ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Lunar Eclipse: ನಾಳೆ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳ ದರ್ಶನ ಸಮಯದಲ್ಲಿ ಬದಲಾವಣೆ

ರಕ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಪುಣ್ಯಕ್ಷೇತ್ರಗಳ (temple) ಪೂಜೆ ಮತ್ತು ದರ್ಶನದ ಸಮಯದಲ್ಲಿ ಮಹತ್ತರ ಬದಲಾವಣೆಗಳನ್ನು ಮಾಡಲಾಗಿದೆ. ಬಹುತೇಕ ದೇವಾಲಯಗಳಲ್ಲಿ ಗ್ರಹಣ ಕಾಲದಲ್ಲಿ ದರ್ಶನ ಸ್ಥಗಿತಗೊಳಿಸಿ, ಶುದ್ಧೀಕರಣದ ನಂತರವಷ್ಟೇ ಭಕ್ತರಿಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ.

ರಕ್ರ ಚಂದ್ರಗ್ರಹಣ

ಬೆಂಗಳೂರು, ಮಾರ್ಚ್‌ 2: ಯುಗಾದಿ ಹಬ್ಬಕ್ಕೂ ಮುನ್ನವೇ ಅಂದರೆ ಮಾರ್ಚ್ 3ರಂದು ‘ಕೇತುಗ್ರಸ್ತ ರಕ್ತ ಚಂದ್ರಗ್ರಹಣ’ (blood moon, Lunar Eclipse) ಸಂಭವಿಸಲಿದೆ. ಈ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ಪ್ರಮುಖ ಪುಣ್ಯಕ್ಷೇತ್ರಗಳ (temple) ಪೂಜೆ ಮತ್ತು ದರ್ಶನದ ಸಮಯದಲ್ಲಿ ಮಹತ್ತರ ಬದಲಾವಣೆಗಳನ್ನು ಮಾಡಲಾಗಿದೆ. ಬಹುತೇಕ ದೇವಾಲಯಗಳಲ್ಲಿ ಗ್ರಹಣ ಕಾಲದಲ್ಲಿ ದರ್ಶನ ಸ್ಥಗಿತಗೊಳಿಸಿ, ಶುದ್ಧೀಕರಣದ ನಂತರವಷ್ಟೇ ಭಕ್ತರಿಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ.

ಬೆಂಗಳೂರಿನ ಪ್ರಮುಖ ದೇವಾಲಯಗಳ ವಿವರ:

ಬನಶಂಕರಿ ದೇವಾಲಯ: ಗ್ರಹಣದ ಹಿನ್ನೆಲೆಯಲ್ಲಿ ಯಾವುದೇ ವಿಶೇಷ ಪೂಜೆಗಳಿರುವುದಿಲ್ಲ. ಸಂಜೆ 7 ಗಂಟೆಯ ನಂತರವಷ್ಟೇ ನಿತ್ಯ ಪೂಜೆಗಳು ಪುನಾರಂಭಗೊಳ್ಳಲಿವೆ.

ಗವಿ ಗಂಗಾಧರೇಶ್ವರ ದೇವಾಲಯ: ಬೆಳಿಗ್ಗೆ 9 ಗಂಟೆಗೆ ದೇಗುಲದ ಬಾಗಿಲು ಮುಚ್ಚಲಾಗುವುದು. ಸಂಜೆ 7.45ರ ನಂತರ ದರ್ಶನಕ್ಕೆ ಅವಕಾಶವಿದ್ದು, ಮಾರ್ಚ್ 4ರಂದು ‘ಗ್ರಹಣ ಶಾಂತಿ ಹೋಮ’ ನಡೆಯಲಿದೆ.

ಕಾಡುಮಲ್ಲೇಶ್ವರ ದೇವಾಲಯ: ಬೆಳಿಗ್ಗೆ 11 ಗಂಟೆಗೆ ಬಾಗಿಲು ಮುಚ್ಚಲಿದ್ದು, ರಾತ್ರಿ 7.30ಕ್ಕೆ ಪುನಃ ತೆರೆಯಲಾಗುವುದು. ಮರುದಿನ ನವಗ್ರಹ ಶಾಂತಿ ಹೋಮ ಆಯೋಜಿಸಲಾಗಿದೆ.

