂತಾದ ಚಟುವಟಿಕೆಗಳ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಹಾಗೂ ಗ್ರಾಮೀಣ ಜನರ ಆದಾಯ ಹೆಚ್ಚಿಸಲು ಶ್ರಮಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು. ಇನ್ನು ಈ ಬಜೆಟ್‌ನಲ್ಲಿ ನೀರಾವರಿ ಕ್ಷೇತ್ರಕ್ಕೆ ಎಷ್ಟು ಅನುದಾದ ಸಿಕ್ಕಿದೆ ಎಂಬ ಮಾಹಿತಿ ಇಲ್ಲಿದೆ.

  • ನೀರಾವರಿ ಯೋಜನೆಗಳಡಿ ನೀರಿನ ಬಳಕೆಯಲ್ಲಿ ದಕ್ಷತೆ ಹೆಚ್ಚಿಸಲು ಹಾಗೂ ನೀರು ನಿರ್ವಹಣೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಕರ್ನಾಟಕ ನೀರಾವರಿ (ತಿದ್ದುಪಡಿ) ವಿಧೇಯಕ 2024ನ್ನು ತಿದ್ದುಪಡಿ
  • ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯಡಿ ನೀರನ್ನು ಮೇಲೆತ್ತಿ ಗುರುತ್ವಾ ಕಾಲುವೆಯ ಸರಪಳಿ: 32.5 ಕಿ.ಮೀ ವರೆಗೆ ಹರಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಎಲ್ಲಾ ಎಂಟು ವಿಯರ್‌ಗಳಲ್ಲಿ ಲಭ್ಯವಾಗುವ ನೀರನ್ನು ಗುರುತ್ವಾ ಕಾಲುವೆಯ ಸರಪಳಿ: 241 ಕಿ.ಮೀ ವರೆಗೆ ಹರಿಸಲಾಗುವುದು.
  • ಭದ್ರಾ ಮೇಲ್ದಂಡೆ ಯೋಜನೆಗೆ 2023-24ರ ಕೇಂದ್ರ ಸರ್ಕಾರದ ಆಯವ್ಯಯದಲ್ಲಿ ಘೋಷಿಸಿದ 5,300 ಕೋಟಿ ರೂ. ಅನುದಾನ ಇನ್ನೂ ಬಿಡುಗಡೆಯಾಗಿರುವುದಿಲ್ಲ. ಆದರೂ, ರಾಜ್ಯ ಸರ್ಕಾರವು ಅಗತ್ಯ ಅನುದಾನವನ್ನು ಒದಗಿಸಿ ಈ ಯೋಜನೆಯನ್ನು ಪೂರ್ಣಗೊಳಿಸಲು ಕ್ರಮವಹಿಸುತ್ತಿದೆ.
  • ತರೀಕೆರೆ ಏತ ನೀರಾವರಿ ಯೋಜನೆಯಡಿ 79 ಕೆರೆಗಳನ್ನು ತುಂಬಿಸುವ ಮೂಲಕ 49,790 ಎಕರೆ ಸೂಕ್ಷ್ಮ ನೀರಾವರಿ ಸಾಮರ್ಥ್ಯ ಕಲ್ಪಿಸಲಾಗಿದೆ.
  • 2,611 ಕೋಟಿ ರೂ. ಅಂದಾಜು ಮೊತ್ತದ ಚಿತ್ರದುರ್ಗ ಶಾಖಾ ಕಾಲುವೆ ಕಾಮಗಾರಿಗಳನ್ನು ಪೂರ್ಣಗೊಳಿಸುವ ಮೂಲಕ ಹೊಸದುರ್ಗ, ಹೊಳಲ್ಕೆರೆ, ಜಗಳೂರು, ಮೊಳಕಾಲ್ಮೂರು, ಚಳ್ಳಕೆರೆ ಮತ್ತು ಪಾವಗಡ ತಾಲ್ಲೂಕುಗಳಲ್ಲಿನ 30 ಕೆರೆಗಳನ್ನು ತುಂಬಿಸಿ ಒಂದು ಲಕ್ಷದ ಎಪ್ಪತ್ತೇಳು ಸಾವಿರ ಎಕರೆ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಸಾಮರ್ಥ್ಯವನ್ನು ಕಲ್ಪಿಸಲಾಗುವುದು.
  • ಕೃಷ್ಣ ಮೇಲ್ದಂಡೆ ಯೋಜನೆ ಹಂತ-3ರ ವ್ಯಾಪ್ತಿಯ ಆಲಮಟ್ಟಿ ಅಣೆಕಟ್ಟಿನ ಗೇಟನ್ನು 524.256 ಮೀಟರ್‌ವರೆಗೆ ಎತ್ತರಿಸುವುದರಿಂದ ಮುಳುಗಡೆಯಾಗುವ ಜಮೀನುಗಳನ್ನು ಒಪ್ಪಂದ ಐತೀರ್ಪಿನ (Consent Award) ಮುಖಾಂತರ ಒಂದೇ ಹಂತದಲ್ಲಿ ಭೂಸ್ವಾಧೀನಪಡಿಸಿಕೊಂಡು ರೈತರಿಗೆ ಪರಿಹಾರ ವಿತರಣೆಗೆ ಕ್ರಮವಹಿಸಲಾಗುವುದು.
  • 2.01 ಲಕ್ಷ ಎಕರೆ ನೀರಾವರಿ ಸಾಮರ್ಥ್ಯ ಕಲ್ಪಿಸುವ ಬಾಕಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಕ್ರಮವಹಿಸಲಾಗುವುದು.
  • ಮೇಕೆದಾಟು ಸಮತೋಲನ ಜಲಾಶಯ ಯೋಜನೆಯ ಪೂರ್ವ ಸಿದ್ಧತಾ ಕಾರ್ಯ ಅಂತಿಮಗೊಂಡಿದ್ದು, ಕೇಂದ್ರ ಸರ್ಕಾರದ ಸಕ್ಷಮ ಪ್ರಾಧಿಕಾರಗಳ ತೀರುವಳಿ ದೊರೆತ ಕೂಡಲೇ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು.
  • 96. ಕಳಸಾ-ಬಂಡೂರಾ ನಾಲಾ ತಿರುವು ಯೋಜನೆಯಡಿ 3.9 ಟಿಎಂಸಿ ನೀರಿನ ಬಳಕೆಗಾಗಿ ಕೇಂದ್ರ ಸರ್ಕಾರದಿಂದ ತೀರುವಳಿಗಳನ್ನು ನಿರೀಕ್ಷಿಸಿ ಈಗಾಗಲೇ ಯೋಜನಾ ಕಾಮಗಾರಿಗಳನ್ನು ಕೆಲವು ಷರತ್ತುಗಳೊಂದಿಗೆ ಗುತ್ತಿಗೆ ವಹಿಸಲಾಗಿದೆ. ಕೇಂದ್ರ ಸರ್ಕಾರದ ಅನುಮೋದನೆ ದೊರೆತ ಕೂಡಲೇ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು.
  • ಕೃಷ್ಣಾ ಕಣಿವೆ, ಕಾವೇರಿ ಕಣಿವೆ ಹಾಗೂ ಇತರ ನದಿಗಳ ಕಣಿವೆಯ ವಿವಿಧ ಯೋಜನೆಗಳಡಿ ಬಾಕಿ ಇರುವ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಲು ಕ್ರಮವಹಿಸಲಾಗುವುದು.
  • ಕೃಷ್ಣಾ ಕಣಿವೆಯ ಅನುಷ್ಠಾನ ಹಂತದಲ್ಲಿರುವ ಆಧುನೀಕರಣ ಹಾಗೂ ಏತ ನೀರಾವರಿ ಯೋಜನೆಗಳನ್ನು PMKSY – AIBP ಯೋಜನೆಯಡಿ ಕೇಂದ್ರ ಸರ್ಕಾರದ ಸಹಾಯಧನ ಪಡೆಯಲು ಸೂಕ್ತ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು.
  • ಜಲಸಂಪನ್ಮೂಲ ಇಲಾಖೆಯಲ್ಲಿ ಕಾಮಗಾರಿಗಳ ಅಂದಾಜು ತಯಾರಿಕೆಯಲ್ಲಿ ಏಕರೂಪದ ತಾಂತ್ರಿಕ ಮಾನದಂಡಗಳನ್ನು ಜಾರಿಗೊಳಿಸಲಾಗುವುದು.

