ಸಂವಿಧಾನ ಆಶೋತ್ತರದಂತೆ ಇನ್ನೂ ಸಮಾನತೆ ತರಬೇಕಿದೆ : ಶಾಸಕ ಎಸ್.ಆರ್.ಶ್ರೀನಿವಾಸ್

ಅಂಬೇಡ್ಕರ್ ಅವರ ಆಶಯದಂತೆ ನವ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗಿಲ್ಲ. ಅಧಿಕಾರ ಎನ್ನುವುದು ಅವರವರ ಜವಾಬ್ದಾರಿ ಅರಿತು ಕೆಲಸ ಮಾಡಿ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಒದಗಿಸುವ ಕೆಲಸ ಮಾಡಿದಲ್ಲಿ ಮಾತ್ರ ಸಂವಿಧಾನ ಸಾರ್ಥಕತೆ ಪಡೆಯುತ್ತದೆ. ಈ ಕೆಲಸಕ್ಕೆ ಉತ್ತಮ ಶಿಕ್ಷಣ ಒದಗಿ ಸುವ ಕೆಲಸ ಆಗಬೇಕು ಎಂದರು

Gubbi news 2
Profile Ashok Nayak Jan 26, 2025 9:30 PM

ಗುಬ್ಬಿ: ಶೋಷಿತ ವರ್ಗಕ್ಕೆ ಸಾಮಾಜಿಕ ನ್ಯಾಯ ತರುವಲ್ಲಿ ನಾವೆಲ್ಲರೂ ಇನ್ನೂ ಬದ್ಧತೆ ಬೆಳೆಸಿ ಕೊಳ್ಳಬೇಕಿದೆ. ಅಂಬೇಡ್ಕರ್ ಅವರ ಸಂವಿಧಾನ ಆಶೋತ್ತರದಂತೆ ಸಮಾನತೆ ತರಬೇಕಿದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಅಭಿಪ್ರಾಯ ವ್ಯಕ್ತಪಡಿಸಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ತಾಲ್ಲೂಕು ಆಡಳಿತ ಆಯೋಜಿಸಿದ್ದ 76 ನೇ ಗಣ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನಿಸಿ ಮಾತನಾಡಿದ ಅವರು ದೇಶದ ಪ್ರಜಾಪ್ರಭುತ್ವ ಗಣರಾಜ್ಯ ಮೂಲಕ ಸಾಮಾಜಿಕ ನ್ಯಾಯ ಬದ್ಧತೆಯ ದಿನ ಸಮಾ ಜಕ್ಕೆ ಕೊಡುಗೆ ನೀಡಿದ ವ್ಯಕ್ತಿಗಳ ಸನ್ಮಾನಿಸಿ ಗೌರವಿಸುವ ಕೆಲಸ ಮಾಡಬೇಕು ಎಂದರು.

ಇದನ್ನೂ ಓದಿ: Tumkur News: ಅನುಗ್ರಹ ಸಂಗೀತ ಮಹಾವಿದ್ಯಾಲಯದ ಬೆಳ್ಳಿ ಮಹೋತ್ಸವ; ಇಂದಿನಿಂದ 3 ದಿನ ಶ್ರೀ ಪುರಂದರ ದಾಸರ, ಶ್ರೀ ತ್ಯಾಗರಾಜರ ಆರಾಧನೋತ್ಸವ

ಸಂವಿಧಾನದಂತೆ ಕೆಲಸ ಮಾಡುವ ಮೂರು ಪ್ರಮುಖ ಅಂಗಗಳು ಇನ್ನೂ ಮೇಲು ಕೀಳು, ಬಡವ ಶ್ರೀಮಂತ ತೊಡೆದು ಹಾಕಲು ಸಾಧ್ಯವಾಗಿಲ್ಲ. ಅಂಬೇಡ್ಕರ್ ಅವರ ಆಶಯದಂತೆ ನವ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗಿಲ್ಲ. ಅಧಿಕಾರ ಎನ್ನುವುದು ಅವರವರ ಜವಾಬ್ದಾರಿ ಅರಿತು ಕೆಲಸ ಮಾಡಿ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಒದಗಿಸುವ ಕೆಲಸ ಮಾಡಿದಲ್ಲಿ ಮಾತ್ರ ಸಂವಿಧಾನ ಸಾರ್ಥಕತೆ ಪಡೆಯುತ್ತದೆ. ಈ ಕೆಲಸಕ್ಕೆ ಉತ್ತಮ ಶಿಕ್ಷಣ ಒದಗಿಸುವ ಕೆಲಸ ಆಗಬೇಕು ಎಂದರು.

