ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CM Siddaramaiah: ಮುಂದಿನ ವರ್ಷವೂ ನಾನೇ ಸಿಎಂ, ನಂತರ ಐದು ವರ್ಷವೂ ನಾನೇ: ಸಿದ್ದರಾಮಯ್ಯ

ಮುಖ್ಯಮಂತ್ರಿ ಪದವಿಯಲ್ಲಿ ಬದಲಾವಣೆಯ ಕುರಿತು ಆಗೀಗ ಏಳುತ್ತಿರುವ ಊಹಾಪೋಹಗಳಿಗೆ ಸೂಕ್ತ ಉತ್ತರ ನೀಡುವ ಸದವಕಾಶಗಳನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಬಳಸಿಕೊಳ್ಳುತ್ತಿದ್ದು, ನಿನ್ನೆ ಕೂಡ ಸದನದಲ್ಲಿ ವಿಪಕ್ಷ ನಾಯಕರ ಮಾತಿಗೆ ಉತ್ತರ ನೀಡುತ್ತ ಇದನ್ನು ಸ್ಪಷ್ಟಪಡಿಸಿದ್ದಾರೆ.

ಮುಂದಿನ ವರ್ಷವೂ ನಾನೇ ಸಿಎಂ, ನಂತರ ಐದು ವರ್ಷವೂ ನಾನೇ: ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ

ಹರೀಶ್‌ ಕೇರ ಹರೀಶ್‌ ಕೇರ Mar 13, 2025 9:57 AM

ಬೆಂಗಳೂರು: ಮುಂದಿನ ವರ್ಷವೂ ನಾನೇ ಮುಖ್ಯಮಂತ್ರಿ (Chief minister) ಆಗಿರುತ್ತೇನೆ. ಅದರ ಮುಂದಿನ ಸರಕಾರದ ಆಡಳಿತ ಅವಧಿಗೂ ನಾನೇ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸದನದಲ್ಲೇ ಹೇಳಿದ್ದಾರೆ. ವಿಧಾನ ಸಭೆಯಲ್ಲಿ (Vidhana sabha) ವಿಪಕ್ಷ ನಾಯಕರ ಮಾತಿನ ಸಂದರ್ಭದಲ್ಲಿ ಅವರು ಸ್ಪಷ್ಟನೆ ನೀಡಿದ್ದಾರೆ. ಆ ಮೂಲಕ ಸಿಎಂ ಪದವಿಯಲ್ಲಿ ಬದಲಾವಣೆಯ ಕುರಿತು ಎದ್ದಿರುವ ಊಹಾಪೋಹಗಳಿಗೆ ತೆರೆ ಎಳೆಯಲು ಈ ಸಂದರ್ಭವನ್ನು ಅವರು ಉಪಯೋಗಿಸಿಕೊಡರು.

ಗ್ಯಾರಂಟಿ ಅನುಷ್ಠಾನ ಸಮಿತಿಗಳಿಗೆ ಕಾಂಗ್ರೆಸ್ ಸದಸ್ಯರ ನೇಮಕಕ್ಕೆ ಆಕ್ಷೇಪಿಸಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಮಾತನಾಡುತ್ತಿದ್ದರು. ಆಗ ಸಿದ್ದರಾಮಯ್ಯ ಅವರು "ಹೇ... ಆಶೋಕ ಬರೆದುಕೊ, ನಾನೇ ಪರ್ಮನೆಂಟು" ಅಂತ ಹೇಳಿದ್ದರು. "ರಾಜ್ಯದಲ್ಲಿ ಅಧಿಕಾರ ಹಂಚಿಕೆ ವಿಚಾರವಾಗಿ ಅನೇಕ ಕಾಂಗ್ರೆಸ್ ನಾಯಕರೇ ಹೇಳಿಕೆ ನೀಡುತ್ತಿದ್ದಾರೆ. ಆದರೆ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿ ಐದು ವರ್ಷ ಪೂರೈಸಲಿ ಎಂದು ನಾವು ಬಯಸುತ್ತೇವೆ" ಎಂದು ಆರ್‌. ಅಶೋಕ್‌ ಹೇಳಿದರು.

