ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Teachers Transfer: ಶಿಕ್ಷಕರ ವರ್ಗಾವಣೆ; ಶಿಕ್ಷಣ ಇಲಾಖೆಯಿಂದ ಅಧಿಸೂಚನೆ ಪ್ರಕಟ

ಶಾಲಾ ಶಿಕ್ಷಣ ಇಲಾಖೆ 2024-25ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ/ತತ್ಸಮಾನ ವೃಂದದ ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಹಾಗೂ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರು/ತತ್ಸಮಾನ ವೃಂದ, ದೃಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರು/ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಗಳನ್ನು ಹಮ್ಮಿಕೊಳ್ಳುವ ಬಗ್ಗೆ ಅಧಿಸೂಚನೆ ಹೊರಡಿಸಿದೆ.

ಶಿಕ್ಷಕರ ವರ್ಗಾವಣೆಗೆ ಶಿಕ್ಷಣ ಇಲಾಖೆಯಿಂದ ಅಧಿಸೂಚನೆ

ಸಾಂದರ್ಭಿಕ ಚಿತ್ರ.

Profile Ramesh B May 29, 2025 11:02 PM

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ 2024-25ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ/ತತ್ಸಮಾನ ವೃಂದದ ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಹಾಗೂ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರು/ತತ್ಸಮಾನ ವೃಂದ, ದೃಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರು/ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಗಳನ್ನು ಹಮ್ಮಿಕೊಳ್ಳುವ ಬಗ್ಗೆ ಅಧಿಸೂಚನೆ ಹೊರಡಿಸಿದೆ (Teachers Transfer).

ಮೊದಲ ಹಂತದಲ್ಲಿ ಹೆಚ್ಚುವರಿ ಶಿಕ್ಷಕರ ಮರು ಹೊಂದಾಣಿಕೆ ನಡೆಯಲಿದ್ದು, ನಂತರ ಶಿಕ್ಷಕರು, ಮುಖ್ಯ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು, ವಿಶೇಷ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ. ಶೈಕ್ಷಣಿಕ ತಾಲೂಕಿನ ಒಳಗೆ ವಲಯ ವರ್ಗಾವಣೆ ಶೇ. 4, ಶೈಕ್ಷಣಿಕ ಜಿಲ್ಲೆಯ ಒಳಗೆ ಕೋರಿಕೆ ವರ್ಗಾವಣೆ ಶೇ. 7, ವಿಭಾಗದ ಒಳಗೆ ಕೋರಿಕೆ ವರ್ಗಾವಣೆ ಶೇ. 2 ಹಾಗೂ ವಿಭಾಗದ ಹೊರಗೆ ಕೋರಿಕೆ ವರ್ಗಾವಣೆ ಶೇ. 2 ಎಂದು ನಿಗದಿ ಪಡಿಸಲಾಗಿದೆ.

ಮೇ 29ರಿಂದಲೇ ವರ್ಗಾವಣೆ ಪ್ರಕ್ರಿಯೆಗಳು ಆರಂಭವಾಗಲಿದ್ದು, ಒಂದು ಸ್ಥಳದಲ್ಲಿ ಕನಿಷ್ಠ 3 ವರ್ಷ ಪೂರೈಸಿದವರು ವರ್ಗಾವಣೆ ಕೋರಿ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಜೂ. 21ರವರೆಗೆ ಘಟಕದ ಒಳಗೆ ಮತ್ತು ಹೊರಗೆ ಕೋರಿಕೆ ಮತ್ತು ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಬಹುದು. ಜು. 2ರಿಂದ 4ರವರೆಗೆ ಹೆಚ್ಚುವರಿ ಶಿಕ್ಷಕರಿಗೆ ಕೌನ್ಸೆಲಿಂಗ್‌ ನಡೆಯಲಿದೆ. ಜಿಲ್ಲಾ ಹಂತದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಜು. 18ರಿಂದ 21ರವರೆಗೆ, ಪ್ರೌಢಶಾಲಾ ಶಿಕ್ಷಕರ ಕೌನ್ಸೆಲಿಂಗ್‌ ಜುಲೈ 22ರಿಂದ 23ರವರೆಗೆ, ಪರಸ್ಪರ ವರ್ಗಾವಣೆಯ ಕೌನ್ಸೆಲಿಂಗ್ ಜುಲೈ 24ರಂದು, ವಿಭಾಗೀಯ ವರ್ಗಾವಣೆ ಕೌನ್ಸಲಿಂಗ್‌ ಜುಲೈ 29ರಿಂದ ಆಗಸ್ಟ್ 7ರವರೆಗೆ, ಅಂತರ್ ವಿಭಾಗೀಯ ವರ್ಗಾವಣೆ ಕೌನ್ಸಲಿಂಗ್ ಆ.11ರಿಂದ 22ರವರೆಗೆ ನಡೆಯಲಿದೆ ಎಂದು ಅಧಿಸೂಚನೆ ತಿಳಿಸಿದೆ.‌

ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ

ಈ ಸುದ್ದಿಯನ್ನೂ ಓದಿ: IPS Transfer: ಕಗ್ಗೊಲೆಗಳ ಹಿನ್ನೆಲೆ; ದಕ್ಷಿಣ ಕನ್ನಡ, ಉಡುಪಿಯ ಐಪಿಎಸ್‌ಗಳ ಬದಲಾವಣೆ, ಸುಧೀರ್‌ ಕುಮಾರ್‌ ರೆಡ್ಡಿ ಮಂಗಳೂರು ಡಿಜಿ, ಆಯುಕ್ತ

ವರ್ಗಾವಣೆ ಅರ್ಜಿ ಸಲ್ಲಿಸಲು ಅಗತ್ಯವಾದ ಅರ್ಹತೆ

  • ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಂಜೂರಾದ ಹುದ್ದೆಗಳು, ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಹಾಗೂ ಖಾಲಿ ಹುದ್ದೆಗಳ ಮಾಹಿತಿಯನ್ನು ಪರಿಶೀಲಿಸಿ ಸಂಬಂಧಿಸಿದ ಅಧಿಕಾರಿಗಳು ಖಚಿತಪಡಿಸಿದ ಖಾಲಿ ಹುದ್ದೆಗಳನ್ನು ಮಾತ್ರ ವರ್ಗಾವಣೆ ಪ್ರಕ್ರಿಯೆಗೆ ಪರಿಗಣಿಸಲಾಗುತ್ತದೆ.
  • ಸಾಮಾನ್ಯ ಕೋರಿಕೆ/ಪರಸ್ಪರ ವರ್ಗಾವಣಾ ಉದ್ದೇಶಕ್ಕಾಗಿ ಶಿಕ್ಷಕರ ಸೇವಾ ಅಂಕಗಳ ಲೆಕ್ಕಾಚಾರವನ್ನು ನಿಯಮ-4ರಲ್ಲಿ ನಿರ್ದಿಷ್ಟಪಡಿಸಿದಂತೆ ಪರಿಗಣಿಸಲಾಗುತ್ತದೆ. ಸೇವಾ ಅಂಕಗಳನ್ನು 2024ರ ಡಿ. 31ರಲ್ಲಿದ್ದಂತೆ ಗಣನೆಗೆ ತೆಗೆದುಕೊಳ್ಳಲಾಗುತ್ತದೆ.
  • ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಸಂಬಂಧಪಟ್ಟಂತೆ ಜಿಲ್ಲೆಯೊಳಗೆ ಮಂಜೂರಾದ ಹುದ್ದೆಗಳ ಮತ್ತು ಖಾಲಿ ಹುದ್ದೆಗಳ ಗುರುತಿಸುವಿಕೆ ಹಾಗೂ ಹೆಚ್ಚುವರಿ ಶಿಕ್ಷಕರ ಸಮರ್ಪಕ ಮರುಹೊಂದಾಣಿಕೆ ಪ್ರಕ್ರಿಯೆಯ ಬಗ್ಗೆ ಈ ಅಧಿಸೂಚನೆಯ ವೇಳಾಪಟ್ಟಿಯಲ್ಲಿ ಅಳವಡಿಸಿದೆ ಹಾಗೂ ಹೆಚ್ಚುವರಿ ಮರುಹೊಂದಾಣಿಕೆ ಕುರಿತಂತೆ ಸವಿಸ್ತಾರವಾದ ಮಾರ್ಗಸೂಚಿ ಅಂಶಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುತ್ತದೆ.
  • ವರ್ಗಾವಣೆಗೆ ಅರ್ಜಿ ಸಲ್ಲಿಸುವುದು, ಅರ್ಜಿಗಳ,ಆದ್ಯತೆಗಳ ಪರಿಶೀಲನೆ, ಅರ್ಜಿಗಳ/ಆದ್ಯತೆಗಳ ಅನುಮೋದನೆ/ತಿರಸ್ಕಾರ, ಕರಡು ಅರ್ಹ ಅನರ್ಹ(ಕಾರಣ ಸಹಿತ) ಪಟ್ಟಿ ಪ್ರಕಟಣೆ, ಆಕ್ಷೇಪಣೆಗಳ ಸಲ್ಲಿಕೆ, ಅಂತಿಮ ಆದ್ಯತಾ ಪಟ್ಟಿ ಪ್ರಕಟಣೆ, ಆದ್ಯತಾ ಪಟ್ಟಿ ಅನುಸಾರ ವರ್ಗಾವಣಾ ಕೌನ್ಸೆಲಿಂಗ್‌ ಪ್ರಕ್ರಿಯೆಗಳು ಇಲಾಖೆಯ ನಿಗದಿತ ತಂತ್ರಾಂಶದಲ್ಲಿಯೇ ನಿರ್ವಹಿಸುವುದು ಕಡ್ಡಾಯ.