Ahmedabad Plane Crash: ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮಂಗಳೂರಿನ ಸಹ ಪೈಲಟ್ ಕ್ಲೈವ್ ಕುಂದರ್ ಸಾವು
Ahmedabad Plane Crash: 1,100 ಗಂಟೆಗಳ ಹಾರಾಟದ ಅನುಭವ ಹೊಂದಿರುವ ಇವರು, ಇಂದು ಅಹಮದಾಬಾದ್ನಲ್ಲಿ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದ ಕ್ಯಾಪ್ಟನ್ ಸುಮಿತ್ ಸಭರ್ವಾಲ್ ಅವರ ಜತೆ ಸಹ ಪೈಲಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.


ಮಂಗಳೂರು: ಅಹಮದಾಬಾದ್ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತದಲ್ಲಿ (Ahmedabad Plane Crash) ಮಂಗಳೂರು ಮೂಲದ ಮುಂಬೈ ನಿವಾಸಿ, ಸಹ ಪೈಲಟ್ ಕ್ಲೈವ್ ಕುಂದರ್ (Clive Kundar) ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕ್ಲೈವ್ ಕುಂದರ್ ಅವರು ಪ್ಯಾರಿಸ್ ಏರ್ ಇಂಕ್ನಲ್ಲಿ ತರಬೇತಿ ಪಡೆದಿದ್ದರು. 1,100 ಗಂಟೆಗಳ ಹಾರಾಟದ ಅನುಭವ ಹೊಂದಿರುವ ಇವರು, ಇಂದು ಅಪಘಾತಕ್ಕೀಡಾದ ವಿಮಾನದ ಕ್ಯಾಪ್ಟನ್ ಸುಮಿತ್ ಸಭರ್ವಾಲ್ ಅವರ ಜತೆ ಸಹ ಪೈಲಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.
ಅಹಮದಾಬಾದ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್ನ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ಬೋಯಿಂಗ್ 787-8 ಡ್ರೀಮ್ಲೈನರ್ ಗುರುವಾರ ಮಧ್ಯಾಹ್ನ ಅಹಮದಾಬಾದ್ನಲ್ಲಿ ಟೇಕಾಫ್ ಆದ ಕೆಲವೇ ನಿಮಿಷದಲ್ಲಿ ಪತನಗೊಂಡಿದೆ. ಅವಘಡ ನಡೆದಾಗ ಕ್ಯಾಪ್ಟನ್ ಸುಮೀತ್ ಸಭರ್ವಾಲ್ ಮತ್ತು ಫಸ್ಟ್ ಆಫೀಸರ್ (ಸಹ ಪೈಲಟ್) ಕ್ಲೈವ್ ಕುಂದರ್ ವಿಮಾನ ಚಾಲನೆ ಮಾಡುತ್ತಿದ್ದರು. ಇಬ್ಬರಿಗೂ ಒಟ್ಟು 9,300 ಗಂಟೆಗಳ ಹಾರಾಟದ ಅನುಭವವಿದೆ ಎಂದು ವರದಿಯಾಗಿದೆ.
ಕ್ಯಾಪ್ಟನ್ ಸುಮೀತ್ ಸಭರ್ವಾಲ್ ಲೈನ್ ಟ್ರೈನಿಂಗ್ ಕ್ಯಾಪ್ಟನ್ (LTC) ಆಗಿದ್ದಾರೆ. ಕ್ಯಾಪ್ಟನ್ ಸಭರ್ವಾಲ್ 8,200 ಗಂಟೆಗಳ ವಿಮಾನ ಹಾರಾಟದ ಅನುಭವ ಹೊಂದಿದ್ದರು. ಸಹಾಯಕ ಪೈಲಟ್ ಕ್ಲೈವ್ ಕುಂದರ್ 1,100 ಗಂಟೆಗಳ ಅನುಭವ ಹೊಂದಿದ್ದರು ಎಂದು ನಾಗರಿಕ ವಿಮಾನಯಾನ ನಿಯಂತ್ರಣ ಮಂಡಳಿ ಹೇಳಿದೆ. ವಿಮಾನವು ಪ್ರತಿ ನಿಮಿಷಕ್ಕೆ 475 ಅಡಿಗಳಷ್ಟು ಕೆಳಗೆ ಬೀಳುತ್ತಿತ್ತು. 625 ಅಡಿ ಎತ್ತರದಿಂದ ವೇಗವಾಗಿ ಕೆಳಗೆ ಬಂದ ಕಾರಣ ಪೈಲಟ್ಗಳಿಗೆ ಪ್ರತಿಕ್ರಿಯಿಸಲು ಕೇವಲ ಒಂದು ನಿಮಿಷಕ್ಕಿಂತ ಕಡಿಮೆ ಸಮಯವಿತ್ತು. ATCಯನ್ನು ಸಂಪರ್ಕಿಸಿದರೂ ಯಾವುದೇ ಪ್ರತಿಕ್ರಿಯೆ ಬಂದಲ್ಲ. ನಂತರ ಕೆಲವೇ ಕ್ಷಣಗಳಲ್ಲಿ ವಿಮಾನ ನೆಲಕ್ಕೆ ಅಪ್ಪಳಿಸಿದೆ.
