ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

DK Shivakumar: ಹಠ ಹಿಡಿಯದೇ ಸಹಕರಿಸಿ: ಸಾರಿಗೆ ನೌಕರರಿಗೆ ಡಿಸಿಎಂ ಡಿಕೆ ಶಿವಕುಮಾರ್ ಮನವಿ

KSRTC Strike: ಸಾರಿಗೆ ನೌಕರರ ಬೇಡಿಕೆ ತಪ್ಪು ಎಂದು ಸರ್ಕಾರ ಹೇಳುತ್ತಿಲ್ಲ. ಅವರು ಕೂಡ ಸರ್ಕಾರದ ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕು. ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರು ಅವರಿಗೆ ನೆರವಾಗಲು ಪ್ರಯತ್ನಿಸುತ್ತಿದ್ದಾರೆ. ನಾಗರೀಕರನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಹೇಳಿದ್ದಾರೆ.

ಡಿಕೆ ಶಿವಕುಮಾರ್

ಬೆಂಗಳೂರು: ಸಾರಿಗೆ ನೌಕರರಿಗೆ ಸಹಾಯ ಮಾಡುವ ಅವಕಾಶ ಸಿಕ್ಕರೆ ಖಂಡಿತವಾಗಿ ಮುಖ್ಯಮಂತ್ರಿಗಳು ಅದನ್ನು ಮಾಡುತ್ತಾರೆ. ಇಲ್ಲಿ ಹಠ ಮಾಡುವುದರಿಂದ (KSRTC strike) ಪ್ರಯೋಜನವಿಲ್ಲ. ಸಾರ್ವಜನಿಕರ ಬದುಕು ಗಮನದಲ್ಲಿಟ್ಟುಕೊಂಡು ಸಹಕರಿಸಿ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DCM DK Shivakumar) ಅವರು ಸಾರಿಗೆ ನೌಕರರಿಗೆ ಮನವಿ ಮಾಡಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.

'ಸರ್ಕಾರ ಹಠಕ್ಕೆ ಬಿದ್ದು, ಸಾರಿಗೆ ನೌಕಕರ ಮನವಿಗೆ ಸ್ಪಂದಿಸುತ್ತಿಲ್ಲ' ಎಂಬ ಆರೋಪದ ಬಗ್ಗೆ ಕೇಳಿದಾಗ, 'ಸಾರಿಗೆ ನೌಕರರ ಬೇಡಿಕೆ ತಪ್ಪು ಎಂದು ಸರ್ಕಾರ ಹೇಳುತ್ತಿಲ್ಲ. ಅವರು ಕೂಡ ಸರ್ಕಾರದ ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕು. ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರು ಅವರಿಗೆ ನೆರವಾಗಲು ಪ್ರಯತ್ನಿಸುತ್ತಿದ್ದಾರೆ. ನಾಗರೀಕರನ್ನು ಗಮನದಲ್ಲಿಟ್ಟುಕೊಳ್ಳಬೇಕು. ಸಾಧ್ಯವಾಗದನ್ನು ಮಾಡಿ ಎಂದು ಒತ್ತಡ ಹಾಕಬಾರದು, ನಮಗೆ ಸಹಕಾರ ನೀಡಬೇಕು ಎಂದು ಮನವಿ ಮಾಡುತ್ತೇನೆ. ಇಂದು ಕರ್ತವ್ಯಕ್ಕೆ ಹಾಜರಾಗಿರುವ ಚಾಲಕರು ಹಾಗೂ ಕಂಡಕ್ಟರ್ ಗಳಿಗೆ ಅಭಿನಂದಿಸುತ್ತೇನೆ. ಸಾರ್ವಜನಿಕರ ಬದುಕು ಮುಖ್ಯ' ಎಂದು ತಿಳಿಸಿದರು.

ಒಂದು ದಿನ ಮುಂದೂಡಿ ಎಂಬ ಕೋರ್ಟ್ ಆದೇಶಕ್ಕೂ ಬೆಲೆ ನೀಡದೆ ಕೆಲವರು ಮುಷ್ಕರ ಮಾಡುತ್ತಿದ್ದಾರೆ ಎಂದು ಕೇಳಿದಾಗ, ಅನಗತ್ಯವಾಗಿ ಕಾನೂನಿಗೂ ಗೌರವ ನೀಡದೇ ಹಠ ಮಾಡುವುದು ಬೇಡ. ನೀವು ಸಮಾಜ ಸೇವೆ ಮಾಡುತ್ತಿದ್ದು, ನಮಗೆ ಸಹಕಾರ ನೀಡಿ ಎಂದು ಮನವಿ ಮಾಡಿದರು.

ಮೆಟ್ರೋ ಹಳದಿ ಮಾರ್ಗ ಉದ್ಘಾಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದಾರಾ ಎಂಬ ಪ್ರಶ್ನೆಗೆ, ಆಗಸ್ಟ್ 10ರಂದು ಆಗಮಿಸುವುದಾಗಿ ತಿಳಿಸಿದ್ದಾರೆ. ಹಾಗಾಗಿ ನಾನು ಉದ್ಘಾಟನೆಯಾಗಲಿರುವ ಮೆಟ್ರೋ ಮಾರ್ಗವನ್ನು ಪೂರ್ವಭಾವಿಯಾಗಿ ಪರಿಶೀಲನೆ ಮಾಡಿದ್ದೇನೆ. ಅಧಿಕೃತ ಕಾರ್ಯಕ್ರಮ ಪಟ್ಟಿ ಇನ್ನೂ ಬಂದಿಲ್ಲ. ಆದರೆ ರೈಲ್ವೇ ಯೋಜನೆ ಉದ್ಘಾಟನೆ, ಅವರ ಪಕ್ಷದ ಕಾರ್ಯಕ್ರಮ ಸೇರಿದಂತೆ ಅನೇಕ ಕಾರ್ಯಕ್ರಮಗಳಿವೆ ಎಂದು ತಿಳಿಸಿದರು.

ಇದನ್ನೂ ಓದಿ: kSRTC Strike: ಸಾರಿಗೆ ಮುಷ್ಕರದಲ್ಲಿ ಪಾಲ್ಗೊಂಡ ನೌಕರರ ಸಂಬಳ ಕಟ್, ರಜೆ ರದ್ದು, ಎಸ್ಮಾ ಜಾರಿ

ಹರೀಶ್‌ ಕೇರ

View all posts by this author