ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

KCL Season 1: ಸ್ಯಾಂಡಲ್‌ವುಡ್ ಕಲಾವಿದರು, ತಂತ್ರಜ್ಞರ ಸಮಾಗಮದಲ್ಲಿ ಏ.28ರಿಂದ ದುಬೈನ‌ ಶಾರ್ಜಾ ಮೈದಾನದಲ್ಲಿ ʼಕೆಸಿಎಲ್‌ʼ ಕ್ರಿಕೆಟ್ ಪಂದ್ಯಾವಳಿ ಆಯೋಜನೆ

KCL Season 1: ದುಬೈನಲ್ಲಿರುವ ಅನಿವಾಸಿ ಕನ್ನಡಿಗರು ಒಂದುಗೂಡಿ ಕರ್ನಾಟಕ ಸೆಲೆಬ್ರಿಟಿ ಲೀಗ್ (KCL) ಸೀಸನ್ 1 ಆಯೋಜಿಸುತ್ತಿದ್ದಾರೆ‌. ಏಪ್ರಿಲ್ 28 ರಿಂದ ಮೇ 3 ರವರೆಗೂ ದುಬೈನ‌ ಶಾರ್ಜಾ ಮೈದಾನದಲ್ಲಿ ಪಂದ್ಯಗಳು ನಡೆಯಲಿದ್ದು, ಕನ್ನಡ ಚಿತ್ರರಂಗದ ಕಲಾವಿದರು ಹಾಗೂ ತಂತ್ರಜ್ಞರು ಮಾತ್ರ ಭಾಗವಹಿಸಲಿದ್ದಾರೆ. ಅವರಿಗಾಗಿಯೇ ಈ ಟೂರ್ನಿ ಆಯೋಜಿಸಲಾಗಿದೆ. ದುಬೈನಲ್ಲಿರುವ ಸುಮಾರು ಹತ್ತು ಸಾವಿರ ಕನ್ನಡಿಗರನ್ನು ಒಂದುಗೂಡಿಸುವುದೇ ʼಕೆಸಿಎಲ್ʼ ನ ಉದ್ದೇಶ ಎಂದು ಅನಿವಾಸಿ ಕನ್ನಡಿಗ ಮಯೂರ್ ಮಾಸ್ಟರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಏ.28ರಿಂದ ʼಕೆಸಿಎಲ್‌ʼ ಸೀಸನ್ 1 ಕ್ರಿಕೆಟ್ ಪಂದ್ಯಾವಳಿ ಆಯೋಜನೆ

Profile Siddalinga Swamy Mar 31, 2025 4:08 PM

ಮೈಸೂರು: ದುಬೈನಲ್ಲಿರುವ ಅನಿವಾಸಿ‌ ಕನ್ನಡಿಗರು ಸ್ಯಾಂಡಲ್‌ವುಡ್ ನಟ-ನಟಿಯರನ್ನು‌ ಹಾಗೂ ತಂತ್ರಜ್ಞರನ್ನು ಒಂದೇ ವೇದಿಕೆಯಲ್ಲಿ ಕಂಡು ಸಂಭ್ರಮಿಸುವಂತೆ ಮಾಡುವ ಸಲುವಾಗಿ ಕರ್ನಾಟಕ ಸೆಲೆಬ್ರಿಟಿ ಲೀಗ್ ಕ್ರಿಕೆಟ್ ಪಂದ್ಯಾವಳಿ (KCL Season 1) ಆಯೋಜಿಸಿದ್ದಾರೆ. ಮೈಸೂರು ನಗರದ ಖಾಸಗಿ ಹೋಟೆಲ್‌ನಲ್ಲಿ ತಂಡದ ಆಟಗಾರರ ಹರಾಜು ಪ್ರಕ್ರಿಯೆ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಇದಕ್ಕೂ ಮೊದಲು ಶಾಸಕ ಶ್ರೀವತ್ಸ ಸೇರಿದಂತೆ ಹಲವು ಗಣ್ಯರು ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ನಟರಾದ ಡಾರ್ಲಿಂಗ್ ಕೃಷ್ಣ, ರವಿ ಚೇತನ್, ನಿರ್ದೇಶಕ ತರುಣ್ ಸುಧೀರ್, ಪವನ್ ಒಡೆಯರ್ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು

1

ನಂತರ ಸುದ್ದಿಗೋಷ್ಠಿಯಲ್ಲಿ‌ ಮಾತನಾಡಿದ ಅನಿವಾಸಿ ಕನ್ನಡಿಗ ಮಯೂರ್ ಮಾಸ್ಟರ್, ದುಬೈನಲ್ಲಿರುವ ಅನಿವಾಸಿ ಕನ್ನಡಿಗರು ಒಂದುಗೂಡಿ ಕರ್ನಾಟಕ ಸೆಲೆಬ್ರಿಟಿ ಲೀಗ್ (KCL) ಸೀಸನ್ 1 ಆಯೋಜಿಸುತ್ತಿದ್ದಾರೆ‌. ಏಪ್ರಿಲ್ 28 ರಿಂದ ಮೇ 3 ರವರೆಗೂ ದುಬೈನ‌ ಶಾರ್ಜಾ ಮೈದಾನದಲ್ಲಿ ಪಂದ್ಯಗಳು ನಡೆಯಲಿದೆ. ಕನ್ನಡ ಚಿತ್ರರಂಗದ ಕಲಾವಿದರು ಹಾಗೂ ತಂತ್ರಜ್ಞರು ಮಾತ್ರ ಭಾಗವಹಿಸಲಿದ್ದಾರೆ. ಅವರಿಗಾಗಿಯೇ ಈ ಟೂರ್ನಿ ಆಯೋಜಿಸಲಾಗಿದೆ. ದುಬೈನಲ್ಲಿರುವ ಸುಮಾರು ಹತ್ತು ಸಾವಿರ ಕನ್ನಡಿಗರನ್ನು ಒಂದುಗೂಡಿಸುವುದೇ ʼಕೆ.ಸಿ.ಎಲ್ʼ ನ ಉದ್ದೇಶ ಎಂದರು.