ಪತನಗೊಂಡ ವಿಮಾನದಲ್ಲಿ ಇಬ್ಬರು ಪೈಲೆಟ್, 10 ಕ್ಯಾಬಿನ್ ಸಿಬ್ಬಂದಿ, 169 ಭಾರತೀಯರು, 53 ಬ್ರಿಟೀಷ್ ಪ್ರಜೆಗಳು, ಒಬ್ಬ ಕೆನಡಾ ಪ್ರಜೆ ಮತ್ತು7 ಪೋರ್ಚುಗೀಸ್ ಪ್ರಜೆಗಳು ಇದ್ದರು ಎನ್ನಲಾಗಿದೆ.
ಪತನಗೊಂಡ ವಿಮಾನದಲ್ಲಿದ್ರು ಗುಜರಾತ್ನ ಮಾಜಿ ಸಿಎಂ!

ಅಹ್ಮದಾಬಾದ್: ಗುಜರಾತ್ನ ಅಹ್ಮದಾಬಾದ್ನಲ್ಲಿ ಭೀಕರ ವಿಮಾನ ಅಪಘಾತ ಸಂಭವಿಸಿದ್ದು(Ahmedabad Plane Crash), 200ಕ್ಕೂ ಅಧಿಕ ಪ್ರಯಾಣಿಕರು ಮೃತಪಟ್ಟಿರುವ ಭೀತಿ ಎದುರಾಗಿದೆ. ಇನ್ನು ಈ ವಿಮಾನದಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ(Vijay Rupani) ಇದ್ದರು ಎನ್ನಲಾಗಿದೆ. ಅವರು ಅಹ್ಮದಾಬಾದ್ನಿಂದ ಲಂಡನ್ಗೆ ಪ್ರಯಾಣ ಬೆಳೆಸಿದ್ದರು. ಇದೀಗ ಸಂಭವಿಸಿರುವ ದುರಂತದಲ್ಲಿ ಅವರೂ ಕೂಡ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಏರ್ ಇಂಡಿಯಾ 171 ವಿಮಾನ ಅಹ್ಮದಾಬಾದ್ನಿಂದ ಲಂಡನ್ನ ಗಟ್ವಿಕ್ಗೆ ಹೊರಡಿತ್ತು. ಟೇಕ್ ಆಫ್ ಆದ ಕೆಲವೇ ಕೆಲವು ಗಂಟೆಗಳಲ್ಲಿ ವಿಮಾನ ಪತನಗೊಂಡು ಬೆಂಕಿಗೆ ಆಹುತಿಯಾಗಿತ್ತು. ಇನ್ನು ವಿಮಾನದಲ್ಲಿ 232 ಪ್ರಯಾಣಿಕರಿದ್ದರು ಎನ್ನಲಾಗಿದೆ.
ಈ ವಿಮಾನದಲ್ಲಿ 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ ಒಟ್ಟು 242 ಜನರು ಸಂಚರಿಸುತ್ತಿದ್ದರು ಎನ್ನಲಾಗಿದೆ. ಅಹಮದಾಬಾದ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸ್ವಲ್ಪ ದೂರದಲ್ಲಿರುವ ಫೋರೆನ್ಸಿಕ್ ಕ್ರಾಸ್ ರಸ್ತೆಯ ಬಳಿ ಪತನಗೊಂಡಿತು. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಘಟನೆ ಮಧ್ಯಾಹ್ನ 1ರಿಂದ 2 ಗಂಟೆಯ ನಡುವೆ ಸಂಭವಿಸಿದೆ.
ಈ ಸುದ್ದಿಯನ್ನೂ ಓದಿ | Ahmedabad Plane Crash: ಗುಜರಾತ್ ವಿಮಾನ ಪತನ; ಎಲ್ಲ 242 ಪ್ರಯಾಣಿಕರು ಸಾವು
5 ಗಂಟೆವರೆಗೆ ಏರ್ಪೋರ್ಟ್ ಶಟ್ಡೌನ್
ಸದ್ಯ ಅಹಮದಾಬಾದ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಶಟ್ಡೌನ್ ಮಾಡಲಾಗಿದೆ. ಸುಮಾರು 800 ಅಡಿ ಎತ್ತರದಿಂದ ಪತನಾವಾಗಿದ್ದು, ಸಾವು-ನೋವಿನ ಬಗ್ಗೆ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ.