ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Bidadi Township: ಕಣಿಮಿಣಿಕೆ ಬಳಿ ಪಾದಯಾತ್ರೆಗೆ ಅಡಿ ರೈತರು-ಪೊಲೀಸರ ನಡುವೆ ತಳ್ಳಾಟ: ಬಿಡದಿ ಟೌನ್‌ʼಶಿಪ್‌ ಹೋರಾಟ ಹೋರಾಟ ಸ್ಥಗಿತ

ಬಿಡದಿ ಟೌನ್‌ಶಿಪ್ ವಿರೋಧಿಸಿ ಬೈರಮಂಗಲದಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದವರೆಗೆ ಜೆಡಿಎಸ್ ಹಮ್ಮಿಕೊಂಡಿರುವ ಪಾದಯಾತ್ರೆಯನ್ನು ಬೆಂಗಳೂರು ದಕ್ಷಿಣ ಜಿಯ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ಕಣಿಮಿಣಿಕೆ ಟೋಲ್ ಬಳಿ ಪೊಲೀಸರು ತಡೆದರು. ಈ ವೇಳೆ, ಪಾದ ಯಾತ್ರೆ ನಿರತ ಕಾರ್ಯ ಕರ್ತರು, ರೈತರು ಹಾಗೂ ಪೊಲೀಸರ ನಡುವೆ ಪರಸ್ಪರ ತಳ್ಳಾಟ ನಡೆಯಿತು.

ರಾಮನಗರ: ಬಿಡದಿ ಟೌನ್‌ಶಿಪ್ ವಿರೋಧಿಸಿ ಬೈರಮಂಗಲದಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದವರೆಗೆ ಜೆಡಿಎಸ್ ಹಮ್ಮಿಕೊಂಡಿರುವ ಪಾದಯಾತ್ರೆಯನ್ನು ಬೆಂಗಳೂರು ದಕ್ಷಿಣ ಜಿಯ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ಕಣಿಮಿಣಿಕೆ ಟೋಲ್ ಬಳಿ ಪೊಲೀಸರು ತಡೆದರು. ಈ ವೇಳೆ, ಪಾದಯಾತ್ರೆ ನಿರತ ಕಾರ್ಯಕರ್ತರು, ರೈತರು ಹಾಗೂ ಪೊಲೀಸರ ನಡುವೆ ಪರಸ್ಪರ ತಳ್ಳಾಟ ನಡೆಯಿತು.

ಇದನ್ನೂ ಓದಿ: Bidadi Township: ಬಿಡದಿ ಟೌನ್‌ಶಿಪ್ ಕುರಿತ ಅಭಿಪ್ರಾಯಗಳ ಸಮಗ್ರ ಪರಿಶೀಲನೆಗೆ ನ್ಯಾ. ಗುಹನಾಥನ್ ನರೇಂದರ್ ನೇತೃತ್ವದ ಸಮಿತಿ ರಚನೆ

ಸರ್ವೀಸ್ ರಸ್ತೆಗೆ ಬ್ಯಾರಿಕೇಡ್ ಹಾಕಿದ್ದ ಪೊಲೀಸರು ಪಕ್ಷದ ಯುವ ಘಟಕದ ರಾಜ್ಯಾ ಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದ ಪಾದಯಾತ್ರೆಯನ್ನು ಅಡ್ಡಗಟ್ಟಿದರು. ಈ ವೇಳೆ ನಿಖಿಲ್ ಸೇರಿ ಪಕ್ಷದ ಮುಖಂಡರು ಪೊಲೀಸರು ವಾಗ್ವಾದ ನಡೆಸಿದರು. ಪೊಲೀಸರ ತಡೆ ಲೆಕ್ಕಿಸದೆ ಮುನ್ನುಗಿದರು. ‌

ಈ ವೇಳೆ ಸುದ್ದಿಗಾರರ ಜತೆ ಮಾತನಾಡಿದ ನಿಖಿಲ್, ರಾಜ್ಯ ಸರಕಾರ ಪೊಲೀಸರ ಮೂಲಕ ರೈತರನ್ನು ತಡೆಗಟ್ಟಿದೆ. ತನ್ನ ಜವಾ ಬ್ದಾರಿಯಿಂದ ನುಣುಚಿಕೊಳ್ಳಲು ನೋಡುತ್ತಿದೆ. ಆದರೆ, ನಾವು ಇದಕ್ಕೆ ಜಗ್ಗುವುದಿಲ್ಲ. ಕೊನೆಯವರೆಗೆ ರೈತರ ಜತೆ ನಿಲ್ಲುತ್ತೇವೆ ಎಂದು ಹರಿಹಾಯ್ದರು.

image

ರೈತರ ಹೊಟ್ಟೆ ಮೇಲೆ ಹೊಡೆದು ಬಿಡದಿ ಟೌನ್‌ಶಿಪ್ ಮಾಡುವ ಹಠ ಏಕೆ? ಜಿಬಿಐಟಿ ಯೋಜನೆ ಹೆಸರಲ್ಲಿ ಯಾರಿಗೆ ಕಪ್ಪ ಕೊಡಲು ಹೊರಟಿದ್ದೀರಿ? ನಾನು ಬದುಕಿರುವ ತನಕ ರೈತಪರ ಹೋರಾಟಕ್ಕೆ ಬೆಂಬಲವಾಗಿ ನಿಲ್ಲುತ್ತೇನೆ.

-ಎಚ್.ಡಿ.ದೇವೇಗೌಡ, ಮಾಜಿ ಪ್ರಧಾನಿ