ಐಪಿಎಲ್​ ಸುನಿತಾ ವಿಲಿಯಮ್ಸ್​ ವಿದೇಶ ಫ್ಯಾಷನ್​ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Honey Trap Case: ಹನಿ ಟ್ರ್ಯಾಪ್ ಬಗ್ಗೆ ಸಚಿವರು ದೂರು ನೀಡದೆ ತನಿಖೆ ನಡೆಸಲು ಆಗಲ್ಲ: ಗೃಹ ಸಚಿವ ಪರಮೇಶ್ವ‌ರ್

Honey Trap Case: ಹನಿ ಟ್ರ್ಯಾಪ್ ಪ್ರಕರಣದಲ್ಲಿ ಸಚಿವ ಕೆ.ಎನ್.ರಾಜಣ್ಣ ದೂರು ನೀಡದೇ ನಾನೇನು ಮಾಡಲಿ? ಅವರು ದೂರು ನೀಡಲಿ. ಎಫ್‌ಐಆರ್ ಆಗದೇ ತನಿಖೆಗೆ ಕೊಡಲು ಆಗಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಸಚಿವರು ದೂರು ನೀಡದೆ ತನಿಖೆ ನಡೆಸಲು ಆಗಲ್ಲ: ಪರಮೇಶ್ವ‌ರ್

Profile Prabhakara R Mar 24, 2025 1:50 PM

ಬೆಂಗಳೂರು: ಹನಿ ಟ್ರ್ಯಾಪ್ ಪ್ರಕರಣಕ್ಕೆ (Honey Trap Case) ಸಂಬಂಧಿಸಿದಂತೆ ಎಫ್‌ಐಆ‌ರ್ ಆಗದೇ ತನಿಖೆಗೆ ಕೊಡಲು ಆಗಲ್ಲ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿರುವ ಅವರು, ಹನಿ ಟ್ರ್ಯಾಪ್ ಪ್ರಕರಣದಲ್ಲಿ ಸಚಿವ ಕೆ.ಎನ್.ರಾಜಣ್ಣ ದೂರು ನೀಡದೇ ನಾನೇನು ಮಾಡಲಿ? ಅವರು ದೂರು ನೀಡಲಿ. ಎಫ್‌ಐಆರ್ ಆಗದೇ ತನಿಖೆಗೆ ಕೊಡಲು ಆಗಲ್ಲ ಎಂದಿದ್ದಾರೆ.

ರಾಜಣ್ಣ ಏನು ಮಾಡುತ್ತಾರೋ ನೋಡೋಣ. ರಾಜಣ್ಣ ಅವರಿಗೆ ಬಹಳ ಜನ ಆಪ್ತರಿದ್ದಾರೆ. ಅವರು ಯಾರ ಜತೆ ಯಾವ ರೀತಿ ಮಾತನಾಡುತ್ತಾರೆ ನನಗೇನು ಗೊತ್ತು? ರಾಜಣ್ಣ ದಿನವಿಡೀ ನನ್ನ ಜೊತೆಯೇ ಇದ್ದರೂ ಈ ಬಗ್ಗೆ ಏನೂ ಹೇಳಿಲ್ಲ. ಅವರಿಗೆ ನನ್ನನ್ನೂ ಸೇರಿದಂತೆ ಬಹಳ ಜನ ಆಪ್ತರಿದ್ದಾರೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ | Hari Paraak Column: ಹನಿ ಹನಿ 'ಫ್ರೇಮ್‌' ಕಹಾನಿ

ಹನಿಟ್ರ್ಯಾಪ್ ವಿಚಾರ ಕಾಂಗ್ರೆಸ್‌ ವರಿಷ್ಠರಿಗೆ ದೂರು ನೀಡುವೆ: ಎಂಎಲ್‌ಸಿ‌ ರಾಜೇಂದ್ರ

ತುಮಕೂರು: ಹನಿಟ್ರ್ಯಾಪ್ ವಿಚಾರ (Honey trap case) ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಣದೀಪ್‌ ಸುರ್ಜೇವಾಲ ಹಾಗೂ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ದೂರು ನೀಡುತ್ತೇನೆ ಎಂದು ಎಂಎಲ್‌ಸಿ‌ ರಾಜೇಂದ್ರ ಹೇಳಿದರು. ನಗರದಲ್ಲಿ‌ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಏನೆಲ್ಲಾ ಆಗಿದೆ ಅನ್ನೋದನ್ನು ಗಮನಕ್ಕೆ‌ ತಂದಿದ್ದೇನೆ. ನ್ಯಾಯಯುತವಾಗಿ ತನಿಖೆ ನಡೆಸಬೇಕು ಎಂದು ಮನವಿ ಮಾಡಿದ್ದೇನೆ ಅವರು ಸಹ ದೂರು ಕೊಡಲು ಹೇಳಿದ್ದು, ತನಿಖೆ ಮಾಡಿಸುತ್ತೇನೆ ಅಂತ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.

