ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Ramanagara News: ಕೌಟುಂಬಿಕ ಕಲಹ; ಪತ್ನಿಯನ್ನು ಕತ್ತುಹಿಸುಕಿ ಕೊಂದು ಪತಿಯೂ ಆತ್ಮಹತ್ಯೆ!

ರಾಮನಗರ ತಾಲೂಕಿನ ಹಾಗಲಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಳೆದ ವಾರ ದಂಪತಿ ಗಲಾಟೆ ಮಾಡಿಕೊಂಡು ಮಹಿಳಾ ಠಾಣೆ ಮೆಟ್ಟಿಲೇರಿದ್ದರು. ಸೋಮವಾರ ಗಲಾಟೆ ವಿಕೋಪಕ್ಕೆ ತಿರುಗಿದ ವೇಳೆ ಪತ್ನಿಯನ್ನು ಕೊಂದು ಪತಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

ಕೌಟುಂಬಿಕ ಕಲಹ; ಪತ್ನಿಯನ್ನು ಕತ್ತುಹಿಸುಕಿ ಕೊಂದು ಪತಿಯೂ ಆತ್ಮಹತ್ಯೆ!

ಮೃತ ನವೀನ್ ಕುಮಾರ್, ವತ್ಸಲ ದಂಪತಿ. -

Prabhakara R
Prabhakara R Dec 15, 2025 8:14 PM

ರಾಮನಗರ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಂದು ಪತಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರ ತಾಲೂಕಿನ ಹಾಗಲಹಳ್ಳಿ ಗ್ರಾಮದಲ್ಲಿ ನಡೆದಿದೆ. ನವೀನ್ ಕುಮಾರ್ (35), ವತ್ಸಲ(30) ಮೃತ ದಂಪತಿ. ನವೀನ್ ಹಾಗೂ ವತ್ಸಲ ಕಳೆದ 8 ವರ್ಷಗಳ ಹಿಂದೆ ಮದುವೆಯಾಗಿದ್ದರು. ಈ ದಂಪತಿಗೆ 7 ವರ್ಷದ ಹೆಣ್ಣುಮಗು ಇದೆ. ಸಣ್ಣಪುಟ್ಟ ವಿಚಾರಕ್ಕೆ ಪತಿ, ಪತ್ನಿ ಜಗಳವಾಡುತ್ತಿದ್ದರು. ಕಳೆದ ವಾರ ದಂಪತಿ ಗಲಾಟೆ ಮಾಡಿಕೊಂಡು ಮಹಿಳಾ ಠಾಣೆ ಮೆಟ್ಟಿಲೇರಿದ್ದರು. ಇಂದು ಗಲಾಟೆ ವಿಕೋಪಕ್ಕೆ ತಿರುಗಿ ಪತ್ನಿಯನ್ನು ಕತ್ತುಹಿಸುಕಿ ಕೊಂದ ಬಳಿಕ ನವೀನ್‌ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾರ್ಟಿ ಮೇಲೆ ಪೊಲೀಸರ ದಾಳಿ; ಬಾಲ್ಕನಿಯಿಂದ ಜಿಗಿದು ಯುವತಿಗೆ ಗಂಭೀರ ಗಾಯ

ಬೆಂಗಳೂರು: ಯುವಕ- ಯುವತಿಯರು ಪಾರ್ಟಿ ಮಾಡುತ್ತಿದ್ದ ಹೋಟೆಲ್‌ಗೆ ಪೊಲೀಸರು ರೈಡ್‌ ಮಾಡಿ ಹಣ ಕೇಳಿದ್ದಕ್ಕಾಗಿ ಭಯಗೊಂಡ ಯುವತಿಯೊಬ್ಬಳು, ಹೋಟೆಲ್ ಬಾಲ್ಕನಿಯಿಂದ ಕೆಳಗೆ ಹಾರಿ ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಹೋಟೆಲ್ ಬಾಲ್ಕನಿಯಿಂದ ಜಿಗಿದ ಯುವತಿಯನ್ನು ಕುಂದಲಹಳ್ಳಿ ನಿವಾಸಿ ವೈಷ್ಣವಿ (21) ಎಂದು ಗುರುತಿಸಲಾಗಿದೆ. ಆಕೆಯ ತಲೆ, ಕೈ ಮತ್ತು ದೇಹದ ಹಲವು ಭಾಗಗಳಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ವೈಷ್ಣವಿ ಸದ್ಯ ಕುಂದಲಹಳ್ಳಿಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು–ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.