ಟೂರ್ನಿಯಲ್ಲಿ ಹತ್ತು ತಂಡಗಳು ಭಾಗವಹಿಸಲಿದೆ. ಹನ್ನೆರಡು ಓವರ್‌ಗಳ ಪಂದ್ಯ ಇದ್ದಾಗಿದ್ದು, ಎರಡು ಗುಂಪಿನಲ್ಲಿ ತಲಾ ಐದು ತಂಡಗಳಿದ್ದು, ಪ್ರತಿ ತಂಡ ನಾಲ್ಕು ಪಂದ್ಯಗಳನ್ನಾಡಲಿದೆ. ಪ್ರತಿ ಗುಂಪಿನ ಟಾಪ್ ಎರಡು ತಂಡಗಳು ನಾಕೌಟ್ ಪಂದ್ಯ ಆಡಲಿದೆ. ಪಂದ್ಯದ ನೇರಪ್ರಸಾರವೂ ಇರಲಿದೆ. ಲೂಸ್ ಮಾದ ಯೋಗಿ, ಡಾರ್ಲಿಂಗ್ ಕೃಷ್ಣ, ತರುಣ್ ಸುಧೀರ್ ಸೇರಿದಂತೆ ಹಲವರು ತಂಡದ ನಾಯಕರಾಗಲಿದ್ದಾರೆ. ಇಂದು ತಂಡದ ಆಟಗಾರರ ಹರಾಜು ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ ಎಂದರು.

ಅನಿವಾಸಿ ಕನ್ನಡಿಗ ಸಿರಾಜ್ ಮಾತನಾಡಿ, ಕೋವಿಡ್‌ಗೂ ಮುನ್ನ ದುಬೈನಲ್ಲಿ ನಮ್ಮ ಅನಿವಾಸಿ ಕನ್ನಡಿಗರ ಸಂಘ ಹುಟ್ಟಿಕೊಂಡಿತ್ತು.‌ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿ ಕನ್ನಡಿಗರನ್ನು ಒಂದೆಡೆ ಸೇರಿಸುವ ಉದ್ದೇಶ ನಮ್ಮದಾಗಿತ್ತು.ಕೋವಿಡ್ ಸಮಯದಲ್ಲಿ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದಾಗ ಅವರಿಗೆ ವಿಮಾನ ಸೇವೆ ಸೇರಿದಂತೆ ಬೇರೆ ಬೇರೆ ರೀತಿಯಲ್ಲಿ ನಮ್ಮ ಸಂಘ ನೆರವಾಗಿ ನಿಂತಿದೆ. ಜತೆಗೆ ಕೆಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಆದರೆ ಒಂದು ದೊಡ್ಡ ಕಾರ್ಯಕ್ರಮ ಮಾಡಿ ಎಲ್ಲರನ್ನೂ ಒಂದೆಡೆ ಸೇರಿಸಲು ಸಾಧ್ಯವಾಗಿರಲಿಲ್ಲ. ಇಂದು ಕ್ರಿಕೆಟ್ ಹೆಚ್ಚು ಜನಪ್ರಿಯವಾಗಿರುವುದರಿಂದ ಕನ್ನಡದ ಸೆಲೆಬ್ರಿಟಿಗಳನ್ನು ದುಬೈಗೆ ಕರೆಸಲು ಈ ಟೂರ್ನಿ ಮಾಡುತ್ತಿದ್ದೇವೆ. ಇದರಿಂದ ಎಲ್ಲಾ‌ ಕಲಾವಿದರನ್ನು ಒಂದೇ ವೇದಿಕೆಯಲ್ಲಿ ನೋಡುವ ಅವಕಾಶ ದುಬೈನಲ್ಲಿನ ಕನ್ನಡಿಗರಿಗೆ ಸಿಗಲಿದೆ ಎಂದರು.

ಈ ಸುದ್ದಿಯನ್ನೂ ಓದಿ | CM Siddaramaiah: ಏ. 1ರಿಂದ 5ರವರೆಗೆ ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ 2 ಟಿಎಂಸಿ ನೀ

ದುಬೈನಲ್ಲಿರುವ ಎಲ್ಲಾ ಅನಿವಾಸಿ ಕನ್ನಡಿಗರು ಒಂದು ಕಡೆ ಸೇರಿ ಸಂಭ್ರಮಿಸಬೇಕು. ಈ ಕ್ರಿಕೆಟ್ ಲೀಗ್ ಯಶಸ್ವಿಯಾದರೆ ಮುಂದಿನ ದಿನಗಳಲ್ಲಿ ಬೇರೆಬೇರೆ ಕ್ರೀಡೆಗಳನ್ನು ಆಯೋಜಿಸುವ ಉದ್ದೇಶವಿದೆ ಎಂದು ಅನಿವಾಸಿ ಕನ್ನಡಿಗ ಶ್ರೀನಿಧಿ ತಿಳಿಸಿದರು.