ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

supreme court: ವೀರಶೈವ ಜಂಗಮರು ಎಸ್‌ಸಿ ಪಟ್ಟಿಗೆ ಸೇರುವುದಿಲ್ಲ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಮೂಲತಃ ವೀರಶೈವ ಲಿಂಗಾಯತ ಧರ್ಮಕ್ಕೆ ಸೇರಿದ ರವೀಂದ್ರಸ್ವಾಮಿ ಅವರು ಬೇಡ ಜಂಗಮ ಎಸ್‌ಸಿ ಪ್ರಮಾಣ ಪತ್ರ ಪಡೆದಿದ್ದರು. ವೀರಶೈವ ಲಿಂಗಾಯತ ಜಂಗಮರು ಬೇಡ ಜಂಗಮ ಅಥವಾ ಬುಡ್ಗ ಜಂಗಮರಲ್ಲ ಎಂದು ಹೈಕೋಟ್‌ ಪೀಠ ನೀಡಿದ್ದ ಮಹತ್ವ ಆದೇಶವನ್ನು ಸುಪ್ರೀಂ ಕೋರ್ಟ್‌ ಸಹ ಎತ್ತಿ ಹಿಡಿದಿತ್ತು.

ಸುಪ್ರೀಂ ಕೋರ್ಟ್

ಬೀದರ್‌, ಏ.04: ವೀರಶೈವ ಲಿಂಗಾಯತ ಜಂಗಮ ಸಮುದಾಯವು (Lingayatha Jangama community) ಬೇಡ ಜಂಗಮ (Beda Jangama) ಅಥವಾ ಬುಡ್ಗ ಜಂಗಮರು ಅಲ್ಲ ಎಂಬ ಹೈಕೋರ್ಟ್‌ (High court) ಆದೇಶವನ್ನು ಪುನರ್‌ ಪರಿಶೀಲನೆ ನಡೆಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ (supreme court) ವಜಾ ಮಾಡಿದೆ. ಈ ಮೂಲಕ ನಕಲಿ ಎಸ್‌ಸಿ ಪ್ರಮಾಣ ಪತ್ರ ಪಡೆದಿದ್ದ ಬೀದರ್‌ನ ರವೀಂದ್ರಸ್ವಾಮಿ ಅವರಿಗೆ ಸುಪ್ರಿಂ ಕೋರ್ಟ್‌ನಲ್ಲಿ ಮತ್ತೊಮ್ಮೆ ಹಿನ್ನೆಡೆಯಾಗಿದೆ.

ಮೂಲತಃ ವೀರಶೈವ ಲಿಂಗಾಯತ ಧರ್ಮಕ್ಕೆ ಸೇರಿದ ರವೀಂದ್ರಸ್ವಾಮಿ ಅವರು ಬೇಡ ಜಂಗಮ ಎಸ್‌ಸಿ ಪ್ರಮಾಣ ಪತ್ರ ಪಡೆದಿದ್ದರು. ವೀರಶೈವ ಲಿಂಗಾಯತ ಜಂಗಮರು ಬೇಡ ಜಂಗಮ ಅಥವಾ ಬುಡ್ಗ ಜಂಗಮರಲ್ಲ ಎಂದು ಹೈಕೋಟ್‌ ಪೀಠ ನೀಡಿದ್ದ ಮಹತ್ವ ಆದೇಶವನ್ನು ಸುಪ್ರೀಂ ಕೋರ್ಟ್‌ ಸಹ ಎತ್ತಿ ಹಿಡಿದಿತ್ತು.

ಆದರೆ, ಈ ಆದೇಶ ಪುನರ್‌ ಪರಿಶೀಲನೆ ಮಾಡುವಂತೆ ಸ್ವಾಮಿ ಅವರು ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಸುಪ್ರೀಂಕೋರ್ಟ್‌ ನ್ಯಾಯ ಮೂರ್ತಿಗಳಾದ ರಾಜೇಂದ್‌ ಬಿಂದಲ್‌ ಮತ್ತು ಮನಮೋಹನ್‌ ಅವರನ್ನು ಒಳಗೊಂಡ ಪೀಠ ಅರ್ಜಿಯನ್ನು ವಜಾಗೊಳಿಸಿದೆ. ಆ ಮೂಲಕ ಈ ಪ್ರಕರಣಕ್ಕೆ ಅಂತಿಮ ಮೊಳೆ ಬಿದ್ದಂತಾಗಿದೆ.

