ಕಚ್ಚಾ ತೈಲ ಬೆಲೆ ಕಡಿಮೆ ಇದ್ರೂ ಡೀಸೆಲ್-ಪೆಟ್ರೋಲ್ ಬೆಲೆ ಏರಿಕೆ: ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ
ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ 108-125 ಡಾಲರ್ ಇತ್ತು. ಆಗ ಡೀಸೆಲ್ ಬೆಲೆ 46.59 ಇತ್ತು. ಆದರೆ, ಮೋದಿಯವರ ಕಾಲದಲ್ಲಿ ಕಚ್ಚಾ ತೈಲದ ಬೆಲೆ 73-76 ಡಾಲರ್ ಇದೆ. ಆದರೆ ಡೀಸೆಲ್ ಬೆಲೆ 90 ರೂ. ಆಗಿದೆ. ಅರ್ಧದಷ್ಟು ಬೆಲೆ ಹೆಚ್ಚಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.


ಬೆಂಗಳೂರು: ಮನಮೋಹನ್ ಸಿಂಗ್ ಅವಧಿಯಲ್ಲಿ ಕಚ್ಚಾತೈಲದ ಬೆಲೆ ಹೆಚ್ಚಿದ್ದರೂ ಡೀಸೆಲ್-ಪೆಟ್ರೋಲ್ ಬೆಲೆ ಕಡಿಮೆ ಇತ್ತು. ಈಗ ಕಚ್ಚಾ ತೈಲ ಬೆಲೆ (Crude oil price) ಕಡಿಮೆ ಇದ್ದರೂ ಮೋದಿ ಡೀಸೆಲ್-ಪೆಟ್ರೋಲ್ ಬೆಲೆ (Petrol and diesel price hike) ವಿಪರೀತ ಹೆಚ್ಚಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ವಿಧಾನ ಪರಿಷತ್ನಲ್ಲಿ ಮಾತನಾಡಿರುವ ಅವರು,ಬೆಲೆ ಏರಿಕೆಯನ್ನು ಬಿಜೆಪಿಯವರು ಪ್ರಶ್ನಿಸಿದ್ದಾರೆ. ಆದರೆ, ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ 108-125 ಡಾಲರ್ ಇತ್ತು, ಆಗ ಡೀಸೆಲ್ ಬೆಲೆ 46.59 ಇತ್ತು, ಮೋದಿಯವರ ಕಾಲದಲ್ಲಿ ಕಚ್ಚಾ ತೈಲದ ಬೆಲೆ 73-76 ಡಾಲರ್ ಇದೆ, ಆದರೆ ಡೀಸೆಲ್ ಬೆಲೆ 90 ರೂ. ಆಗಿದೆ. ಅರ್ಧದಷ್ಟು ಬೆಲೆ ಹೆಚ್ಚಾಗಿದೆ ಎಂದು ಟೀಕಿಸಿದರು.
ಗೃಹಲಕ್ಷ್ಮಿ ಹಣ ಆರು ತಿಂಗಳಿಂದ ಬಾಕಿ ಇದೆ ಎಂದು ವಿರೋಧಪಕ್ಷದ ನಾಯಕರು ತಿಳಿಸಿದ್ದಾರೆ. ಇದು ಅಪ್ಪಟ ಸುಳ್ಳು. ಆದರೆ ಗೃಹಲಕ್ಷ್ಮಿ ಯೋಜನೆಯ ಕೇವಲ ಜನವರಿಯಿಂದ ಉಳಿದಿದ್ದು, ಅದನ್ನೂ ಪಾವತಿಸಲಾಗುವುದು.
ಶಿಕ್ಷಣ ಇಲಾಖೆಯಡಿ 11,400 ಶಿಕ್ಷಕರ ಕೊರತೆ ಇದೆ. 6,400 ಶಾಲೆಗಳಲ್ಲಿ ಏಕ ಶಿಕ್ಷಕರು ಇದ್ದಾರೆ. ಬಿಜೆಪಿಯು 4 ವರ್ಷದಲ್ಲಿ ಎಷ್ಟು ಜನ ಶಿಕ್ಷಕರ ನೇಮಕಾತಿ ಮಾಡಿದ್ದಾರೆಂದು ತಿಳಿಸಲಿ ಎಂದು ಸಿಎಂ ಸವಾಲು ಹಾಕಿದರು.
ವಿವಿಗಳನ್ನು ಮುಚ್ಚುವುದಿಲ್ಲ
ಎಲ್ಲಾ ದುರ್ಬಲ ವರ್ಗದವರನ್ನೂ ನಾನು ಪ್ರೀತಿಸುತ್ತೇನೆ. ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ಪ್ರಸ್ತಾಪಿಸಲಾಗಿದೆ. ಆದರೆ ವಿವಿಗಳನ್ನು ಮುಚ್ಚುವುದಿಲ್ಲ. ಸಚಿವ ಸಂಪುಟ ಉಪಸಮಿತಿಯ ವರದಿ ಬಂದ ನಂತರ ವಿವಿಗಳನ್ನು ಮುಂದುವರೆಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು.
