ಕರ್ನಾಟಕ ಬಜೆಟ್​ ಮಹಿಳಾ ದಿನಾಚರಣೆ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

MB Patil:‌ ರನ್ಯಾ ರಾವ್‌ ಹಣ ಕಟ್ಟದ ಹಿನ್ನೆಲೆ ಜಮೀನು ಹಂಚಿಕೆಯಾಗಿಲ್ಲ: ಎಂ.ಬಿ. ಪಾಟೀಲ್‌ ಸ್ಪಷ್ಟನೆ

MB Patil: ನಟಿ ರನ್ಯಾ ರಾವ್ ಅವರ ಟಿಎಂಟಿ ಸರಳು ತಯಾರಿಸುವ ಯೋಜನೆಗೆ ಹಿಂದಿನ ಬಿಜೆಪಿ ಸರ್ಕಾರ ಅನುಮೋದನೆ ನೀಡಿತ್ತು. ಇದಕ್ಕೆ ಶಿರಾ ಕೈಗಾರಿಕಾ ಪ್ರದೇಶದಲ್ಲಿ 12 ಎಕರೆ ಜಮೀನು ಮಂಜೂರು ಮಾಡಲು 2023ರ ಜನವರಿ 2ರಂದು ನಡೆದಿದ್ದ ಉನ್ನತ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ತೀರ್ಮಾನಿಸಿತ್ತು. ಆದರೆ ರನ್ಯಾ ಅವರು‌ ನಿಗದಿತ ಅವಧಿಯಲ್ಲಿ ಹಣ ಪಾವತಿಸದ ಕಾರಣ ಅವರಿಗೆ ಜಮೀನಿನ ಹಂಚಿಕೆ ಮಾಡಿಲ್ಲ‌ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ರನ್ಯಾ ರಾವ್‌ ಹಣ ಕಟ್ಟದ ಹಿನ್ನೆಲೆ ಜಮೀನು ಹಂಚಿಕೆಯಾಗಿಲ್ಲ: ಎಂ.ಬಿ.ಪಾಟೀಲ್

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌.

Profile Siddalinga Swamy Mar 10, 2025 10:18 PM

ಬೆಂಗಳೂರು: ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್ (Ranya Rao) ಅವರ ಟಿಎಂಟಿ ಸರಳು ತಯಾರಿಸುವ ಯೋಜನೆಗೆ ಹಿಂದಿನ ಬಿಜೆಪಿ ಸರ್ಕಾರ (BJP Government) ಅನುಮೋದನೆ ನೀಡಿತ್ತು. ಆದರೆ ರನ್ಯಾ ಅವರು‌ ನಿಗದಿತ ಅವಧಿಯಲ್ಲಿ ಹಣ ಪಾವತಿಸದ ಕಾರಣ ಅವರಿಗೆ ಜಮೀನಿನ ಹಂಚಿಕೆ ಮಾಡಿಲ್ಲ‌ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ (MB Patil) ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ ಅವರು ಈ ಕುರಿತು ಮಾತನಾಡಿದರು.

ಚಿತ್ರನಟಿ ರನ್ಯಾ ರಾವ್ ಅವರ ಟಿಎಂಟಿ ಸರಳು ತಯಾರಿಸುವ ಯೋಜನೆಗೆ ಹಿಂದಿನ ಬಿಜೆಪಿ ಸರ್ಕಾರ ಅನುಮೋದನೆ ನೀಡಿತ್ತು. ಇದಕ್ಕೆ ಶಿರಾ ಕೈಗಾರಿಕಾ ಪ್ರದೇಶದಲ್ಲಿ 12 ಎಕರೆ ಜಮೀನು ಮಂಜೂರು ಮಾಡಲು 2023ರ ಜನವರಿ 2ರಂದು ನಡೆದಿದ್ದ ಉನ್ನತ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ತೀರ್ಮಾನಿಸಿತ್ತು. ಆದರೆ ರನ್ಯಾ ಅವರು‌ ನಿಗದಿತ ಅವಧಿಯಲ್ಲಿ ಹಣ ಪಾವತಿಸದ ಕಾರಣ ಅವರಿಗೆ ಜಮೀನಿನ ಹಂಚಿಕೆ ಮಾಡಿಲ್ಲ‌ ಎಂದು ತಿಳಿಸಿದರು.