ಶನಿವಾರ ರಾತ್ರಿ ವೈಷ್ಣವಿ ಸ್ನೇಹಿತರೊಂದಿಗೆ ಎಚ್‌ಎಎಲ್ ಎಇಸಿಎಸ್ ಲೇಔಟ್‌ನಲ್ಲಿರುವ ಹೋಟೆಲ್‌ಗೆ ಪಾರ್ಟಿಗಾಗಿ ತೆರಳಿದ್ದಳು. ಎಂಟು ಜನ ಸ್ನೇಹಿತರು ಸೇರಿ ಮೂರು ರೂಮ್‌ಗಳನ್ನು ಬುಕ್ ಮಾಡಿಕೊಂಡು ಹಾಡು ಹಾಕಿಕೊಂಡು ಡ್ಯಾನ್ಸ್ ಮಾಡುತ್ತಿದ್ದ ವೇಳೆ, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಕೆಲವೇ ಸಮಯದಲ್ಲಿ ಹೊಯ್ಸಳ ಪೊಲೀಸರು ಹೋಟೆಲ್‌ಗೆ ಆಗಮಿಸಿದ್ದಾರೆ. ಈ ವೇಳೆ ಪೊಲೀಸರು ಬಂದ ವಿಚಾರ ತಿಳಿದ ವೈಷ್ಣವಿ ಭಯದಿಂದ ಬಾಲ್ಕನಿಗೆ ತೆರಳಿ, ಅಲ್ಲಿಂದ ಹಾರಿದ್ದಾಳೆ ಎಂದು ಹೇಳಲಾಗಿದೆ. ಕೆಳಗೆ ಬಿದ್ದ ವೇಳೆ ಕಬ್ಬಿಣದ ಗ್ರಿಲ್‌ಗೆ ತಾಗಿ ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ತರಗತಿಯಲ್ಲಿ ಕುಳಿತು ಪಾಠ ಕೇಳುತ್ತಿದ್ದಾಗಲೇ ಕುಸಿದು ಬಿದ್ದ ವಿದ್ಯಾರ್ಥಿನಿ ಸಾವು

ಈ ನಡುವೆ ಪಾರ್ಟಿ ನಡೆಸುತ್ತಿದ್ದ ಯುವಕರ ಬಳಿ ಪೊಲೀಸರು ಹಣ ಕೇಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ದೂರು ಬಂದಿದೆ ಎಂದು ಹೇಳಿ ಪಾರ್ಟಿ ವಿಡಿಯೋ ತೋರಿಸಿದ್ದ ಪೊಲೀಸರು, ಬಳಿಕ ಹಣ ಕೇಳಿದ್ದಾರೆ ಎಂದು ಯುವಕರು ಆರೋಪಿಸಿದ್ದಾರೆ. ಯುವಕರು ಫೋನ್‌ಪೇ ಮಾಡುತ್ತೇವೆಂದಾಗ ನಿರಾಕರಿಸಿದ ಪೊಲೀಸರು ನಗದು ತರಲು ಒತ್ತಾಯಿಸಿದ್ದರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಯುವಕನೊಬ್ಬ ಎಟಿಎಂಗೆ ಹೋಗಿ ಹಣ ತರುತ್ತೇನೆಂದು ಕೆಳಗೆ ಬಂದ ವೇಳೆ ಯುವತಿ ಹೋಟೆಲ್ ಬಾಲ್ಕನಿಯಿಂದ ಹಾರಿದ್ದಾಳೆ ಎನ್ನಲಾಗಿದೆ. ಘಟನೆ ಕುರಿತು ಹೆಚ್‌ಎಎಲ್ ಪೊಲೀಸ್ ಠಾಣೆಗೆ ದೂರು ದಾಖಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ಪ್ರಕರಣದ ಬಗ್ಗೆ ತನಿಖೆ ಕೈಗೊಂಡಿದ್ದಾರೆ.