ರೈತರ ಆತ್ಮಹತ್ಯೆಗಳು ಹೆಚ್ಚಿರುವ ಬಗ್ಗೆ ಕೇಳಲಾಗಿದೆ. ಆದರೆ ವಾಸ್ತವಿಕವಾಗಿ 40% ವರೆಗೆ ಆತ್ಮಹತ್ಯೆಗಳು ಕಡಿಮೆಯಾಗಿದೆ. ಫೆಬ್ರವರಿ ಅಂತ್ಯದವರಗೆ 644 ಆಗಿವೆ. ಆತ್ಮಹತ್ಯೆಗಳು ಇಳಿಮುಖವಾಗಿದೆ. ನಾವು ಎಲ್ಲಾ ಬಾಬ್ತುಗಳಿಂದ 7 ರಿಂದ 8 ಸಾವಿರ ರೂ. ಹೆಚ್ಚಿಸಿದ್ದೇವೆ. ಆದರೆ ಗ್ಯಾರಂಟಿಗಳಿಗೆ 51 ಸಾವಿರ ಕೋಟಿ ರೂ. ನೀಡಿದ್ದೇವೆ, ನೀರಾವರಿಗೆ ಈ ಬಾರಿ ಸಣ್ಣ ನೀರಾವರಿಗೆ 1000 ಕೋಟಿ ರೂ. ಹೆಚ್ಚಿಸಲಾಗಿದೆ ಎಂದರು.
ಯಡಿಯೂರಪ್ಪನವರು ಮಹದಾಯಿ ಯೋಜನೆ ಅನುಷ್ಠಾನ ಮಾಡುವುದಾಗಿ ರಕ್ತದಲ್ಲಿ ಬರೆದುಕೊಡುತ್ತೇನೆ ಎಂದಿದ್ದರು. ಆದರೆ ಅವರಿಂದ ಯೋಜನೆ ಅನುಷ್ಠಾನಗೊಳಿಸಲು ಸಾಧ್ಯವಾಗಲಿಲ್ಲ.
ಹಿಂದೆ 2013ರಲ್ಲಿ ಕೂಡಲಸಂಗಮದಲ್ಲಿ ಪ್ರತಿ ವರ್ಷ 10 ಸಾವಿರ ಕೋಟಿಗಳನ್ನು ನೀರಾವರಿಗೆ ಇಡುತ್ತೇವೆ. 56,000 ಕೋಟಿ ರೂ.ಗಳನ್ನು ನೀರಾವರಿಗೆ ಖರ್ಚು ಮಾಡಿದ್ದೇವೆ. ಪ್ರತಿ ವರ್ಷ 1.50 ಲಕ್ಷ ಕೋಟಿ ಖರ್ಚು ಮಾಡುತ್ತೇವೆ ಎಂದಿದ್ದ ಬಿಜೆಪಿಯವರು ನಾಲ್ಕು ವರ್ಷ ಪ್ರತಿ ವರ್ಷ ಕೇವಲ ಸರಾಸರಿ 16 ಸಾವಿರ ಕೋಟಿ ಖರ್ಚು ಮಾಡಿದ್ದೀರಿ ಎಂದು ಕಿಡಿ ಕಾರಿದರು.
ಈ ಸುದ್ದಿಯನ್ನೂ ಓದಿ | Congress guarantees: ಭಾರತದ 100 ಕೋಟಿ ಜನರಿಗೆ ಕೊಳ್ಳುವ ಶಕ್ತಿಯೇ ಇಲ್ಲದ ಸ್ಥಿತಿ ಬಂದಿದೆ: ಸಿಎಂ ಸಿದ್ದರಾಮಯ್ಯ
ರಾಜ್ಯದ ಅಭಿವೃದ್ಧಿ ಮತ್ತು ನಮ್ಮ ಸರ್ಕಾರದ ಸಾಧನೆಗಳನ್ನು ರಾಜ್ಯಪಾಲರು ಮೆಚ್ಚಿ ಮಾತನಾಡಿರುವುದರಲ್ಲಿ ಸಂಪೂರ್ಣ ಸತ್ಯವಿದೆ. ಕೃಷ್ಣಾ ಮೇಲ್ದಂಡೆ ಯೋಜನೆಗೆ ಐತೀರ್ಪು ಬಂದು 13 ವರ್ಷಗಳಾಗಿದೆ, ಆದರೆ ಕೇಂದ್ರ ಇದುವರೆಗೂ ಅಧಿಸೂಚನೆ ಹೊರಡಿಸಲಿಲ್ಲ. 7 ಸಾವಿರ ಕೋಟಿ ಬೆಲೆ ಏರಿಕೆ ಆಗಿರುವುದು ನಿಜ, ಆದರೆ ಬಿಜೆಪಿಯವರು 40 ಸಾವಿರ ಕೋಟಿ ತೆರಿಗೆ ಹೆಚ್ಚಿಸಿದ್ದಾರೆ ಎನ್ನುತ್ತಿರುವುದು ಪರಮ ಸುಳ್ಳು. Revenue expenditure ಹೆಚ್ಚಾಗುವಾಗ ಆದಾಯ ಬರಬೇಕಲ್ಲ. ತೆರಿಗೆ ಹೆಚ್ಚಿಸುವುದು ಒಂದು ನಿರಂತರ ಪ್ರಕ್ರಿಯೆ ಎಂದು ಹೇಳಿದರು.