ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Pahalgam Attack: ಪಹಲ್ಗಾಂ ದಾಳಿ ಸಂತ್ರಸ್ತ 26 ಕುಟುಂಬಗಳಿಗೆ ಶೃಂಗೇರಿ ಮಠದಿಂದ 2 ಲಕ್ಷ ಪರಿಹಾರ

ಉಗ್ರರ ದಾಳಿಗೆ (Pahalgam attack) ತಮ್ಮ ಮನೆಯವರನ್ನು ಕಳೆದುಕೊಂಡ ನೋವಿನಲ್ಲಿ 26 ಕುಟುಂಬಸ್ಥರು ಇದ್ದಾರೆ. ಹಿಂದೂಗಳ ಜೊತೆ ಹಿಂದೂಗಳೇ ನಿಲ್ಲಬೇಕು. ಹಾಗಾಗಿ ಶೃಂಗೇರಿ ಶಾರದಾ ಪೀಠದ ವತಿಯಿಂದ ಪ್ರತಿ ಕುಟುಂಬಕ್ಕೆ 2 ಲಕ್ಷ ರೂ. ಹಣವನ್ನು ಪ್ರಸಾದದ ರೂಪದಲ್ಲಿ ನೀಡುತ್ತಿದ್ದೇವೆ ಎಂದಿದ್ದಾರೆ ಶ್ರೀಗಳು.

ಪಹಲ್ಗಾಂ ದಾಳಿ ಸಂತ್ರಸ್ತ 26 ಕುಟುಂಬಗಳಿಗೆ ಶೃಂಗೇರಿ ಮಠದಿಂದ 2 ಲಕ್ಷ ಪರಿಹಾರ

ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ

ಹರೀಶ್‌ ಕೇರ ಹರೀಶ್‌ ಕೇರ May 2, 2025 9:11 AM

ಚಿಕ್ಕಮಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಂ ಬಳಿ (Pahalgam Attack) ನಡೆದ ಭಯೋತ್ಪಾದಕ ದಾಳಿಯನ್ನ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಶಾರದಾ ಮಠ (Sringeri Sharada Mutt) ಕಿರಿಯ ಶ್ರೀ ವಿಧುಶೇಖರ ಭಾರತೀ ಶ್ರೀಗಳು (Sri Vidhushekhara Bharati Swamiji) ಖಂಡಿಸಿದ್ದು, ಮೃತಪಟ್ಟಿರುವ 26 ಕುಟುಂಬಗಳಿಗೆ ಶೃಂಗೇರಿ ಮಠದಿಂದ ತಲಾ 2 ಲಕ್ಷ ರೂ. ಪರಿಹಾರವನ್ನು ಪ್ರಸಾದ ರೂಪದಲ್ಲಿ ನೀಡಲಾಗುವುದು ಎಂದು ಪ್ರಕಟಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಂತ್ರಸ್ತ ಹಿಂದೂಗಳ ಜೊತೆಗೆ ಹಿಂದೂಗಳೇ ನಿಲ್ಲಬೇಕಾಗಿದೆ ಎಂದಿದ್ದಾರೆ.

ಅಕ್ಷಯ ತೃತೀಯದ ಸಂದರ್ಭದಲ್ಲಿ ಮಾತನಾಡಿದ ಅವರು, ಉಗ್ರರ ದಾಳಿಗೆ ತಮ್ಮ ಮನೆಯವರನ್ನು ಕಳೆದುಕೊಂಡ ನೋವಿನಲ್ಲಿ 26 ಕುಟುಂಬಸ್ಥರು ಇದ್ದಾರೆ. ಹಿಂದೂಗಳ ಜೊತೆ ಹಿಂದೂಗಳೇ ನಿಲ್ಲಬೇಕು. ಹಾಗಾಗಿ ಶೃಂಗೇರಿ ಶಾರದಾ ಪೀಠದ ವತಿಯಿಂದ ಪ್ರತಿ ಕುಟುಂಬಕ್ಕೆ 2 ಲಕ್ಷ ರೂ. ಹಣವನ್ನು ಪ್ರಸಾದದ ರೂಪದಲ್ಲಿ ನೀಡುತ್ತಿದ್ದೇವೆ ಎಂದಿದ್ದಾರೆ. ದುಃಖದಲ್ಲಿರುವ ಕುಟುಂಬದಲ್ಲಿ ಸಂತೋಷ, ಶ್ರೇಯಸ್ಸು ವೃದ್ಧಿಸಲಿ ಎಂದು ಶ್ರೀಗಳು ತಿಳಿಸಿದ್ದಾರೆ.

ಈಗಾಗಲೇ ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ಕರ್ನಾಟಕದ ನಾಗರೀಕರ ಕುಟುಂಬಗಳಿಗೆ ತಲಾ 10 ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಘೋಷಣೆ ಮಾಡಿದ್ದಾರೆ. ಮಠದ ವತಿಯಿಂದಲೂ 26 ಕುಟುಂಬಗಳಿಗೆ ತಲಾ 2 ಲಕ್ಷ ರೂ.ಗಳನ್ನು ಪ್ರಸಾದದ ರೂಪದಲ್ಲಿ ನೀಡಲಾಗುವುದು. ಮಠದ ಆಡಳಿತಾಧಿಕಾರಿ ಅದನ್ನ ನೋಡಿಕೊಂಡು ಆ ಕುಟುಂಬಗಳಿಗೆ ತಲುಪಿಸುತ್ತಾರೆ ಎಂದು ತಿಳಿಸಿದರು.

ಮಂತ್ರಾಲಯ ಶ್ರೀಗಳಿಂದಲೂ ಪರಿಹಾರ ಘೋಷಣೆ

ಪಹಲ್ಗಾಂ ದಾಳಿಯಲ್ಲಿ ಮೃತಪಟ್ಟ ಮೂವರು ಕನ್ನಡಿಗರ ಕುಟುಂಬಗಳಿಗೆ ತಲಾ 1 ಲಕ್ಷ ರೂ. ಪರಿಹಾರವನ್ನು ಮಠದ ವತಿಯಿಂದ ನೀಡಲಾಗುವುದು ಎಂದು ಮಂತ್ರಾಲಯ ಮಠದ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದರು ತಿಳಿಸಿದ್ದಾರೆ.

ಮೃತರ ಕುಟುಂಬದ ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಯನ್ನು ಮಂತ್ರಾಲಯ ಮಠ ವಹಿಸಿಕೊಳ್ಳಲಿದೆ. ಉಗ್ರರ ದಾಳಿಯಲ್ಲಿ ಮೃತಪಟ್ಟವರೆಲ್ಲಾ ನಮ್ಮವರೇ. ನಮ್ಮ ಕುಟುಂಬದಲ್ಲಿ ಒಬ್ಬರನ್ನು ಕಳೆದುಕೊಂಡ ನೋವು ನಮಗಿದೆ. ಮೃತರು ಹಾಗೂ ಗಾಯಾಳುಗಳ ಜೊತೆಗೆ ನಾವಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ: Sonu Nigam: ಕನ್ನಡ ಹಾಡು ಹೇಳಿ ಎಂದದ್ದಕ್ಕೆ ಪಹಲ್ಗಾಂ ದಾಳಿ ಲಿಂಕ್‌ ಮಾಡಿದ ಸೋನು ನಿಗಮ್!‌