ಧ್ವಜಾರೋಹಣ ನೆರವೇರಿಸಿದ ತಹಶೀಲ್ದಾರ್ ಬಿ.ಆರತಿ ಸಂದೇಶ ನೀಡಿ ಭಾರತೀಯರು ದೇಶದ ಗಣ್ಯರನ್ನು ಸ್ಮರಿಸಬೇಕು. ತ್ಯಾಗ ಬಲಿದಾನ ನೀಡಿದ ಸೈನಿಕರು ಹಾಗೂ ದೇಶದ ಪ್ರಗತಿಗೆ ಸಹಕಾರಿ ಯಾದ ವಿಜ್ಞಾನಿಗಳಿಗೆ ಈ ದಿನ ಗೌರವ ಸಲ್ಲಬೇಕು. ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗ ಒಂದು ಉತ್ತಮ ಆಡಳಿತ ನೀಡಿ ದೇಶದ ಉನ್ನತಿಗೆ ಶ್ರಮಿಸುತ್ತವೆ. ಮೂರು ಅಂಗಗಳ ಜೊತೆ ನಾಗರೀಕ ತನ್ನ ಕರ್ತವ್ಯ ಅಚ್ಚುಕಟ್ಟಾಗಿ ಪಾಲಿಸಬೇಕು ಎಂದರು.

ಉಪನ್ಯಾಸಕ ತಿಮ್ಮೇಗೌಡ ಮಾತನಾಡಿ 1950 ಜನವರಿ 26 ರಂದು ಗಣರಾಜ್ಯ ರೂಪಿಸಿ ಸಂವಿಧಾನ ಜಾರಿ ಮಾಡಿಕೊಂಡು ನಮ್ಮ ದೇಶದ ಆಡಳಿತ ಆರಂಭಿಸಿದೆವು. ಬ್ರಿಟಿಷರ ಆಳ್ವಿಕೆಯಲ್ಲಿ ನಮ್ಮ ದೇಶದಲ್ಲಿ ನಾವೇ ತೃತೀಯ ಪ್ರಜೆಗಳಾಗಿ ಇದ್ದು ಸ್ವಾತಂತ್ರ್ಯ ಹೋರಾಟ ಮೂಲಕ ಸ್ವಾತಂತ್ರ್ಯ ಪಡೆದು ನಂತರ ವಿವಿಧ ರಾಜ್ಯಗಳನ್ನು ಒಗ್ಗೂಡಿಸಿ ಸಂವಿಧಾನ ಜಾರಿಗೆ ತರಲಾಯಿತು. ಹೀಗೆ ದೇಶದ ಅಭಿವೃದ್ದಿ ಹಂತ ಹಂತವಾಗಿ ಸಾಗಿ ಇಡೀ ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಪ್ರಜಾಪ್ರಭುತ್ವ ಸಂವಿಧಾನ ಎನಿಸಿಕೊಂಡಿದ್ದೇವೆ. ಹೀಗೆ ದೇಶದ ಸರ್ವತೋಮುಖ ಅಭಿವೃದ್ಧಿಗೆ ಹಲವರ ಕೊಡುಗೆ ಇದೆ. ಅವರನ್ನೆಲ್ಲಾ ಸ್ಮರಿಸುವುದು ನಮ್ಮ ಕರ್ತವ್ಯ ಎಂದರು.

ಪೋಲಿಸ್, ಗೃಹರಕ್ಷಕ ದಳ, ಎನ್ ಸಿಸಿ, ಸ್ಕೌಟ್ ಅಂಡ್ ಗೈಡ್ಸ್ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ಆಕರ್ಷಕ ಕವಾಯತು ನಡೆಯಿತು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸ ಲಾಯಿತು.

ವೇದಿಕೆಯಲ್ಲಿ ಪಪಂ ಅಧ್ಯಕ್ಷೆ ಮಂಗಳಮ್ಮ ರಾಜಣ್ಣ, ಉಪಾಧ್ಯಕ್ಷೆ ಮಮತಾ ಶಿವಪ್ಪ ಸೇರಿದಂತೆ ಎಲ್ಲಾ ಸದಸ್ಯರು, ತಾಪಂ ಇಓ ಶಿವಪ್ರಕಾಶ್, ಬಿಇಓ ನಟರಾಜ್, ಸಿಪಿಐ ಗೋಪಿನಾಥ್, ಪ್ರಾಚಾರ್ಯ ಪ್ರಸನ್ನ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಬಿಂದುಮಾಧವ, ಪಪಂ ಮುಖ್ಯಾಧಿಕಾರಿ ಮಂಜುಳಾ ದೇವಿ ಇತರರು ಇದ್ದರು.

Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?