#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

ಮಾದಕ ಅಂಶವಿರುವ ಮಾತ್ರೆ ಮಾರಾಟ: 7 ಆರೋಪಿಗಳ ಬಂಧನ

ತುಮಕೂರು ನಗರದಲ್ಲಿ ಮಾದಕ ವಸ್ತುಗಳನ್ನಾಗಿ ಟೈಡಾಲ್ ಮಾತ್ರೆಗಳನ್ನು ಆಕ್ರಮವಾಗಿ ಅಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದ 7 ಆರೋಪಿಗಳನ್ನು ಹೊಸ ಬಡಾವಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಬಳಿ ಇದ್ದ 10,500 ರೂ. ಬೆಲೆಯ 300 ಮಾತ್ರೆಗಳನ್ನು ಮತ್ತು ಸಿರಿಂಜ್‌, ಮೊಬೈಲ್ ಮತ್ತು ಬೈಕನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅತಿ ಚಿಕ್ಕ ವಯಸ್ಸಿನ ಮಕ್ಕಳು ಮತ್ತು ವಿದ್ಯಾರ್ಥಿಗಳ ಶರೀರ ಹಾಗೂ ಮೆದುಳಿನ ಮೇಲೆ ಪರಿಣಾಮ ಬೀರುವ ಮಾದಕ ಮಾತ್ರೆಗಳನ್ನು ಮಾರಾಟ ಮಾಡಿರುವ ಕಾರಣಕ್ಕೆ ಬಂಧಿತರ ವಿರುದ್ಧ 13/2025 ಕಲಂ 123, 278, 280 ರೆ.ವಿ. 3 (5) ಬಿ.ಎನ್.ಎಸ್. ಆ್ಯಕ್ಟ್ ಅಡಿ ಪ್ರಕರಣ ದಾಖಲಾಗಿದೆ.

ಮಾದಕ ಅಂಶವಿರುವ ಮಾತ್ರೆ ಮಾರಾಟ: 7 ಆರೋಪಿಗಳ ಬಂಧನ

ಸಾಂದರ್ಭಿಕ ಚಿತ್ರ.

Profile Ramesh B Jan 31, 2025 11:22 AM

ತುಮಕೂರು: ನಗರದಲ್ಲಿ ಮಾದಕ ವಸ್ತುಗಳನ್ನಾಗಿ ಟೈಡಾಲ್ ಮಾತ್ರೆಗಳನ್ನು ಆಕ್ರಮವಾಗಿ ಅಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದ 7 ಆರೋಪಿಗಳನ್ನು ಹೊಸ ಬಡಾವಣೆ ಪೊಲೀಸರು ಬಂಧಿಸಿದ್ದಾರೆ. ರಾಘವೇಂದ್ರ (43), ಭಾನು ಪ್ರಕಾಶ್ (23) ಅಭಿಷೇಕ (23), ಮೊಹಮ್ಮದ್ ಸೈಪ್ (24), ಸೈಯದ್ ಲುಕ್ಮಾನ್(23), ಅಫ್ತಬ್ (24), ಗುರುರಾಜ್ (28) ಬಂಧಿತ ಆರೋಪಿಗಳು.

ಆರೋಪಿಗಳ ಬಳಿ ಇದ್ದ 10,500 ರೂ. ಬೆಲೆಯ 300 ಮಾತ್ರೆಗಳನ್ನು ಮತ್ತು ಸಿರಿಂಜ್‌, ಮೊಬೈಲ್ ಮತ್ತು ಬೈಕನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅತಿ ಚಿಕ್ಕ ವಯಸ್ಸಿನ ಮಕ್ಕಳು ಮತ್ತು ವಿದ್ಯಾರ್ಥಿಗಳ ಶರೀರ ಹಾಗೂ ಮೆದುಳಿನ ಮೇಲೆ ಪರಿಣಾಮ ಬೀರುವ ಮಾದಕ ಮಾತ್ರೆಗಳನ್ನು ಮಾರಾಟ ಮಾಡಿರುವ ಕಾರಣಕ್ಕೆ ಬಂಧಿತರ ವಿರುದ್ಧ
13/2025 ಕಲಂ 123, 278, 280 ರೆ.ವಿ. 3 (5) ಬಿ.ಎನ್.ಎಸ್. ಆ್ಯಕ್ಟ್ ಅಡಿ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪ್ರಕರಣದ ವಿವರ

ಹೊಸ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯ ಎಸ್‌.ಐ.ಟಿ. ಬಡಾವಣೆ, ರೈಲ್ವೆ ಹಳಿಗಳ ಪಕ್ಕ ಹಾಗೂ ಉಪ್ಪಾರಹಳ್ಳಿ ಬ್ರಿಡ್ಜ್ ಶ್ರೀದೇವಿ ಕಾಲೇಜುಗಳ ಬಳಿಯ ಮೆಡಿಕಲ್‌ ಶಾಪ್‌ಗೆ ತೆರಳಿದ ಕೆಲವು ಹುಡುಗರು ಟೈಡಾಲ್ ಮಾತ್ರೆಗಳನ್ನು ಕೊಡುವಂತೆ ಕೇಳುತ್ತಿದ್ದರು. ಇದರಿಂದ ಪ್ರೇರೇಪಿತನಾದ ತುಮಕೂರು ನಗರದ ಮಧುಗಿರಿ ರಸ್ತೆಯಲ್ಲಿರುವ ಮೆಡಿಕಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಭಾನು ಪ್ರಕಾಶ್ ಎಂಬಾತ ಮೆಡಿಕಲ್ ರೆಪ್ರೆಸೆಂಟೇಟಿವ್ ಬಳಿ ಟೈಡಾಲ್ ಮಾತ್ರೆಗಳನ್ನು ತಂದುಕೊಡುವಂತೆ ತಿಳಿಸಿದ್ದ.