ದೊಡ್ಡ ಗಣಪತಿ ದೇವಾಲಯ: ಗ್ರಹಣ ಮೋಕ್ಷವಾದ ನಂತರ ಅಂದರೆ ರಾತ್ರಿ 7.45ಕ್ಕೆ ಭಕ್ತರಿಗಾಗಿ ಬಾಗಿಲು ತೆರೆಯಲಿದೆ.

ಬಂಡೆ ಮಹಾಕಾಳಿ ದೇವಾಲಯ (ವಿಶೇಷ): ಇಲ್ಲಿ ಗ್ರಹಣದ ಅವಧಿಯಲ್ಲೂ ದೇವಾಲಯ ತೆರೆದಿರುತ್ತದೆ. ಈ ಸಮಯದಲ್ಲಿ ದೇವಿಗೆ ತುಪ್ಪದ ಲೇಪನ ಮಾಡಿ ವಿಶೇಷ ಹೋಮ ನಡೆಸಲಾಗುವುದು. ಭಕ್ತರಿಗೆ ದರ್ಶನಕ್ಕೆ ಮುಕ್ತ ಅವಕಾಶವಿದೆ.

ಕತ್ತಲೆಯಾಗಲಿದೆ ಭೂಮಿ: 2027ರಲ್ಲಿ ನಡೆಯಲಿದೆ ಸುದೀರ್ಘ ಸೂರ್ಯ ಗ್ರಹಣ

ರಾಜ್ಯದ ಇತರ ಪ್ರಮುಖ ಕ್ಷೇತ್ರಗಳ ಮಾಹಿತಿ:

ಶ್ರೀ ಕ್ಷೇತ್ರ ಧರ್ಮಸ್ಥಳ:

ದಕ್ಷಿಣ ಕನ್ನಡದ ಪ್ರಸಿದ್ಧ ಕ್ಷೇತ್ರ ಧರ್ಮಸ್ಥಳದಲ್ಲಿ ಮಾರ್ಚ್ 3ರ ಮಂಗಳವಾರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.

ಬೆಳಿಗ್ಗೆ: 6.30 ರಿಂದ ಮಧ್ಯಾಹ್ನ 1.30 ರವರೆಗೆ ಮಾತ್ರ ದರ್ಶನಕ್ಕೆ ಅವಕಾಶ. ಮಧ್ಯಾಹ್ನ: 1.30 ರಿಂದ ಸಂಜೆಯವರೆಗೆ ದರ್ಶನ ಸ್ಥಗಿತ. ರಾತ್ರಿ: 7.30 ಗಂಟೆಯ ನಂತರ ಎಂದಿನಂತೆ ದರ್ಶನ ಲಭ್ಯವಿರುತ್ತದೆ.

ಚಾಮುಂಡೇಶ್ವರಿ ದೇವಾಲಯ, ಮೈಸೂರು:

ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 8.30ರವರೆಗೆ ಭಕ್ತರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಗ್ರಹಣದ ನಂತರ ಗರ್ಭಗುಡಿ ಶುದ್ಧೀಕರಣ ಕಾರ್ಯಗಳು ನೆರವೇರಲಿವೆ.

ಗಮನಿಸಿ: ಗ್ರಹಣವು ಮಧ್ಯಾಹ್ನ 3.10 ಕ್ಕೆ ಆರಂಭವಾಗಿ ಸಂಜೆ 6.47 ಕ್ಕೆ ಮುಕ್ತಾಯವಾಗಲಿದೆ. ದೂರದ ಊರುಗಳಿಂದ ಬರುವ ಭಕ್ತಾದಿಗಳು ಈ ಬದಲಾದ ಸಮಯವನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪ್ರವಾಸವನ್ನು ಯೋಜಿಸಲು ದೇವಸ್ಥಾನದ ಆಡಳಿತ ಮಂಡಳಿಗಳು ವಿನಂತಿಸಿವೆ.

ಹರೀಶ್‌ ಕೇರ

View all posts by this author