Karnataka Rains: ಇಂದು, ನಾಳೆ ರಾಜ್ಯದಲ್ಲಿ ಗುಡುಗು ಸಹಿತ ಭಾರಿ ಸಾಧ್ಯತೆ; ಯೆಲ್ಲೋ ಅಲರ್ಟ್
Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


ಬೆಂಗಳೂರು: ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಭಾನುವಾರ ಮಳೆಯಾಗಿದೆ (Karnataka Rains). ಅದೇ ರೀತಿ ಮುಂದಿನ 6 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಹೀಗಾಗಿ ಇಂದು ಮತ್ತು ನಾಳೆ (ಜೂನ್ 9 ಮತ್ತು 10)ರಂದು ಜೂನ್ 15ರವರೆಗೆ ಹವಾಮಾನ ಇಲಾಖೆಯು ರಾಜ್ಯಕ್ಕೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30°C ಮತ್ತು 21°C ಇರುವ ಸಾಧ್ಯತೆ ಇದೆ.
ಜೂನ್ 9 ಮತ್ತು 10ರಂದು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಾಗೆಯೇ ಜೂನ್ 11ರಂದು ಕರಾವಳಿ ಜಿಲ್ಲೆಗಳು, ಹಾಸನ, ಚಿಕ್ಕಗಳೂರು, ಶಿವಮೊಗ್ಗ, ದಾವಣಗೆರೆ, ಹಾವೇರಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಹಾಗೂ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
#ಕರ್ನಾಟಕ ರಾಜ್ಯದ ಮುಂದಿನ 5 ದಿನಗಳ #ಮಳೆ #ಮುನ್ಸೂಚನೆ ನಕ್ಷೆಗಳು, ಜಿಲ್ಲಾವಾರು ಎಚ್ಚರಿಕೆಗಳೊಂದಿಗೆ. ಮೂಲ: ಐಎಂಡಿ ಬೆಂಗಳೂರು#KSNDMC #ಮುಂಗಾರುಮಳೆ #ಸುರಕ್ಷಿತವಾಗಿರಿ #ಎಚ್ಚರಿಕೆವಹಿಸಿ pic.twitter.com/Lpdf8dOEV6
— Karnataka State Natural Disaster Monitoring Centre (@KarnatakaSNDMC) June 9, 2025
ಇನ್ನು ಜೂನ್ 12ರಂದು ಕರಾವಳಿ ಜಿಲ್ಲೆಗಳು, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಿದ್ದು, ಉಳಿದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಹೀಗಾಗಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಂಭವ ಇದೆ.
ಜೂನ್ 13ರಂದು ಕರಾವಳಿ ಜಿಲ್ಲೆಗಳು, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ ಸೇರಿ 10 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಉಳಿದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇದರಿಂದ ಈ ಭಾಗಗಳಲ್ಲಿ ವರುಣ ಅಬ್ಬರಿಸಲಿದ್ದಾನೆ.
ಈ ಸುದ್ದಿಯನ್ನೂ ಓದಿ | Health Tips: ತರಹೇವಾರಿ ಒಣ ದ್ರಾಕ್ಷಿಯಲ್ಲಿ ಯಾವುದು ಒಳ್ಳೆಯದು ಗೊತ್ತಿದೆಯೇ?