ಸಚಿವ ಕೆ.ಎನ್‌. ರಾಜಣ್ಣ ಹಿಂದುಳಿದ, ದಲಿತ ನಾಯಕ. ದಲಿತರ ಮೇಲೆ ಈ ರೀತಿ ಆಗೋದು ಒಳ್ಳೆ ಬೆಳವಣಿಗೆ ಅಲ್ಲ. ರಾಜಣ್ಣರ ನೇರ ನುಡಿಯೇ ಟಾರ್ಗೆಟ್‌ಗೆ ಕಾರಣ. ಯಾರ ಮೇಲೂ ದೂರು ಕೊಟ್ಟಿಲ್ಲ. ಯಾರು ಮಾಡಿದ್ದಾರೋ ಅದು ನಿಲ್ಲಬೇಕು. ಈ ಸಂಬಂಧ ನಾನು ಹೈಕಮಾಂಡ್ ಭೇಟಿ ಮಾಡುತ್ತೇನೆ ಮಲ್ಲಿಕಾರ್ಜುನ್ ಖರ್ಗೆ, ಸುರ್ಜೇವಾಲ, ಕೆ.ಸಿ ವೇಣುಗೋಪಾಲ ಅವರನ್ನು ಭೇಟಿಯಾಗಿ ದೂರು ಕೊಡುತ್ತೇನೆ ಎಂದಿದ್ದಾರೆ.

ಹನಿಟ್ರ್ಯಾಪ್ ವಿಚಾರವಾಗಿ ಬಹಳ ಜನ ಕೋರ್ಟ್‌ನಲ್ಲಿ ಸ್ಟೇ ತಂದಿದ್ದಾರೆ. ರಮೇಶ್ ಜಾರಕಿಹೊಳಿ ಮೇಲೆ ಆಯ್ತು. ರಾಜಕೀಯವಾಗಿ ಏನು ಮಾಡಲಿಕ್ಕೆ ಆಗದಿದ್ದಾಗ, ಈ ರೀತಿ ಕುಗ್ಗಿಸಬೇಕು ಎಂದು ಹೀಗೆ ಮಾಡುತ್ತಾರೆ. ಕಾಂಗ್ರೆಸ್ ಪಕ್ಷವೊಂದೆ ಅಲ್ಲ ಎಲ್ಲ ಪಕ್ಷದಲ್ಲಿಯೂ ಈ ರೀತಿ ಇದೆ ಎಂದರು.‌

ಹಲೋ ಅಂದರೆ ಆ ಕಡೆಯಿಂದ‌ ಹಲೋ ಅಂತಾರೆ ಎಂಬ ಡಿ.ಕೆ. ಶಿವಕುಮಾರ್‌ ಹೇಳಿಕೆ ವಿಚಾರಕ್ಕೆ ಪ್ರತಿಕ್ರಯಿಸಿ, ನಾನು ಏನು ಹೇಳಿದರೂ ಕಷ್ಟವಾಗುತ್ತೆ. ಅದನ್ನು ಅವರನ್ನೇ ಕೇಳಬೇಕು. ಹಲೋ ಅನ್ನೋದು ಜಾಸ್ತಿ ಗೊತ್ತಿರುವ ಅವರನ್ನೇ ಕೇಳಬೇಕು ಎಂದು ಹೇಳಿದ್ದಾರೆ.

KN Rajanna: ಹನಿಟ್ರ್ಯಾಪ್‌; ಗೃಹ ಮಂತ್ರಿಗೆ ಲಿಖಿತ ದೂರು ಕೊಡ್ತೀನಿ ಎಂದ ಸಚಿವ ಕೆ. ಎನ್. ರಾಜಣ್ಣ

ಲಿಂಕ್‌ ಕೆನಾಲ್‌ ವಿಚಾರದಲ್ಲಿ ಬೆದರಿಕೆ ವಿಚಾರ ಸಂಬಂಧ ಮಾತನಾಡಿ, ಶಾಸಕರಿಂದ ಅಲ್ಲ, ಶಾಸಕರ ಕಡೆಯಿಂದ ಎಂದು ಹೇಳಿ ಬೆದರಿಕೆ ಹಾಕಿದ್ದಾರೆ. ಲಿಂಕ್ ಕೆನಾಲ್‌ ವಿಚಾರದಲ್ಲಿ ಕಳೆದ 15 ದಿನಗಳ ಹಿಂದೆ ನಿರಂತರವಾಗಿ ಕರೆ ಮಾಡುತ್ತಿದ್ದರು. ನಾನು ಗ್ರಾಮ ಪಂಚಾಯಿತಿ ಸದಸ್ಯ, ನಿಮಗೆ ವೋಟ್ ಹಾಕಿದ್ದೇನೆ. ನೀನು, ನಿಮ್ಮಪ್ಪ ಲಿಂಕ್ ಕೆನಾಲ್ ನಿಲ್ಲಿಸುತ್ತೀರಾ, ತಾಕತ್ ಇದ್ದರೆ ಕುಣಿಗಲ್‌ಗೆ ಬನ್ನಿ ಎಂದು ಎರಡ್ಮೂರು ದಿನ ನನಗೆ ಬೆದರಿಕೆ ಹಾಕಿದ್ದರು. ಡಿಜಿಯವರಿಗೆ ಕಂಪ್ಲೆಂಟ್ ಕೊಡುವಾಗ ಇದನ್ನು ಸೇರಿಸುತ್ತೇನೆ ತಿಳಿಸಿದ್ದಾರೆ.