ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಎಕ್ಕಲಕಟ್ಟೆ ಆಂಜನೇಯಸ್ವಾಮಿ ದೇವಾಲಯಕ್ಕೆ ಕನ್ನ : ಸಿಸಿ ಟಿವಿಯಲ್ಲಿ ಹುಂಡಿ ಕದ್ದೊಯ್ದ ದೃಶ್ಯ ಸೆರೆ

ತಾಲೂಕಿನ ಹಾಗಲವಾಡಿ ಹೋಬಳಿಯ ಎಕ್ಕಲಕಟ್ಟೆ ಗ್ರಾಮದ ಶ್ರೀ ಆಂಜನೇಯಸ್ವಾಮಿ ದೇವಾಲಯ ದಲ್ಲಿ ರಾತ್ರಿ ದೇವಸ್ಥಾನದ ಬೀಗ ಮುರಿದು ಹುಂಡಿಯಲ್ಲಿದ್ದ ಸುಮಾರು ಎರಡು ಲಕ್ಷ ಹಣವನ್ನು ಕಾಣಿಕೆ ಹುಂಡಿ ಸಮೇತ ದೋಚಿದ ಘಟನೆ ದೇವಾಲಯದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಎಕ್ಕಲಕಟ್ಟೆ ಆಂಜನೇಯಸ್ವಾಮಿ ದೇವಾಲಯಕ್ಕೆ ಕನ್ನ

-

Ashok Nayak
Ashok Nayak Dec 2, 2025 12:28 AM

ಗುಬ್ಬಿ: ತಾಲೂಕಿನ ಹಾಗಲವಾಡಿ ಹೋಬಳಿಯ ಎಕ್ಕಲಕಟ್ಟೆ ಗ್ರಾಮದ ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ರಾತ್ರಿ ದೇವಸ್ಥಾನದ ಬೀಗ ಮುರಿದು ಹುಂಡಿಯಲ್ಲಿದ್ದ ಸುಮಾರು ಎರಡು ಲಕ್ಷ ಹಣವನ್ನು ಕಾಣಿಕೆ ಹುಂಡಿ ಸಮೇತ ದೋಚಿದ ಘಟನೆ ದೇವಾಲಯದ ಸಿಸಿ ಕ್ಯಾಮರಾದಲ್ಲಿ ಸೆರೆ ಯಾಗಿದೆ.

ವರ್ಷಕ್ಕೆ ಒಂದು ಬಾರಿ ಎಲ್ಲಾ ಸಮಿತಿಯ ಎಲ್ಲಾ ಸದಸ್ಯರು, ಊರಿನ ಗಣ್ಯರ ಸಮ್ಮುಖದಲ್ಲಿ ಹುಂಡಿ ತೆರೆಯುತ್ತಿದ್ದೆವು. ಆದರೆ ಈಗ ಹುಂಡಿಯಲ್ಲಿ ಸುಮಾರು 2 ಲಕ್ಷಕ್ಕೂ ಹೆಚ್ಚು ಹಣವಿತ್ತು ಎಂಬ ಅಂದಾಜಿದೆ.

ಇದನ್ನೂ ಓದಿ: Gubbi News: ಗುಬ್ಬಿ ತಾಲ್ಲೂಕು ತುಮಲ್ ನಿರ್ದೇಶಕರ ವಿರುದ್ಧ ಎನ್ ಡಿಎ ನೇರ ಆರೋಪ

ದೇವಸ್ಥಾನ ಅಭಿವೃದ್ಧಿಗೆ ಆ ಹಣವನ್ನ ಬಳಕೆ ಮಾಡಿಕೊಂಡು ಜಾತ್ರೆಯನ್ನು ಕೂಡ ನಡೆಸಬೇಕಿತ್ತು. ಆದರೆ ರಾತ್ರಿ ಕಳ್ಳರು ಹುಂಡಿ ಸಮೇತ ಹಣವನ್ನು ಕದ್ದು ಪರಾರಿಯಾಗಿದ್ದಾರೆ ಎಂದು ಅರ್ಚಕ ರಾಧಾಕೃಷ್ಣ ತಿಳಿಸಿದ್ದಾರೆ.

ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಲಾಯಿತು. ಪಿಎಸ್ಐ ಮಾಳಪ್ಪ ನಾಯ್ಕೋಡಿ ಭೇಟಿ ನೀಡಿ ಪ್ರಕರಣಾ ದಾಖಲಿಸಿಕೊಂಡು ಕಳ್ಳರನ್ನು ಹಿಡಿಯಲು ಬಲೆ ಬೀಸಿದ್ದಾರೆ.