ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Parappana Agrahara: ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ಕೈಗೆ ಮೊಬೈಲ್‌; ಸೈಕೋಲಾಜಿಸ್ಟ್‌ಗಳಿಬ್ಬರು ಅರೆಸ್ಟ್‌

ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಮೊಬೈಲ್‌ ಪೂರೈಕೆಯಾಗಿರು ಸುದ್ದಿಯ ಹರಿದಾಡುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಹೊರಗುತ್ತಿಗೆ ಮನಶಾಸ್ತ್ರಜ್ಞರನ್ನು ಪರಪ್ಪನ ಅಗ್ರಹಾರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಾರತ್ತಹಳ್ಳಿಯ ನವ್ಯ ಶ್ರೀ ಹಾಗೂ ಸೃಜನ್ ಎಂದು ಗುರುತಿಸಲಾಗಿದ್ದು, ಆರೋಪಿಗಳಿಂದ ಒಂದು ಹೊಸ ಮೊಬೈಲ್ ಜಪ್ತಿ ಮಾಡಲಾಗಿದೆ.

ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ಕೈಗೆ ಮೊಬೈಲ್‌; ಇಬ್ಬರು ಅರೆಸ್ಟ್‌

Profile Rakshita Karkera Jun 15, 2025 8:22 AM

ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ(Parappana Agrahara) ಸದಾ ಒಂದಿಲ್ಲೊಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಕೈದಿಗಳಿಗೆ ಮೊಬೈಲ್‌ ಪೂರೈಕೆಯಾಗಿರು ಸುದ್ದಿಯ ಹರಿದಾಡುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಹೊರಗುತ್ತಿಗೆ ಮನಶಾಸ್ತ್ರಜ್ಞರನ್ನು ಪರಪ್ಪನ ಅಗ್ರಹಾರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಾರತ್ತಹಳ್ಳಿಯ ನವ್ಯ ಶ್ರೀ ಹಾಗೂ ಸೃಜನ್ ಎಂದು ಗುರುತಿಸಲಾಗಿದ್ದು, ಆರೋಪಿಗಳಿಂದ ಒಂದು ಹೊಸ ಮೊಬೈಲ್ ಜಪ್ತಿ ಮಾಡಲಾಗಿದೆ.

ಪ್ರಕರಣ ಬೆಳಕಿಗೆ ಬಂದಿದ್ದೇಗೆ?

ಜೈಲಿನ ಮುಖ್ಯ ಪ್ರವೇಶ ದ್ವಾರದಲ್ಲಿ ಶುಕ್ರವಾರ ತಪಾಸಣೆ ವೇಳೆ ನವ್ಯಶ್ರೀ ಅ‍ವರು ಒಳ ಉಡುಪಿನಲ್ಲಿಟ್ಟಿದ್ದ ಹೊಸ ಮೊಬೈಲ್ ಪತ್ತೆಯಾಗಿದೆ. ಕೂಡಲೇ ಆಕೆಯನ್ನು ವಶಕ್ಕೆ ಪಡೆದು ಪೊಲೀಸರಿಗೆ ಕಾರಾಗೃಹದ ಭದ್ರತಾ ಸಿಬ್ಬಂದಿ ಒಪ್ಪಿಸಿದ್ದಾರೆ. ನಂತರ ನವ್ಯಶ್ರೀ ಅವರನ್ನು ವಿಚಾರಣೆಗೊಳಪಡಿಸಿದಾಗ ಮೊಬೈಲ್ ಸಾಗಾಣಿಕೆ ಕೃತ್ಯ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: Actor Madenuru Manu: ಪರಪ್ಪನ ಅಗ್ರಹಾರ ಜೈಲಿನಿಂದ ನಟ ಮಡೆನೂರು ಮನು ರಿಲೀಸ್‌; ಆಡಿಯೋ ಬಗ್ಗೆ ಹೇಳಿದ್ದೇನು?

ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲು ಅಂದ್ರೆ ಉಳ್ಳವರಿಗೆ ಸ್ವರ್ಗ ಎನ್ನುವ ಮಾತಿದೆ. ಈ ಹಿಂದೆ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್‌ ಅವರಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಅದಾದ ಬಳಿಕ ಬಹಳಷ್ಟು ಬಾರಿ ಈ ಸ್ಪೇಷಲ್ ಟ್ರೀಟ್ಮೆಂಟ್ ಬಗ್ಗೆ ಸದ್ದು ಮಾಡಿತ್ತು. ಇತ್ತೀಚೆಗೆ ನಟ ದರ್ಶನ್‌ಗೆ ವಿಶೇಷ ಸೌಲಭ್ಯ ನೀಡಿಲಾಗಿತ್ತು ಎನ್ನುವ ಕುರಿತು ಫೋಟೋ ಕೂಡ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಅಕ್ರಮ ಚಟುವಟಿಕೆಗಳಿಗೆ ಶಾಶ್ವತವಾಗಿ ಕಡಿವಾಣ ಹಾಕುವ ನಿಟ್ಟಿನಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹವನ್ನು ಮೂರು ಕಾರಾಗೃಹಗಳಾಗಿ ವಿಭಜಿಸಲು ರಾಜ್ಯ ಸರ್ಕಾರ ಮುಂದಾಗಿದೆ.