ಎಸ್​ ಎಲ್​ ಭೈರಪ್ಪ ನಿಧನ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Madduru Stone Pelting: ಮದ್ದೂರು ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪೂರ್ವಯೋಜಿತ ಕೃತ್ಯವೇ? ಬಯಲಾಯ್ತು ಸ್ಫೋಟಕ ಸಂಗತಿ

ಗಣೇಶ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪೂರ್ವಯೋಜಿತ ಕೃತ್ಯವೆಂಬುದು ಪೊಲೀಸರ ತನಿಖೆಯಲ್ಲಿ ಬಟಾಬಯಲಾಗಿದೆ. ಘಟನೆಗೆ ಸಂಬಂಧಿಸಿದಂತೆ 32 ಆರೋಪಿಗಳನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಯುತ್ತಿದೆ. ಪೊಲೀಸರ ತನಿಖೆಯಲ್ಲಿ ಕಲ್ಲುತೂರಾಟ ಪೂರ್ವ ನಿಯೋಜಿತ ಎನ್ನುವ ಸ್ಫೋಟಕ ಅಂಶ ಬಯಲಾಗಿದೆ

ಮಂಡ್ಯ: ಕಳೆದ ತಿಂಗಳು ಮಂಡ್ಯದ ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಸಂಗತಿಯೊಂದು ತನಿಖೆಯಲ್ಲಿ ಬಯಲಾಗಿದೆ. ಗಣೇಶ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪೂರ್ವಯೋಜಿತ ಕೃತ್ಯವೆಂಬುದು ಪೊಲೀಸರ ತನಿಖೆಯಲ್ಲಿ ಬಟಾಬಯಲಾಗಿದೆ. ಘಟನೆಗೆ ಸಂಬಂಧಿಸಿದಂತೆ 32 ಆರೋಪಿಗಳನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಯುತ್ತಿದೆ. ಪೊಲೀಸರ ತನಿಖೆಯಲ್ಲಿ ಕಲ್ಲುತೂರಾಟ ಪೂರ್ವ ನಿಯೋಜಿತ ಎನ್ನುವ ಸ್ಫೋಟಕ ಅಂಶ ಬಯಲಾಗಿದೆಮಂಡ್ಯ: ಕಳೆದ ತಿಂಗಳು ಮಂಡ್ಯದ ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಸಂಗತಿಯೊಂದು ತನಿಖೆಯಲ್ಲಿ ಬಯಲಾಗಿದೆ. ಗಣೇಶ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪೂರ್ವಯೋಜಿತ ಕೃತ್ಯವೆಂಬುದು ಪೊಲೀಸರ ತನಿಖೆಯಲ್ಲಿ ಬಟಾಬಯಲಾಗಿದೆ. ಘಟನೆಗೆ ಸಂಬಂಧಿಸಿದಂತೆ 32 ಆರೋಪಿಗಳನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಯುತ್ತಿದೆ. ಪೊಲೀಸರ ತನಿಖೆಯಲ್ಲಿ ಕಲ್ಲುತೂರಾಟ ಪೂರ್ವ ನಿಯೋಜಿತ ಎನ್ನುವ ಸ್ಫೋಟಕ ಅಂಶ ಬಯಲಾಗಿದೆ. ಈ ವಿಚಾರವಾಗಿ, ತನಿಖೆಯ ವೇಳೆ ಆರೋಪಿಗಳು ಬಾಯಿ ಬಿಟ್ಟಿದ್ದು, ಸ್ವಾಮಿ ಎಂಬುವವರ ನೇತೃತ್ವದಲ್ಲಿ ಕೂರಿಸಿದ್ದ ಗಣೇಶ ಮೂರ್ತಿ ಮೇಲೆ ಕಲ್ಲು ತೂರಾಟ ನಡೆಸಲು ಬಹುದೊಡ್ಡ ಮಟ್ಟದಲ್ಲೇ ಸಂಚು ರೂಪಿಸಲಾಗಿತ್ತು ಎಂಬುದನ್ನು ಒಪ್ಪಿಕೊಂಡಿದ್ದಾರೆ. ಆದರೆ ಟಾರ್ಗೆಟ್ ಮಾಡಿದ್ದ ಗಣೇಶ ಮೆರವಣಿಗೆಯ ಬದಲು ಬೇರೆ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆದಿರುವುದು ಪತ್ತೆಯಾಗಿದೆ.

