ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Lokayukta Raid: ಭ್ರಷ್ಟ ಅಧಿಕಾರಿಗಳಿಗೆ ಶಾಕ್‌, ರಾಜ್ಯಾದ್ಯಂತ ಲೋಕಾಯುಕ್ತ ದಾಳಿ

ಬೆಂಗಳೂರು, ಮೈಸೂರು ಹಾಗೂ ದಾವಣಗೆರೆಗಳಲ್ಲಿ ಹಲವು ಅಧಿಕಾರಿಗಳ ಮನೆ ಹಾಗೂ ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆಯೇ ದಾಳಿ ನಡೆಸಿ ಕಡತಗಳ ಪರಿಶೀಲನೆ ನಡೆಸಿದ್ದಾರೆ. ದಾಳಿಯ ವೇಳೆ ದಾಖಲೆಗಳಿಲ್ಲದ ಆಸ್ತಿ, ಚಿನ್ನಾಭರಣ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಲೋಕಾಯುಕ್ತ

ಬೆಂಗಳೂರು, ಫೆ.12: ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ (lokayukta raid) ಬಿಸಿ ಮುಟ್ಟಿಸಿದೆ. ಬೆಂಗಳೂರು(Bengaluru), ಮೈಸೂರು (Mysuru), ದಾವಣಗೆರೆ ಜಿಲ್ಲೆಗಳಲ್ಲಿ ಹಲವು ಕಡೆ ಏಕಕಾಲಕ್ಕೆ ದಾಳಿ ನಡೆದಿದೆ. ಈ ಅಧಿಕಾರಿಗಳ ಮೇಲೆ ನಿರಂತರ ಭ್ರಷ್ಟಾಚಾರ ದೂರುಗಳು ಬಂದ ಹಿನ್ನೆಲೆಯಲ್ಲಿ ಮನೆ ಹಾಗೂ ಕಚೇರಿಗಳಿಗೆ ದಾಳಿ ಮಾಡಿ ಕಡತಗಳನ್ನು ಪರೀಕ್ಷಿಸಲಾಗುತ್ತಿದೆ.

PWD ಚೀಫ್‌ ಇಂಜಿನಿಯರ್‌ ಪುರುಷೋತ್ತಮ ದಾಸ್‌ ಎಂಬವರಿಗೆ ಸೇರಿದ 11 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ 5 ಕಡೆ, ಬೆಂಗಳೂರಿನಲ್ಲಿ 6 ಕಡೆ ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳ ಹುಡುಕಾಟ ನಡೆಸಿದ್ದಾರೆ. ದಾಳಿಯ ವೇಳೆ ದಾಖಲೆಗಳಿಲ್ಲದ ಆಸ್ತಿ, ಚಿನ್ನಾಭರಣ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ದಾವಣಗೆರೆ, ಶಿವಮೊಗ್ಗದಲ್ಲೂ ದಾಳಿ

ಬೆಸ್ಕಾಂ ಇಂಜಿನಿಯರ್‌ ಆರ್.ಹೆಚ್ ಅರ್ಜುನ್‌ ಅವರ ಮನೆ ಹಾಗೂ ಕಚೇರಿ ಮೇಲೂ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ದಾವಣಗೆರೆಯ ಬೆಸ್ಕಾಂನ ಸಿವಿಲ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಜುನ್‌ ವಿರುದ್ಧ ಆದಾಯ ಮೀರಿ ಅಪಾರ ಪ್ರಮಾಣದ ಆಸ್ತಿ ಗಳಿಸಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ಲೋಕಾಯುಕ್ತ ಎಸ್ಪಿ ಎಂಎಸ್ ಕೌಲಾಪುರೆ ನೇತ್ರತ್ವದ ತಂಡ ದಾಳಿ ನಡೆಸಿದೆ.

ಬೆಂಗಳೂರಿನಲ್ಲಿ 3 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯ‌ರ್

ಅರ್ಜುನ್‌ ವಾಸವಿದ್ದ ದಾವಣಗೆರೆ ನಗರದ ನಿಟ್ಟುವಳ್ಳಿನಲ್ಲಿ ರೂಮ್, ಕಚೇರಿ ಹಾಗೂ ಶಿವಮೊಗ್ಗದ ಮನೆಯ ಮೇಲೆ ಏಕ ಕಾಲಕ್ಕೆ ದಾಳಿ ನಡೆಸಲಾಗಿದೆ. ಶಿವಮೊಗ್ಗದ ಮನೆಯಲ್ಲಿ ಆಸ್ತಿ ಪತ್ರ ಹಾಗೂ ಚಿನ್ನ ಬೆಳ್ಳಿ ಪತ್ತೆಯಾಗಿದ್ದು, ಇನ್ನಷ್ಟು ಮಹತ್ವದ ದಾಖಲೆಗಳನ್ನ ಪತ್ತೆಹಚ್ಚಲು ಅಧಿಕಾರಿಗಳು ಶೋಧ ಮುಂದುವರಿಸಿದ್ದಾರೆ.

ಹರೀಶ್‌ ಕೇರ

View all posts by this author