ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Assault Case: ಮುಸ್ಲಿಂ ದಂಪತಿಯ ಸಹಾಯಕ್ಕೆ ಬಂದ ಹಿಂದೂ ಯುವಕನ ಮೇಲೆ ಎಸ್‌ಡಿಪಿಐ ಕಾರ್ಯಕರ್ತರಿಂದ ಹಲ್ಲೆ

ಬಸ್ ನಿಲ್ದಾಣದಲ್ಲಿ ಬುರ್ಕಾ ಧರಿಸಿದ್ದ ಆಫಿಯಾ ಮತ್ತು ಆಕೆಯ 16 ವರ್ಷದ ಮಗಳ ಜೊತೆ ಮಾತನಾಡುತ್ತಿದ್ದ ವೆಂಕಟೇಶನನ್ನು ಕಂಡ ಕೆಲವು ಮುಸ್ಲಿಂ ಯುವಕರು, ಆತ ಮುಸ್ಲಿಂ ಬಾಲಕಿಯನ್ನು ಪ್ರೀತಿಸುತ್ತಿದ್ದಾನೆ ಎಂದು ತಪ್ಪು ಭಾವಿಸಿದ್ದಾರೆ. 'ಇವರು ನಮ್ಮೂರಿನವರು, ನಾನು ಇವರನ್ನು ಮನೆಗೆ ಕರೆದೊಯ್ಯಲು ಬಂದಿದ್ದೇನೆ' ಎಂದು ವೆಂಕಟೇಶ ಎಷ್ಟೇ ಬೇಡಿಕೊಂಡರೂ ಕೇಳದ ಯುವಕರ ಗುಂಪು ಆತನ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದೆ.

ಹಲ್ಲೆಗೀಡಾದ ವೆಂಕಟೇಶ್

ಕೊಪ್ಪಳ, ಫೆ.05: ಕೊಪ್ಪಳ (koppala news) ಜಿಲ್ಲೆಯ ಗಂಗಾವತಿಯಲ್ಲಿ (Gangavati news), ನೆರೆಯ ಮುಸ್ಲಿಂ (muslim) ಕುಟುಂಬಕ್ಕೆ ಸಹಾಯ ಮಾಡಲು ಹೋದ ಹಿಂದೂ (hindu) ಯುವಕನೊಬ್ಬನ ಮೇಲೆ, ಆತ ಮುಸ್ಲಿಂ ಯುವತಿಯೊಂದಿಗೆ ಪ್ರೇಮ ಸಲ್ಲಾಪ ನಡೆಸುತ್ತಿದ್ದಾನೆಂದು ತಪ್ಪು ತಿಳಿದು ಮುಸ್ಲಿಂ ಯುವಕರ ಗುಂಪು ಹಲ್ಲೆ (Assault Case) ನಡೆಸಿದೆ. ಗಂಗಾವತಿ ತಾಲೂಕಿನ ಬಸಾಪಟ್ಟಣ ಗ್ರಾಮದಲ್ಲಿ ಘಟನೆ ನಡೆದಿದೆ.

ಗ್ರಾಮದ ಅಜ್ಮೀರ್ ಮತ್ತು ಆಫಿಯಾ ದಂಪತಿಗಳ ನಡುವೆ ನಡೆದ ಗಲಾಟೆಯನ್ನು ಬಿಡಿಸಲು ಹೋಗಿದ್ದ ನೆರೆಮನೆಯ ವೆಂಕಟೇಶ ಎಂಬ ಯುವಕನ ಮೇಲೆ ಕೆಲವು ಮುಸ್ಲಿಮ ಯುವಕರು ಮನಸೋ ಇಚ್ಛೆ ಥಳಿಸಿದ್ದಾರೆ. ಗಂಡನೊಂದಿಗೆ ಜಗಳವಾಡಿ ಮಕ್ಕಳ ಸಮೇತ ಮನೆ ಬಿಟ್ಟು ಹೋಗಿದ್ದ ಆಫಿಯಾಳನ್ನು ಮನವೊಲಿಸಿ ಕರೆತರಲು ಅಜ್ಮೀರ್ ನೀಡಿದ ಸೂಚನೆಯಂತೆ ವೆಂಕಟೇಶ ಗಂಗಾವತಿ ಬಸ್ ನಿಲ್ದಾಣಕ್ಕೆ ತೆರಳಿದ್ದನು.