ಇದಕ್ಕೆ ಮರು ಉತ್ತರಿಸಿದ ಸಿದ್ದರಾಮಯ್ಯ ಅವರು, “ಹೌದು, ಈ ಐದು ವರ್ಷ ಅಲ್ಲ, ಮತ್ತೆ ಮುಂದಿನ ಐದು ವರ್ಷವೂ ನಾವೇ ಅಧಿಕಾರಕ್ಕೆ ಬರುತ್ತೇವೆ" ಎಂದು ಹೇಳಿದರು. ಆಗಲೂ ನೀವೇ ಮುಖ್ಯಮಂತ್ರಿ ಆಗಿರುತ್ತೀರಾ ಎಂಬ ಬಿಜೆಪಿ ಸದಸ್ಯರ ಪ್ರಶ್ನೆಗೆ, "ಹೌದು ನಾನೇ ಇರುತ್ತೇನೆ" ಎಂದು ಸಿದ್ದರಾಮಯ್ಯ ಉತ್ತರಿಸಿದರು.

ಸಿದ್ದರಾಮಯ್ಯ ಅವರ ಈ ಮಾತುಗಳು ಬಿಜೆಪಿ ಶಾಸಕರ ಬಾಯಿ ಮುಚ್ಚಿಸಿತು. ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಪದವಿ ಆಕಾಂಕ್ಷಿಗಳ ಬಣದಲ್ಲಿಯೂ ಈ ಮಾತು ಕಳವಳ ಮೂಡಿಸಿರುವ ಸಾಧ್ಯತೆ ಇದೆ.

ಹಲ್ಲೆ ಪ್ರಕರಣದಲ್ಲಿ ಸಚಿವ ಮುನಿಯಪ್ಪಗೆ ಜಾಮೀನು

ಬೆಂಗಳೂರು: 2013ರ ವಿಧಾನಸಭಾ ಚುನಾವಣೆ ವೇಳೆ ನಡೆದಿದ್ದ ಕೆಜಿಎಫ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಸಚಿವ ಕೆ.ಹೆಚ್ ಮುನಿಯಪ್ಪಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪದೇ ಪದೆ ನ್ಯಾಯಾಲಯಕ್ಕೆ ಗೈರು ಹಾಜರಾಗುತ್ತಿದ್ದ ಮುನಿಯಪ್ಪ ಅವರಿಗೆ ನ್ಯಾಯಾಲಯ ಬಂಧನ ಎಚ್ಚರಿಕೆ ನೀಡಿತ್ತು. ಇದಾದ ಬಳಿಕ ಮುನಿಯಪ್ಪ ಅವರು ಕೋರ್ಟ್‌ಗೆ ಧಾವಿಸಿ ಬಂದಿದ್ದು, ನಂತರ ಕೋರ್ಟ್‌ ಅವರಿಗೆ ಜಾಮೀನು ನೀಡಿದೆ.

ಅಂದು ಕೆಜಿಎಫ್‍ನ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ವಿ.ಶಂಕರ್ ಮೇಲೆ ಅಂದು ಸಂಸದರಾಗಿದ್ದ ಮುನಿಯಪ್ಪ ಹಾಗೂ ಬೆಂಬಲಿಗರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಹಲ್ಲೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಮುನಿಯಪ್ಪ ಗೈರಾಗುತ್ತಿದ್ದರು. ಹೀಗಾಗಿ ವಿಚಾರಣೆಗೆ ಹಾಜರಾಗದಿದ್ದರೆ ಬಂಧನ ವಾರೆಂಟ್ ಹೊರಡಿಸುವುದಾಗಿ ನ್ಯಾಯಮೂರ್ತಿ ಗಜಾನನ ಭಟ್ ಎಚ್ಚರಿಕೆ ನೀಡಿದ್ದರು. ಬಳಿಕ ಲಕ್ಷ್ಮೀ ನಾರಾಯಣ್ ಮತ್ತು ಮುನಿಯಪ್ಪ ಇಬ್ಬರೂ ನ್ಯಾಯಾಧೀಶರ ಮುಂದೆ ಹಾಜರಾದರು. ವಿಚಾರಣೆ ವೇಳೆ ನ್ಯಾಯಾಧೀಶರು 50 ಸಾವಿರ ರೂಪಾಯಿ ಶ್ಯೂರಿಟಿಯೊಂದಿಗೆ ಜಾಮೀನು ಮಂಜೂರು ಮಾಡಿದರು.

ಇದನ್ನೂ ಓದಿ: KAS Exam: ನ್ಯಾಯಾಲಯ ಸೂಚಿಸಿದರೆ ಕೆಎಎಸ್‌ ಮರು ಪರೀಕ್ಷೆ: ಸಿಎಂ ಸಿದ್ದರಾಮಯ್ಯ