ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Lakshmi Hebbalkar: 2011ರ ನಂತರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರ್ಯಾಚ್ಯುಟಿ... ಸಿಎಂ ಜತೆ ಚರ್ಚೆ: ಲಕ್ಷ್ಮೀ ಹೆಬ್ಬಾಳಕರ್

Lakshmi Hebbalkar: ಗೌರವಧನ ಹೆಚ್ಚಳ, ನಿವೃತ್ತಿಯಾದ ಎಲ್ಲರಿಗೂ ಗ್ರ್ಯಾಚ್ಯುಟಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಂಘಟನೆಗಳು ಒತ್ತಾಯಿಸುತ್ತಾ ಬಂದಿವೆ. ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹಿತಕಾಯಲು ನಮ್ಮ ಸರ್ಕಾರ ಬದ್ಧವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ‌ ಜತೆ ಚರ್ಚೆ ನಡೆಸಿ‌,‌ ಬೇಡಿಕೆಗಳ ಈಡೇರಿಕೆಗೆ ಕ್ರಮವಹಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಭರವಸೆ ನೀಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆಗಳೊಂದಿಗೆ ಲಕ್ಷ್ಮೀ ಹೆಬ್ಬಾಳಕರ್‌ ಚರ್ಚೆ

Profile Siddalinga Swamy Mar 20, 2025 4:30 PM

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ, ಅಂಗನವಾಡಿ ಕಾರ್ಯಕರ್ತೆಯರ ಹಿತಕಾಯಲು ಸದಾ ಬದ್ಧವಾಗಿದೆ. 2011ರ ನಂತರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ನೀಡುವ ಸಂಬಂಧ ಶೀಘ್ರವೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಚರ್ಚಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ (Lakshmi Hebbalkar) ಹೇಳಿದರು. ಬೆಂಗಳೂರಿನ ವಿಧಾನಸೌಧದ ಸಚಿವರ ಕಚೇರಿಯಲ್ಲಿ 2011ರ ನಂತರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು, ಮಿನಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ಪಾವತಿ ಮಾಡುವ ಕುರಿತು. ಅಂಗನವಾಡಿ ಕಾರ್ಯಕರ್ತೆಯರ ವಿವಿಧ ಸಂಘಟನೆಗಳೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ಚರ್ಚೆ ನಡೆಸಿದರು.

Lakshmi Hebbalkar (1)

ಗೌರವಧನ ಹೆಚ್ಚಳ, ನಿವೃತ್ತಿಯಾದ ಎಲ್ಲರಿಗೂ ಗ್ರ್ಯಾಚ್ಯುಟಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಂಘಟನೆಗಳು ಒತ್ತಾಯಿಸುತ್ತಾ ಬಂದಿವೆ. ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹಿತಕಾಯಲು ನಮ್ಮ ಸರ್ಕಾರ ಬದ್ಧವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ‌ ಜತೆ ಚರ್ಚೆ ನಡೆಸಿ‌,‌ ಬೇಡಿಕೆಗಳ ಈಡೇರಿಕೆಗೆ ಕ್ರಮವಹಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಈಗಾಗಲೇ ಸರ್ಕಾರ 2023-24ನೇ ಸಾಲಿನ ಆರ್ಥಿಕ ವರ್ಷದಿಂದ ಜಾರಿಗೆ ಬರುವಂತೆ ನಿವೃತ್ತಿ ಬಳಿಕ ಗ್ರ್ಯಾಚ್ಯುಟಿಗೆ ಆಡಳಿತಾತ್ಮಕ ಅನುಮತಿ ನೀಡಲಾಗಿದೆ. ಈಗಾಗಲೇ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ. ಸಂಘಟನೆಗಳ ಬೇಡಿಕೆಯಂತೆ 2011ರಿಂದ ಗ್ರ್ಯಾಚ್ಯುಟಿ ಜಾರಿಗೆ ತರಲು ಪ್ರಯತ್ನಿಸಲಾಗುವುದು ಎಂದು ಅವರು ತಿಳಿಸಿದರು.

ಈ ಸುದ್ದಿಯನ್ನೂ ಓದಿ | DK Shivakumar: ದ್ವೇಷದ ರಾಜಕಾರಣ ಅವ್ರ ಡಿಎನ್‌ಎಯಲ್ಲಿದೆ: ಎಚ್‌ಡಿಕೆಗೆ ಡಿ.ಕೆ.ಶಿವಕುಮಾರ್ ತಿರುಗೇಟು

ಸಭೆಯಲ್ಲಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಶಾಮ್ಲಾ ಇಕ್ಬಾಲ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ‌ಬಿ.ಎಚ್‌.ನಿಶ್ಚಲ್, ಇಲಾಖೆಯ ನಿರ್ದೇಶಕ ರಾಘವೇಂದ್ರ, ಎಐಟಿಯುಸಿ ಅಂಗನವಾಡಿ ಸಂಘಟನೆಯ ಅಧ್ಯಕ್ಷ ಬಿ.ಅಮ್ಜದ್, ಪ್ರಧಾನ ಕಾರ್ಯದರ್ಶಿ ಎಂ. ಜಯಮ್ಮ, ಅಂಗನವಾಡಿ ನೌಕರರ‌ ಸಂಘದ ರಾಜ್ಯಾಧ್ಯಕ್ಷೆ ವರಲಕ್ಷ್ಮೀ, ಟಿಯುಸಿಸಿ ನೇತೃತ್ವದ ಅಂಗನವಾಡಿ ಸಂಘಟನೆಯ ಅಧ್ಯಕ್ಷ ಶಿವಶಂಕರ್, ಪ್ರಧಾನ ಕಾರ್ಯದರ್ಶಿ ನಾಗರತ್ನ ಸೇರಿದಂತೆ ವಿವಿಧ ಸಂಘಟನೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.