Supreme Court Recruitment: ಸುಪ್ರೀಂ ಕೋರ್ಟ್‌ನಲ್ಲಿದೆ ಉದ್ಯೋಗಾವಕಾಶ; ಪದವೀಧರರು ಅರ್ಜಿ ಸಲ್ಲಿಸಿ

ಸುಳ್ಳು ಜಾತಿ ಪತ್ರ ಪಡೆದಿದ್ದರು

ಸುಪ್ರಿಂಕೋರ್ಟ್‌ನ ತೀರ್ಪನ್ನು ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಮಾರುತಿ ಬೌದ್ಧೆ ಸ್ವಾಗತಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ರವೀಂದ್ರ ಸ್ವಾಮಿ ಅವರು ವೀರಶೈವ ಜಂಗಮರಾಗಿದ್ದುಕೊಂಡು ಪರಿಶಿಷ್ಟ ಜಾತಿಯ ಬೇಡ ಜಂಗಮ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದುಕೊಂಡಿದ್ದರು. ಇದರ ವಿರುದ್ಧ ನಿರಂತರ ಹೋರಾಟ, ಪ್ರತಿಭಟನೆ ನಡೆದಿದ್ದವು. ಕಲಬುರಗಿಯ ಹೈಕೋರ್ಟ್‌ ಪೀಠದಲ್ಲಿ ಜಾತಿ ಪ್ರಮಾಣ ಪತ್ರ ನೀಡಿರುವುದನ್ನು ಪ್ರಶ್ನಿಸಲಾಗಿತ್ತು. ಆಗ ಹೈಕೋರ್ಟ್‌ ಸ್ವಾಮಿ ಅವರ ಜಾತಿ ಪ್ರಮಾಣ ಪತ್ರವನ್ನು ರದ್ದುಪಡಿಸಿತ್ತು. ಅದನ್ನು ಪ್ರಶ್ನಿಸಿ ಸ್ವಾಮಿ ಅವರು ಸುಪ್ರಿಂಕೋರ್ಟ್‌ ಮೆಟ್ಟಿಲೇರಿದ್ದರು. 2025ರ ನವೆಂಬರ್‌ 11ರಂದು ಸುಪ್ರಿಂಕೋರ್ಟ್‌ ಸಹ ಹೈಕೋರ್ಟ್‌ ಆದೇಶವನ್ನು ಎತ್ತಿ ಹಿಡಿದಿತ್ತು. ಬಳಿಕ ಸ್ವಾಮಿ ಅವರು ಸುಪ್ರಿಂಕೋರ್ಟ್‌ನಲ್ಲಿ ಮರು ಪರಿಶೀಲನೆಗೆ ಅರ್ಜಿ ಸಲ್ಲಿಸಿದ್ದರು. ಅದನ್ನೂ ಸುಪ್ರೀಂಕೋರ್ಟ್‌ ವಜಾಗೊಳಿಸಿದ್ದರಿಂದ ರಾಜ್ಯದ ಪರಿಶಿಷ್ಟ ಜಾತಿ, ಪಂಗಡದ ಜನರಿಗೆ ಜಯ ಸಿಕ್ಕಿದಂತಾಗಿದೆ ಎಂದು ಹೇಳಿದ್ದಾರೆ.

ಕರಾದಸಂಸ ರಾಜ್ಯ ಸಂಘಟನಾ ಸಂಚಾಲಕ ಮಾರುತಿ ಬೌದ್ಧೆ, ಆರ್‌ಪಿಐ ಅಂಬೇಡ್ಕರ್‌ ರಾಜ್ಯ ಸಂಯೋಜಕ ಮಹೇಶ ಗೋರನಾಳಕರ್‌, ಡಿಎಸ್‌ಎಸ್‌ ಮುಖಂಡರಾದ ಅರುಣ ಪಟೇಲ್‌, ಬಾಬು ಟೈಗರ್‌, ರಾಜಕುಮಾರ ವಾಘಮಾರೆ, ಅಶೋಕ ಗಾಯಕವಾಡ ಇತರರು ಕೋರ್ಟ್‌ನ ಆದೇಶ ಸ್ವಾಗತಿಸಿದ್ದಾರೆ. ಅಲ್ಲದೆ, ಸುಳ್ಳು ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು ಮತ್ತು ಸುಳ್ಳು ಜಾತಿ ಪ್ರಮಾಣಪತ್ರ ಪಡೆದು ಸಂವಿಧಾನಕ್ಕೆ ಹಾಗೂ ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡವರಿಗೆ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಒತ್ತಾಯಿಸಿದ್ದಾರೆ.

ಇಡೀ ರಾಜ್ಯಕ್ಕೆ ಆದೇಶ ಅನ್ವಯ ಸುಪ್ರಿಂಕೋರ್ಟ್‌ ತೀರ್ಪನ್ನು ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಸುಳ್ಳು ಜಾತಿ ವಿರೋಧಿ ಹೋರಾಟ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಕುಮಾರ ಮೂಲಭಾರತಿ ಅವರು ಸ್ವಾಗತಿಸಿದ್ದಾರೆ. ರವೀಂದ್ರ ಸ್ವಾಮಿ ಅವರು ನಿಜವಾಗಿ ಅರ್ಹರಿದ್ದರೆ, ಪ್ರಯತ್ನಿಸಿದರೆ ಅದಕ್ಕೆ ಒಂದು ಅರ್ಥ ಬರುತ್ತದೆ ಎಂದಿದ್ದಾರೆ. ಈ ಆದೇಶ ಇಡೀ ರಾಜ್ಯಕ್ಕೆ ಅನ್ವಯ ವಾಗುತ್ತದೆ ಎಂದು ಅವರು ಹೇಳಿದ್ದಾರೆ.

ಹರೀಶ್‌ ಕೇರ

View all posts by this author