ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Bus Accident: ಬಸ್ ನಿಲ್ದಾಣದಲ್ಲಿ ಕೆಕೆಆರ್‌ಟಿಸಿ ಬಸ್ ಹರಿದು ಮಹಿಳೆ ಸಾವು

ಸಿಂಧನೂರು ಬಸ್ ನಿಲ್ದಾಣದಲ್ಲಿ ಸೋಮವಾರ ಅಪಘಾತ ನಡೆದಿದೆ. ಕೆಕೆಆರ್‌ಟಿಸಿ ಬಸ್ ಚಾಲಕನ ಅಜಾಗರೂಕತೆಯಿಂದ ಮಹಿಳೆ ಸಾವನ್ನಪ್ಪಿದ್ದು, ಅಪಘಾತದ ದೃಶ್ಯ ಪ್ರಯಾಣಿಕರನ್ನ ಬೆಚ್ಚಿಬೀಳಿಸಿದೆ. ಘಟನೆ ಸಂಬಂಧ ಸಿಂಧನೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೊಡ್ಡ ಈರಮ್ಮ (38) ಮೃತ ದುರ್ದೈವಿ.

ಬಸ್ ನಿಲ್ದಾಣದಲ್ಲಿ ಕೆಕೆಆರ್‌ಟಿಸಿ ಬಸ್ ಹರಿದು ಮಹಿಳೆ ಸಾವು

ಬಸ್‌ ಅಪಘಾತ -

ಹರೀಶ್‌ ಕೇರ
ಹರೀಶ್‌ ಕೇರ Mar 17, 2026 11:35 AM

ರಾಯಚೂರು, ಮಾ.17: ಬಸ್ ನಿಲ್ದಾಣದಲ್ಲಿ ಕೆಕೆಆರ್‌ಟಿಸಿ (KKRTC) ಬಸ್ ಮೈಮೇಲೆ ಹರಿದು ಮಹಿಳೆ ಸಾವನ್ನಪ್ಪಿರುವ ಘಟನೆ ರಾಯಚೂರಿನ (Raichur) ಸಿಂಧನೂರು (Sindhanur) ಬಸ್ ನಿಲ್ದಾಣದ ಮುಖ್ಯದ್ವಾರದಲ್ಲಿ ನಡೆದಿದೆ. ಕೊಪ್ಪಳದ ಬೆವಿನಹಾಳ ಗ್ರಾಮದ ದೊಡ್ಡ ಈರಮ್ಮ (38) ಮೃತ ದುರ್ದೈವಿ.

ಬಸ್ ಚಾಲಕನ ಅಜಾಗರೂಕತೆಯಿಂದ ಮಹಿಳೆ ಸಾವನ್ನಪ್ಪಿದ್ದು, ಅಪಘಾತದ ದೃಶ್ಯ ಪ್ರಯಾಣಿಕರನ್ನ ಬೆಚ್ಚಿಬೀಳಿಸಿದೆ. ಸಿಂಧನೂರು ಬಸ್ ನಿಲ್ದಾಣದಲ್ಲಿ ಸೋಮವಾರ ಅಪಘಾತ ನಡೆದಿದೆ. ಘಟನೆ ಸಂಬಂಧ ಸಿಂಧನೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

36 ಕಳವು ಆರೋಪಿಗಳ ಸೆರೆ, 1.27 ಕೋಟಿ ರೂ. ಮೌಲ್ಯದ ವಸ್ತು ಜಪ್ತಿ

ವಿಜಯಪುರ: ಚಿನ್ನಾಭರಣ, ಬೆಳ್ಳಿ, 2 ಕಾರು, 17 ಬೈಕ್ ಜಪ್ತಿ ಸೇರಿದಂತೆ 1.27 ಕೋಟಿ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿ, 22 ಕೇಸ್‌ನ 36 ಆರೋಪಿಗಳನ್ನು ಪೊಲೀಸರು ಆರೆಸ್ಟ್ ಮಾಡಿದ್ದಾರೆ.

ವಿಜಯಪುರ ಜಿಲ್ಲಾ ಪೊಲೀಸರು (Vijayapura Police) ಭರ್ಜರಿ ಕಾರ್ಯಾಚರಣೆ ನಡೆಸಿ, ಮುದ್ದೇಬಿಹಾಳ, ಬಸವನ ಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ, ದರೋಡೆ ಪ್ರಕರಣಗಳನ್ನ ಬೇಧಿಸಿದ್ದಾರೆ. ಅಂತರ್ ಜಿಲ್ಲಾ, ಅಂತರ್ ರಾಜ್ಯ ಕಳ್ಳರನ್ನು ಬಂಧಿಸಿದ್ದು, ಮನೆ ದರೋಡೆ, ಬೈಕ್ ಕಳ್ಳತನ ಮಾಡ್ತಿದ್ದ ಗ್ಯಾಂಗ್ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದೆ.

ರಸಗುಲ್ಲ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು; ಮದುವೆ ಮನೆಯಲ್ಲಿ ಘೋರ ದುರಂತ

ಒಟ್ಟು 22 ಪ್ರಕರಣ ಬೇಧಿಸಿರುವ ಪೊಲೀಸರು, ಒಟ್ಟು 36 ಜನ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಈ ಪೈಕಿ ಪ್ರಕರಣದಲ್ಲಿ ಕಳುವಾಗಿದ್ದ ಚಿನ್ನ, ಬೆಳ್ಳಿ, 2 ಕಾರು ಹಾಗೂ 17 ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಮುದ್ದೇಬಿಹಾಳ ಮೂಲದ ಆರ್.ಟಿ.ಓ ಜಯರಾಮ್ ನಾಯಕ್ ಅವರ ಮನೆಯಲ್ಲಿ ಜ.21ರಂದು ಕಳ್ಳತನ ನಡೆದಿತ್ತು. ಈ ವೇಳೆ 250 ಗ್ರಾಂ ಚಿನ್ನಾಭರಣ, 3 ಕೆ.ಜಿ ಬೆಳ್ಳಿ, 4.30 ಲಕ್ಷ ರೂ. ನಗದು ಕಳ್ಳತನವಾಗಿತ್ತು. ಪ್ರಕರಣ ಬೆನ್ನಟ್ಟಿದ್ದ ಪೊಲೀಸರು, ಮೂವರು ಆರೋಪಿಗಳ ಬಂಧನ ಮಾಡಿದ್ದಾರೆ.

ರಾಯಚೂರು ಮೂಲದ ಗುರುರಾಜ್, ಗುರುಕುಮಾರ್, ಸೈಯ್ಯದ್ ಅಸ್ಲಾಮ್ ಬಂಧಿತ ಆರೋಪಗಳು. ಇನ್ನೋವಾ ಕಾರು ಸೇರಿ 51 ಲಕ್ಷ ರೂ. ಮೌಲ್ಯದ ಚಿನ್ನ, ಬೆಳ್ಳಿ ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಇದನ್ನೂ ಓದಿ: ಗಂಡನನ್ನು ಅರೆಸ್ಟ್‌ ಮಾಡಿ ಹೆಂಡತಿನ ಮಂಚಕ್ಕೆ ಕರಿತಿದ್ದ ಇನ್ಸ್‌ಪೆಕ್ಟರ್‌ – ನೊಂದ ಮಹಿಳೆಯಿಂದ ಸಿಎಂಗೆ ದೂರು