ಈ ಸುದ್ದಿಯನ್ನೂ ಓದಿ: Karnatka Budget 2025: ರಾಜ್ಯ ಆಯವ್ಯಯದ ಬಗ್ಗೆ ಸಂಪೂರ್ಣ ಮಾಹಿತಿ ಬೇಕೆ? ಬಜೆಟ್‌ ಕಾಪಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

  • ಎತ್ತಿನಹೊಳೆಯ ಯೋಜನೆಯಿಂದ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ 45 ಕೆರೆಗಳನ್ನು ಹಾಗೂ ಕೊರಟಗೆರೆ ತಾಲ್ಲೂಕಿನ 62 ಕೆರೆಗಳನ್ನು ತುಂಬಿಸಿ ಅಂತರ್ಜಲ ಹೆಚ್ಚಿಸುವ ಯೋಜನೆಯನ್ನು 553 ಕೋಟಿ ರೂ. ಮೊತ್ತದಲ್ಲಿ ಅನುಷ್ಠಾನಗೊಳಿಸಲು ಕ್ರಮ.
  • 1,080 ಕೋಟಿ ರೂ. ಮೊತ್ತದ ವೃಷಭಾವತಿ ವ್ಯಾಲಿ ಮೊದಲನೇ ಹಂತದ 70 ಕೆರೆ ತುಂಬಿಸುವ ಯೋಜನೆ;
  • 70 ಕೋಟಿ ರೂ. ಮೊತ್ತದ ಹೆಚ್‌.ಎನ್ ವ್ಯಾಲಿ 2ನೇ ಹಂತದ ಯೋಜನೆಯಡಿ 24 ಕೆರೆ ತುಂಬಿಸುವ ಯೋಜನೆ;
  • 93.50 ಕೋಟಿ ರೂ. ಮೊತ್ತದ ಬೆಂಗಳೂರು ಪೂರ್ವ ತಾಲ್ಲೂಕಿನ 18 ಕೆರೆ ತುಂಬಿಸುವ ಯೋಜನೆ