ಬಸ್ ನಿಲ್ದಾಣದಲ್ಲಿ ಬುರ್ಕಾ ಧರಿಸಿದ್ದ ಆಫಿಯಾ ಮತ್ತು ಆಕೆಯ 16 ವರ್ಷದ ಮಗಳ ಜೊತೆ ಮಾತನಾಡುತ್ತಿದ್ದ ವೆಂಕಟೇಶನನ್ನು ಕಂಡ ಕೆಲವು ಮುಸ್ಲಿಂ ಯುವಕರು, ಆತ ಮುಸ್ಲಿಂ ಬಾಲಕಿಯನ್ನು ಪ್ರೀತಿಸುತ್ತಿದ್ದಾನೆ ಎಂದು ತಪ್ಪು ಭಾವಿಸಿದ್ದಾರೆ. 'ಇವರು ನಮ್ಮೂರಿನವರು, ನಾನು ಇವರನ್ನು ಮನೆಗೆ ಕರೆದೊಯ್ಯಲು ಬಂದಿದ್ದೇನೆ' ಎಂದು ವೆಂಕಟೇಶ ಎಷ್ಟೇ ಬೇಡಿಕೊಂಡರೂ ಕೇಳದ ಯುವಕರ ಗುಂಪು ಆತನ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದೆ.

Chikkamagaluru: ಹಿಂದೂ ಗೃಹಿಣಿ ಮನೆಯಲ್ಲಿ ಅರೆಬೆತ್ತಲಾಗಿ ಕಂಡುಬಂದ ಮುಸ್ಲಿಂ ಕಾಂಗ್ರೆಸ್‌ ಮುಖಂಡ, ಹಲ್ಲೆ

ಹಲ್ಲೆ ನಡೆಸಿದ ಅಮೀರ್, ಖಾಜಾಫೀರ್, ಇಂದ್ರಾವಲಿ ಹಾಗೂ ಎಸ್‌ಡಿಪಿಐ ಸಂಘಟನೆಯ ಕೆಲವು ಕಾರ್ಯಕರ್ತರು ವೆಂಕಟೇಶನ ಮೊಬೈಲ್ ಕಸಿದುಕೊಂಡು, ಆತ ಬಾಲಕಿಯನ್ನು ಪ್ರೀತಿಸುತ್ತಿರುವುದಾಗಿ ಬಲವಂತವಾಗಿ ಒಪ್ಪಿಸಿ ವಿಡಿಯೋ ಚಿತ್ರೀಕರಿಸಿದ್ದಾರೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿ ವೆಂಕಟೇಶನ ವ್ಯಕ್ತಿತ್ವಕ್ಕೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಲಾಗಿದೆ.

ತನ್ನ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ವೆಂಕಟೇಶ ಗಂಗಾವತಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದರೆ, ವಿಷಯ ತಿಳಿಯುತ್ತಿದ್ದಂತೆ ಠಾಣೆಗೆ ಲಗ್ಗೆ ಇಟ್ಟ ಎಸ್‌ಡಿಪಿಐ ಸದಸ್ಯರು ಮತ್ತು ಮುಸ್ಲಿಂ ಯುವಕರು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದ್ದಾರೆ. ಕೇವಲ ನಮ್ಮವರ ಮೇಲೆ ಯಾಕೆ ಕೇಸ್ ದಾಖಲಿಸಿದ್ದೀರಿ ಎಂದು ಪ್ರಶ್ನಿಸಿ, ವೆಂಕಟೇಶನ ವಿರುದ್ಧವೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿ ಗಲಾಟೆ ನಡೆಸಿದ್ದಾರೆ.

ಪ್ರಕರಣದಲ್ಲಿ ಅಜ್ಮೀರ್ ಮತ್ತು ಆಫಿಯಾ ಕುಟುಂಬಸ್ಥರು ವೆಂಕಟೇಶನ ಪರವಾಗಿ ನಿಂತಿದ್ದಾರೆ. 'ವೆಂಕಟೇಶನದ್ದು ಯಾವುದೇ ತಪ್ಪಿಲ್ಲ, ನಮ್ಮ ಸಹಾಯಕ್ಕೆ ಆತ ಬಂದಿದ್ದ' ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಸದ್ಯ ವೆಂಕಟೇಶ ನೀಡಿದ ದೂರಿನನ್ವಯ ಹಲ್ಲೆಕೋರರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಗುರುಮಠಕಲ್‌ನಲ್ಲಿ ಕೇಸರಿ ಧ್ವಜ ವಿಚಾರಕ್ಕೆ ತಾಯಿ-ಮಗನ ಮೇಲೆ ಮುಸ್ಲಿಂ ಯುವಕರ ಹಲ್ಲೆ; ಕೇಸ್ ದಾಖಲು

ಹರೀಶ್‌ ಕೇರ

View all posts by this author