ಕರ್ನಾಟಕ ಬಜೆಟ್​ ವಿದೇಶ ಪುನೀತ್​ @ 50 ಫ್ಯಾಷನ್​ ಧಾರ್ಮಿಕ ಕ್ರೈಂ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Food Poison: ಮಳವಳ್ಳಿಯಲ್ಲಿ ವಿಷಾಹಾರಕ್ಕೆ ಮತ್ತೊಬ್ಬ ವಿದ್ಯಾರ್ಥಿ ಬಲಿ, ಸಾವಿನ ಸಂಖ್ಯೆ 2ಕ್ಕೆ

ಮಂಡ್ಯ (Mandya news) ಜಿಲ್ಲೆಯ ಮಳವಳ್ಳಿ ತಾಲೂಕಿನ ಟಿ.ಕಾಗೇಪುರ ಗ್ರಾಮದಲ್ಲಿ ಘಟನೆ ನಡೆದಿತ್ತು. ಮಳವಳ್ಳಿಯಲ್ಲಿ ಉದ್ಯಮಿಯೊಬ್ಬರು ಹೋಳಿ ಹಬ್ಬ ಆಚರಿಸಿದ್ದರು. ಈ ವೇಳೆ ಉಳಿದ ಊಟವನ್ನು ಅನಾಥಾಶ್ರಮಕ್ಕೆ ನೀಡಿದ್ದರು. ಈ ಊಟ ಸೇವಿಸಿ ಫುಡ್ ಪಾಯ್ಸನ್ ಆಗಿ ಮಕ್ಕಳು ಅಸ್ವಸ್ಥರಾಗಿದ್ದಾರೆ.

ಮಳವಳ್ಳಿಯಲ್ಲಿ ವಿಷಾಹಾರಕ್ಕೆ ಎರಡನೇ ವಿದ್ಯಾರ್ಥಿ ಬಲಿ

ಸಾಂದರ್ಭಿಕ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ Mar 18, 2025 7:37 AM

ಮಂಡ್ಯ: ಹೋಳಿ ಹಬ್ಬದ (Holi Festival) ಪಾರ್ಟಿಯಲ್ಲಿ ಕಲುಷಿತ ಆಹಾರ (food poison) ಸೇವಿಸಿದ ಪ್ರಕರಣದಲ್ಲಿ ಗಂಭೀರವಾಗಿ ಅಸ್ವಸ್ಥನಾಗಿದ್ದ ಮತ್ತೊಬ್ಬ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವಿಗೆ (Student death) ಈಡಾಗಿದ್ದಾನೆ. ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿ ನಮೀಬ್ ಮೃತಪಟ್ಟಿರುವುದಾಗಿ ವರದಿಯಾಗಿದ್ದು, ಇದಕ್ಕೂ ಮುಂಚೆ 6ನೇ ತರಗತಿ ವಿದ್ಯಾರ್ಥಿ ಕೇರ್ಲಾಂಗ್ (13) ಸಾವನ್ನಪ್ಪಿದ್ದ. ಈ ಮೂಲಕ ಫುಡ್ ಪಾಯಿಸನ್‌ನಿಂದ ಮೃತಪಟ್ಟವರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ.

ಮಂಡ್ಯ (Mandya news) ಜಿಲ್ಲೆಯ ಮಳವಳ್ಳಿ ತಾಲೂಕಿನ ಟಿ.ಕಾಗೇಪುರ ಗ್ರಾಮದಲ್ಲಿ ಘಟನೆ ನಡೆದಿತ್ತು. ಮಳವಳ್ಳಿಯಲ್ಲಿ ಉದ್ಯಮಿಯೊಬ್ಬರು ಹೋಳಿ ಹಬ್ಬ ಆಚರಿಸಿದ್ದರು. ಈ ವೇಳೆ ಉಳಿದ ಊಟವನ್ನು ಅನಾಥಾಶ್ರಮಕ್ಕೆ ನೀಡಿದ್ದರು. ಈ ಊಟ ಸೇವಿಸಿ ಫುಡ್ ಪಾಯ್ಸನ್ ಆಗಿ ಮಕ್ಕಳು ಅಸ್ವಸ್ಥರಾಗಿದ್ದಾರೆ. ಊಟ ಸೇವಿಸಿದ್ದ ಹಲವರು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥರಾದ ವಿದ್ಯಾರ್ಥಿಗಳಿಗೆ ಮಂಡ್ಯ ಮಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಘಟನೆಯ ಸಂಬಂಧ ಶಿಕ್ಷಣ ಸಂಸ್ಥೆಯ ಆರು ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಈ ಕುರಿತು ಬಿಇಓ ಉಮಾ ನೀಡಿದ ದೂರಿನ ಆಧಾರದ ಮೇಲೆ ಕೇಸ್ ದಾಖಲಾಗಿದೆ. ಬಿಇಓ ನೀಡಿದ ದೂರಿನ ಹಿನ್ನಲೆಯಲ್ಲಿ, ಹೋಳಿ ಹಬ್ಬ ಆಯೋಜಿಸಿದ್ದ ಪುಷ್ಪೇಂದ್ರ ಕುಮಾರ್, ಹೋಟೆಲ್ ಮಾಲೀಕ ಸಿದ್ದರಾಜು, ಕಲ್ಯಾಣ ಮಂಟಪದ ನೌಕರ ಕೃಷ್ಣ, ಗೋಕುಲ ವಿದ್ಯಾ ಸಂಸ್ಥೆಯ ಮುಖ್ಯಸ್ಥ ಲಂಕೇಶ್ ಸೇರಿದಂತೆ 6 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.

‌ ಇದನ್ನೂ ಓದಿ: Police Firing: ಮಂಡ್ಯದಲ್ಲಿ ರೌಡಿಶೀಟರ್‌ ಕಾಲಿಗೆ ಗುಂಡು ಹಾರಿಸಿ ಸೆರೆ