ಕರ್ನಾಟಕ ಬಜೆಟ್​ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Lakshmi Hebbalkar: ನಾಳೆ ವಿಧಾನಸೌಧದಲ್ಲಿ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಸಂಘಟನೆಗಳೊಂದಿಗೆ ಸಭೆ: ಲಕ್ಷ್ಮೀ ಹೆಬ್ಬಾಳ್ಕರ್

Lakshmi Hebbalkar: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಎಲ್ಲಾ ಸಂಘಟನೆಗಳೊಂದಿಗೆ ವಿಧಾನಸೌಧದಲ್ಲಿ ಗುರುವಾರ ಸಭೆ ನಡೆಸುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆಗಳೊಂದಿಗೆ ನಾಳೆ ಸಭೆ: ಹೆಬ್ಬಾಳ್ಕರ್

Profile Siddalinga Swamy Mar 19, 2025 10:38 PM

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ‌‌. ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹಿತದೃಷ್ಟಿಯಿಂದ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಹೇಳಿದರು. ಗೌರವಧನ ಹೆಚ್ಚಳ ಹಾಗೂ ನಿವೃತ್ತಿಯಾದ ಎಲ್ಲರಿಗೂ ಗ್ರಾಚ್ಯುಟಿ ಸೌಲಭ್ಯ ಜಾರಿಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬುಧವಾರ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘಟನೆಗಳು ನಡೆಸಿದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿ, ಸಚಿವರು ಮಾತನಾಡಿದರು.‌

ಮಹಿಳೆಯರ ಸಬಲೀಕರಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ನಮ್ಮ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದರ ನಡುವೆಯೂ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಈ ಬಜೆಟ್‌ನಲ್ಲಿ ಗೌರವ ಧನ ಹೆಚ್ಚಿಸಲಾಗಿದೆ ಎಂದರು.

ನಾಳೆ ಸಂಘಟನೆಗಳೊಂದಿಗೆ ಸಭೆ

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಎಲ್ಲಾ ಸಂಘಟನೆಗಳೊಂದಿಗೆ ವಿಧಾನಸೌಧದಲ್ಲಿ ಗುರುವಾರ ಸಭೆ ನಡೆಸುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

ಈ ಸುದ್ದಿಯನ್ನೂ ಓದಿ | Karnataka Weather: ಬೆಂಗಳೂರು, ಕೋಲಾರ ಸೇರಿ ಹಲವು ಜಿಲ್ಲೆಗಳಿಗೆ ಮಾ.22ರಿಂದ ಮಳೆ ಮುನ್ಸೂಚನೆ

ಈ ವೇಳೆ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಇಲಾಖೆಯ ನಿರ್ದೇಶಕ ರಾಘವೇಂದ್ರ, ಎಐಟಿಯುಸಿ ಅಂಗನವಾಡಿ ಸಂಘಟನೆಯ ಅಧ್ಯಕ್ಷ ಬಿ.ಅಮ್ಜದ್, ಪ್ರಧಾನ ಕಾರ್ಯದರ್ಶಿ ಎಂ. ಜಯಮ್ಮ, ಟಿಯುಸಿಸಿ ನೇತೃತ್ವದ ಅಂಗನವಾಡಿ ಸಂಘಟನೆಯ ಅಧ್ಯಕ್ಷ ಶಿವಶಂಕರ್, ಪ್ರಧಾನ ಕಾರ್ಯದರ್ಶಿ ನಾಗರತ್ನ, ಸೋಮಶೇಖರ್ ಯಾದಗಿರಿ, ಉಮಾದೇವಿ ಸೇರಿದಂತೆ ನೂರಾರು ಸಂಖ್ಯೆಯ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.