KSRTC staff strike: ನಾಳಿನ ಸಾರಿಗೆ ಮುಷ್ಕರ ಮುಂದೂಡಲು ಹೈಕೋರ್ಟ್ ಸೂಚನೆ
KSRTC staff strike: ಮುಷ್ಕರವನ್ನು ಒಂದು ದಿನದ ಮಟ್ಟಿಗೆ ಮುಂದೂಡಲು ನ್ಯಾ.ಕೆ.ಎಸ್.ಮುದಗಲ್, ಎಂ.ಜಿ.ಎಸ್ ಕಮಲ್ ಅವರಿದ್ದ ವಿಭಾಗಗೀಯ ಪೀಠ ಸೂಚಿಸಿದೆ. ಮುಷ್ಕರಕ್ಕೆ ಅವಕಾಶ ನೀಡಬಾರದು. ಇದರಿಂದ ಜನಜೀವನ ಅಸ್ತವ್ಯಸ್ತವಾಗಲಿದೆ ಎಂದು ಬೆಂಗಳೂರಿನ ಜೆ. ಸುನೀಲ್ ಹಾಗೂ ಮತ್ತಿತರರು ಪಿಐಎಲ್ ಸಲ್ಲಿಕೆ ಮಾಡಿದ್ದರು.


ಬೆಂಗಳೂರು: ಸಾರಿಗೆ ನೌಕರರ ಒಕ್ಕೂಟದ ಪ್ರತಿನಿಧಿಗಳ ಜತೆ ಸಿಎಂ ಸಂಧಾನ ವಿಫಲವಾದ ಹಿನ್ನೆಲೆ ಆ.5ರಿಂದ ಸಾರಿಗೆ ಮುಷ್ಕರಕ್ಕೆ ಕರೆ ನೀಡಲಾಗಿತ್ತು. ಆದರೆ, ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದ್ದು, ಮುಷ್ಕರವನ್ನು ಒಂದು ದಿನದ ಮಟ್ಟಿಗೆ ಮುಂದೂಡಲು ನಿರ್ದೇಶನ ನೀಡಿದೆ.
ಮುಷ್ಕರವನ್ನು ಒಂದು ದಿನದ ಮಟ್ಟಿಗೆ ಮುಂದೂಡಲು ನ್ಯಾ.ಕೆ.ಎಸ್.ಮುದಗಲ್, ಎಂ.ಜಿ.ಎಸ್ ಕಮಲ್ ಅವರಿದ್ದ ವಿಭಾಗಗೀಯ ಪೀಠ ಸೂಚಿಸಿದೆ. ಮುಷ್ಕರಕ್ಕೆ ಅವಕಾಶ ನೀಡಬಾರದು. ಇದರಿಂದ ಜನಜೀವನ ಅಸ್ತವ್ಯಸ್ತವಾಗಲಿದೆ ಎಂದು ಬೆಂಗಳೂರಿನ ಜೆ. ಸುನೀಲ್ ಹಾಗೂ ಮತ್ತಿತರರು ಪಿಐಎಲ್ ಸಲ್ಲಿಕೆ ಮಾಡಿದ್ದರು. ಹೀಗಾಗಿ ಒಂದು ದಿನ ಮುಷ್ಕರ ಮುಂದೂಡಲು ಸೂಚಿಸಿ, ಅರ್ಜಿ ವಿಚಾರಣೆಯನ್ನು ವಿಭಾಗಗೀಯ ಪೀಠ ಮುಂದೂಡಿದೆ. ಬುಧವಾರ ಮುಖ್ಯ ನ್ಯಾಯಮೂರ್ತಿಗಳ ಪೀಠದಲ್ಲಿ ವಿಚಾರಣೆ ನಡೆಯಲಿದೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 5ರಿಂದ ನಾಲ್ಕು ಸಾರಿಗೆ ನಿಗಮಗಳ ನೌಕರರು (KSRTC, BMTC Employees) ಅನಿರ್ದಿಷ್ಟಾವಧಿ ಮುಷ್ಕರ (KSRTC Strike) ಮಾಡಲು ನೌಕರರು ನಿರ್ಧರಿಸಿದ್ದರು.
ಸಾರಿಗೆ ನೌಕರರ ಬೇಡಿಕೆಗಳೇನು?
- 38 ತಿಂಗಳ ವೇತನ ಬಾಕಿ ಹಣ ನೀಡಬೇಕು
- ಸರ್ಕಾರಿ ನೌಕರರಿಗೆ ನೀಡುವ ವೇತನಕ್ಕೆ ಸರಿಸಮಾನ ವೇತನ ನೀಡಬೇಕು
- ಖಾಸಗೀಕರಣ, ಭ್ರಷ್ಟಾಚಾರ, ಕಾರ್ಮಿಕರ ಕಿರುಕುಳ ನಿಲ್ಲಬೇಕು
- ನಗದು ರಹಿತ ವೈದ್ಯಕೀಯ ಸೌಲಭ್ಯ
- ನಮ್ಮ ಹಕ್ಕಿನ ರಜೆ
- 1-1-2024 ರಿಂದ ವೇತನ ಜಾರಿಗೊಳಿಸುವುದು
- ಉತ್ತಮ ಕ್ಯಾಂಟೀನ್ ವ್ಯವಸ್ಥೆ
- ಈ ಹಿಂದೆ 2020 ಮತ್ತು 2021 ರ ಸಾರಿಗೆ ಮುಷ್ಕರ ಸಂದರ್ಭದಲ್ಲಿ ನೌಕರರ ಮೇಲೆ ಹಾಕಲಾಗಿರುವ ಎಲ್ಲಾ ಮೊಕದ್ದಮೆಗಳನ್ನು ಹಿಂತೆಗೆದುಕೊಳ್ಳಬೇಕು
- ಸಾರಿಗೆ ನಿಗಮದ ವಿದ್ಯುತ್ ಬಸ್ಗಳಲ್ಲಿ ಸಂಸ್ಥೆಯ ಚಾಲಕರನ್ನೇ ಚಾಲನಾ ಕೆಲಸಕ್ಕೆ ನಿಯೋಜಿಸಬೇಕು
- ಇ-ಬಸ್ಗಳ ನಿರ್ವಹಣೆಯನ್ನು ಖಾಸಗಿ ಗುತ್ತಿಗೆದಾರರಿಗೆ ನೀಡುವ ಪದ್ಧತಿ ಕೈಬಿಡಬೇಕು
ಈ ಸುದ್ದಿಯನ್ನೂ ಓದಿ | ಪ್ಯಾಸೆಂಜರ್ ವೆಹಿಕಲ್ ಎಕ್ಸ್ಪೋ 2.0 ರಲ್ಲಿ ಅತ್ಯಾಧುನಿಕ ಸಾರಿಗೆ ಉತ್ಪನ್ನಗಳ ಪ್ರದರ್ಶನ