ಈ ಸುದ್ದಿಯನ್ನೂ ಓದಿ | Karnataka Weather: ನಾಳೆ ಮೈಸೂರು, ಚಾಮರಾಜನಗರ ಜಿಲ್ಲೆ ಸೇರಿ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Ranya Rao: ನಟಿ ರನ್ಯಾ ರಾವ್ ಕೇಸ್‌ನಲ್ಲಿ ಉದ್ಯಮಿಯ ಪುತ್ರನೂ ಆರೆಸ್ಟ್‌

ಬೆಂಗಳೂರು: ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಿಸಿ (Gold smuggling) ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್‌ (Kannada Actress Ranya Rao) ಪ್ರಕರಣದ ತನಿಖೆಗೆ ತಿರುವು ದೊರೆತಿದೆ. ಚಿನ್ನ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದ ಉದ್ಯಮಿಯ ಪುತ್ರನೊಬ್ಬನನ್ನು ಬಂದಿಸಲಾಗಿದೆ. ರನ್ಯಾ ರಾವ್ ಮತ್ತು ಉದ್ಯಮಿಯ ಪುತ್ರ ಸ್ನೇಹಿತರಾಗಿದ್ದು, ವಿಚಾರಣೆಯ ಬಳಿಕ ಉದ್ಯಮಿಯ ಪುತ್ರನನ್ನು ಡಿಆರ್‌ಐ (DRI) ಅಧಿಕಾರಿಗಳು ಆರೆಸ್ಟ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಫೈವ್ ಸ್ಟಾರ್ ಹೋಟೆಲ್ ಮಾಲೀಕನ ತಮ್ಮನ ಮಗನನ್ನು ಆರೆಸ್ಟ್ ಮಾಡಲಾಗಿದೆ. ಬಂಧಿತನನ್ನು ತರುಣ್ ರಾಜು ಎಂದು ಗುರುತಿಸಲಾಗಿದೆ. ಉದ್ಯಮಿ ಪುತ್ರ ಹಾಗೂ ರನ್ಯಾ ರಾವ್ ಸ್ನೇಹಿತರಾಗಿದ್ದರು. ತರುಣ್ ರಾಜು ನಟಿ ರನ್ಯಾ ರಾವ್ ಮೂಲಕ ಅಕ್ರಮವಾಗಿ ಚಿನ್ನು ತರಿಸಿಕೊಳ್ಳುತ್ತಿದ್ದ ಎನ್ನುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಡಿಆರ್‌ಐ ಅಧಿಕಾರಿಗಳು ಉದ್ಯಮಿ ತರುಣ್ ರಾಜುವನ್ನು ಆರೆಸ್ಟ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಮಾರ್ಚ್ 3ರ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) 1962 ರ ಕಸ್ಟಮ್ಸ್ ಕಾಯ್ದೆಯಡಿಯಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) 12.56 ಕೋಟಿ ರೂಪಾಯಿ ಮೌಲ್ಯದ 14.2 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡಿದ್ದಕ್ಕಾಗಿ ರನ್ಯಾ ಅವರನ್ನು ಬಂಧಿಸಿತ್ತು. 1993ರ ಬ್ಯಾಚ್ ಐಪಿಎಸ್ ಅಧಿಕಾರಿ, ಪೊಲೀಸ್ ಮಹಾನಿರ್ದೇಶಕ (ಕರ್ನಾಟಕ ರಾಜ್ಯ ಪೊಲೀಸ್ ವಸತಿ ನಿಗಮ) ರಾಮಚಂದ್ರ ರಾವ್ ಅವರ ಮಲಮಗಳು ಮತ್ತು ಬೆಂಗಳೂರು ಮೂಲದ ಪ್ರಸಿದ್ಧ ವಾಸ್ತುಶಿಲ್ಪಿ ಜತಿನ್‌ ಹುಕ್ಕೇರಿ ಅವರ ಪತ್ನಿಯಾಗಿದ್ದು, ನಾಲ್ಕು ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು.