ಆ ಪೈಕಿ ಬೆಂಗಳೂರು ನಿವಾಸಿ ಮೆಡಿಕಲ್ ರೆಪ್ ರಾಘವೇಂದ್ರ ಎಂಬಾತ ಈ ಮಾತ್ರೆಗಳನ್ನು ಯಾವುದೇ ಬಿಲ್‌ಗಳಿಲ್ಲದೆ ಆಕ್ರಮವಾಗಿ ಮೊದಲು 345 ರೂ.ಗೆ ಒಂದು ಶೀಟ್‌ನಂತೆ 4 ಶೀಟ್ಗಳನ್ನು ತಂದು ತಂದುಕೊಟ್ಟಿದ್ದಾನೆ. ಇದೇ ವೇಳೆ ಮಾತ್ರೆಗಳಿಗೆ ಬೇಡಿಕೆ ಜಾಸ್ತಿಯಾಗಿದೆ. ಹೀಗಾಗಿ ಭಾನು ಪ್ರಕಾಶ್ ಮತ್ತು ರಾಘವೇಂದ್ರ ಸೇರಿಕೊಂಡು ಈ ಮಾತ್ರೆಗಳನ್ನು ಅಂಗಡಿಯಲ್ಲಿ ಮಾರಾಟ ಮಾಡದೆ ಕೇಳಿಕೊಂಡು ಬರುವ ಗಿರಾಕಿಗಳಿಗೆ ತಮ್ಮ ಮೊಬೈಲ್ ನಂಬ‌ರ್ ನೀಡಿ ಶ್ರೀದೇವಿ ಕಾಲೇಜ್ ಬಳಿ, ಇಂಡಸ್ಟ್ರೀಯಲ್ ಏರಿಯಾಗಳಿಗೆ ಕರೆಸಿಕೊಂಡು 10 ಮಾತ್ರೆಗಳಿರುವ ಒಂದು ಶೀಟ್ ಅನ್ನು 800 ರೂ.ಗಳಿಗೆ ಮಾರಾಟ ಮಾಡಲು ಆರಂಭಿಸಿದ್ದಾರೆ. ಇದಲ್ಲದೇ ಈ ಹಿಂದೆ ಕೆಲಸ ಮಾಡುತ್ತಿದ್ದ ಅಭಿಷೇಕ್ ಎಂಬವನಿಗೆ ಮೊಬೈಲ್ ಕೊಡಿಸಿ ವ್ಯವಹಾರ ಕುದುರಿಸುವಂತೆ ತಿಳಿಸಿದ್ದಾನೆ.

ಅದರಂತೆ ಅಭಿಷೇಕ್ ಮಾತ್ರೆ ಮತ್ತು ಸಿರಿಂಜ್‌ಗಳನ್ನು ಒಂದು ಬ್ಯಾಗ್‌ನಲ್ಲಿ ಇಟ್ಟುಕೊಂಡು ಭಾನುಪ್ರಕಾಶ್ ತಂದು ಕೊಡುತ್ತಿದ್ದ ಮಾತ್ರೆಗಳನ್ನು ಫೋನ್‌ ಮಾಡುತ್ತಿದ್ದ ಮೊಹಮ್ಮದ್ ಸೈಫ್, ಸೈಯದ್ ಲುಕ್ಕಾನ್, ಅಪ್ಲಬ್, ಗುರುರಾಜ್ ಎಂಬವರಿಗೆ ಮತ್ತು ಇತರರಿಗೆ ಶಿರಾಗೇಟ್ ಬಳಿ ಮತ್ತು ಇಂಡಸ್ಟ್ರಿಯಲ್ ಏರಿಯಾ ಬಳಿ ಕರೆಸಿಕೊಂಡು ಮಾರಾಟ ಮಾಡಿದ್ದಾನೆ.

800 ರೂ.ಗಳಿಗೆ ತೆಗೆದುಕೊಂಡು ಹೋದ 10 ಮಾತ್ರೆಗಳಿರುವ ಶೀಟ್‌ಗಳನ್ನು ಆರೋಪಿಗಳು ಒಂದೊಂದು ಮಾತ್ರೆಗಳನ್ನು ಕವರ್ ಸಮೇತ ಕಟ್ ಮಾಡಿ ಒಂದು ಮಾತ್ರೆಗೆ 100 ರೂ. ರೂ.ಗಳಿಂದ 200 ರೂ.ಗಳ ವರೆಗೆ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಅವರು ಸಹ ಆಗಾಗ ಆ ಮಾತ್ರೆಗಳನ್ನು ಉಪಯೋಗಿಸುತ್ತಿದ್ದರು.ಈ ಮಾತ್ರೆಗಳನ್ನು ಸೇವಿಸುತ್ತಿದ್ದಂತೆ ನಶೆ ಏರುತ್ತದೆ ಎಂದು ತನಿಖೆಯಲ್ಲಿ ತಿಳಿದು ಬಂದಿದೆ.