ಏನಿದು ಪ್ರಕರಣ?

ಮದ್ದೂರಿನ ಚನ್ನೇಗೌಡ ಬಡಾವಣೆ ನಿವಾಸಿಗಳು ಸೆ.7ರಂದು ಭಾನುವಾರ ರಾತ್ರಿ ಗಣಪತಿ ವಿಸರ್ಜನೆ (Ganesha visarjan) ಮೆರವಣಿಗೆ ನಡೆಸುತ್ತಿರುವಾಗ ಕಲ್ಲು ತೂರಾಟ ನಡೆದಿತ್ತು. ಘಟನೆಯಲ್ಲಿ ನಾಲ್ವರು ಹೋಮ್‌ಗಾರ್ಡ್​​ಗಳು ಸೇರಿ 8 ಜನರು ಗಾಯಗೊಂಡಿದ್ದರು. ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಪ್ರಕರಣ ಸಂಬಂಧ 32 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಸದ್ಯ ಮದ್ದೂರಿನಲ್ಲಿ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದೆ.

ಮಸೀದಿಯಿಂದಲೇ ಲೈಟ್ ಆಫ್ ಮಾಡಿ ಕಲ್ಲು ತೂರಾಟ (Stone Pelting) ಮಾಡಿದ್ದಾರೆ ಎಂದು ಮೆರವಣಿಗೆಯಲ್ಲಿದ್ದವರು ಆರೋಪಿಸಿದ್ದಾರೆ. ಬೀದಿಯಲ್ಲಿ ಮೆರವಣಿಗೆ ಮೂಲಕ ಬಂದ ಗಣಪ, ಮಸೀದಿ ಮುಂದೆ ಹಾದುಹೋಗುತ್ತಿದ್ದಾಗ ಸ್ಥಳದಲ್ಲಿ ದಿಢೀರ್ ಲೈಟ್​ ಆಫ್​ ಮಾಡಿ ಮಸೀದಿಯಿಂದ ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೇ ದೊಣ್ಣೆಗಳನ್ನು ಕೂಡ ಎಸೆದಿದ್ದಾರೆ ಎಂದು ಸ್ಥಳದಲ್ಲಿದ್ದವರು ದೂರಿದ್ದಾರೆ. ಮಸೀದಿ ಬಳಿ ಬಂದಾಗ ಯಾವುದೇ ಘೋಷಣೆ ಕೂಗಬಾರದು. ಮೈಕ್ ಹಾಕಬಾರದು ಎಂದು ಮೊದಲೇ ಎಚ್ಚರಿಕೆ ನೀಡಲಾಗಿತ್ತು. ಅದರಂತೆ ಮೈಕ್‌ ಆಫ್ ಮಾಡಿ ಮೆರವಣಿಗೆ ಮಾಡಲಾಗುತ್ತಿತ್ತು. ಇದಾದ ಬಳಿಕ‌ ಏಕಾಏಕಿ ಲೈಟ್ ಆಫ್ ಮಾಡಿ ಗಣಪತಿ ಮೆರವಣಿಗೆ ಮೇಲೆ ಮಸೀದಿಯಿಂದ ಕಲ್ಲು ತೂರಾಟ‌ ಮಾಡಲಾಗಿದೆ ಎಂದು ಹಿಂದೂಗಳು ಆರೋಪಿಸಿದ್ದಾರೆ.