ಕಳೆದ ಒಂದು ವರ್ಷದಲ್ಲಿ ದುಬೈ ಮತ್ತು ಇತರ ಕೆಲವು ದೇಶಗಳಿಗೆ 25 ಬಾರಿ, ಬಂಧನಕ್ಕೆ ಹದಿನೈದು ದಿನಗಳಲ್ಲಿ ನಾಲ್ಕು ಬಾರಿ ಅವರು ಭೇಟಿ ನೀಡಿದ್ದು, ಕೆಐಎಯಲ್ಲಿ ಡಿಆರ್‌ಐ ಮತ್ತು ಕಸ್ಟಮ್ಸ್ ಅಧಿಕಾರಿಗಳ ಗಮನ ಸೆಳೆದಿತ್ತು, ರನ್ಯಾ ಪ್ರಯಾಣದ ಟಿಕೆಟ್‌ಗಳು, ಸ್ಥಳಗಳು, ಸಾರಿಗೆ ಮತ್ತು ಪಾವತಿ ವಿಧಾನಗಳನ್ನು ಬುಕ್ ಮಾಡುವ ಜನರು/ಏಜೆನ್ಸಿಗಳು ಪರಿಶೀಲಿಸಲ್ಪಟ್ಟವು. ಅಂತಾರಾಷ್ಟ್ರೀಯ ವಿಮಾನಗಳಲ್ಲಿ ವಿಮಾನ ನಿಲ್ದಾಣಕ್ಕೆ ಬರುವಾಗ ವಿಐಪಿ ಚಾನೆಲ್‌ಗಳನ್ನು ಅಕ್ರಮವಾಗಿ ಬಳಸಿ ನಿರ್ಗಮಿಸುತ್ತಿದ್ದರಿಂದ ಮತ್ತು ವಿಮಾನ ನಿಲ್ದಾಣಕ್ಕೆ ಪ್ರವೇಶಿಸುತ್ತಿದ್ದರಿಂದ ಗುಪ್ತಚರ ಪರಿಶೀಲನೆಯಿಂದ ತಪ್ಪಿಸಿಕೊಳ್ಳುತ್ತಿದ್ದರು.

ಮಾರ್ಚ್ 4 ರಂದು, ಬಂಧನದ ಮರುದಿನ, ಬೆಂಗಳೂರಿನ ರನ್ಯಾ ಅವರ ಮನೆ - ನಂ. 62, ಲಾವೆಲ್ಲೆ ರಸ್ತೆಯಲ್ಲಿರುವ ನಂದ್ವಾನಿ ಮ್ಯಾನ್ಷನ್ - ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ 2.06 ಕೋಟಿ ಮೌಲ್ಯದ ಚಿನ್ನಾಭರಣ ಮತ್ತು 2.67 ಕೋಟಿ ನಗದನ್ನು ಡಿಆರ್ ಐ ವಶಪಡಿಸಿಕೊಂಡಿದೆ. ಪ್ರಕರಣದಲ್ಲಿ ಒಟ್ಟು ವಶಪಡಿಸಿಕೊಳ್ಳಲಾದ ಮೊತ್ತ 17.29 ಕೋಟಿ ರೂಪಾಯಿಗಳಾಗಿದ್ದು, ಇದರಲ್ಲಿ 4.73 ಕೋಟಿ ಮೌಲ್ಯದ ಆಸ್ತಿಗಳು ಸೇರಿವೆ. ಮಾರ್ಚ್ 4 ರಂದು ಬೆಂಗಳೂರಿನ ಆರ್ಥಿಕ ಅಪರಾಧ ನ್ಯಾಯಾಲಯದ ಮುಂದೆ ಅವರನ್ನು ಹಾಜರುಪಡಿಸಿ ಮಾರ್ಚ್ 18 ರವರೆಗೆ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ.

ಈ ಸುದ್ದಿಯನ್ನೂ ಓದಿ | Greater Bengaluru: ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024 ಅಂಗೀಕಾರ; 7 ಪಾಲಿಕೆಗಳಾಗಿ ಬಿಬಿಎಂಪಿ ವಿಭಜನೆ