Gruha Lakshmi Scheme: ಗೃಹಲಕ್ಷ್ಮಿ ಹಣದಲ್ಲಿ ಮಗಳ ವಿದ್ಯಾಭ್ಯಾಸಕ್ಕೆ ಕಂಪ್ಯೂಟರ್ ಕೊಡಿಸಿದ ತಾಯಿ

Gruha Lakshmi Scheme: ಗೃಹಲಕ್ಷ್ಮಿ ಯೋಜನೆಯಲ್ಲಿ ಪ್ರತಿ ತಿಂಗಳು ಬರುವ 2000 ರೂ.ಗಳನ್ನು ತಾಯಿ ಕೂಡಿಟ್ಟು, ಕಂಪ್ಯೂಟರ್‌ ಕೊಡಿಸಿರುವುದಕ್ಕೆ ಮಗಳು ಸಂತಸ ವ್ಯಕ್ತಪಡಿಸಿದ್ದಾಳೆ.

Tiptur News 1
Profile Prabhakara R Jan 21, 2025 10:45 PM

ತಿಪಟೂರು: ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಬಡ ಕುಟುಂಬಗಳಿಗೆ ಸಾಕಷ್ಟು ನೆರವಾಗುತ್ತಿದೆ. ವಿಶೇಷವಾಗಿ ಗೃಹಲಕ್ಷ್ಮಿ ಯೋಜನೆಯಿಂದ ಕೋಟ್ಯಂತರ ಮಹಿಳೆಯರು ಪ್ರಯೋಜನ ಪಡೆಯುತ್ತಿದ್ದಾರೆ. ಯಲಬುರ್ಗಾದಲ್ಲಿ ಇತ್ತೀಚೆಗೆ ಯೋಜನೆಯ ಹಣವನ್ನು ತಾಯಿ ಕೂಡಿಟ್ಟು ಮಗನಿಗೆ ಲ್ಯಾಪ್‌ಟಾಪ್ ಕೊಡಿಸಿ ಗಮನ ಸೆಳೆದಿದ್ದರು. ಅದೇ ರೀತಿ ಇದೀಗ ಮಗಳ ವಿದ್ಯಾಭ್ಯಾಸಕ್ಕಾಗಿ ತಾಯಿ, ಗೃಹಲಕ್ಷ್ಮಿ ಹಣದಲ್ಲಿ ಕಂಪ್ಯೂಟರ್ ಕೊಡಿಸಿರುವುದು ತಿಪಟೂರಿನಲ್ಲಿ ಕಂಡುಬಂದಿದೆ.

Tiptur News

ನಗ್ಮಾಬಾನು ಎಂಬುವವರು ಗೃಹಲಕ್ಷ್ಮಿ ಹಣದಲ್ಲಿ ಮಗಳ ವಿದ್ಯಾಭ್ಯಾಸಕ್ಕೆ ಕಂಪ್ಯೂಟರ್ ಕೊಡಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯಲ್ಲಿ ಪ್ರತಿ ತಿಂಗಳು ಬರುವ 2000 ರೂ.ಗಳನ್ನು ತಾಯಿ ಕೂಡಿಟ್ಟು, ಕಂಪ್ಯೂಟರ್‌ ಕೊಡಿಸಿರುವುದಕ್ಕೆ ಮಗಳು ಸಂತಸ ವ್ಯಕ್ತಪಡಿಸಿದ್ದಾಳೆ. ನನ್ನ ತಾಯಿ ತನಗೆ ಬಂದ ಗೃಹಲಕ್ಷ್ಮಿ ಹಣದಲ್ಲಿ ನನಗೆ ಕಂಪ್ಯೂಟರ್‌ ಕೊಡಿಸಿದ್ದಾರೆ ಎಂದು ಪುತ್ರಿ ತಿಳಿಸಿದ್ದಾಳೆ.

ಈ ಸುದ್ದಿಯನ್ನೂ ಓದಿ | Gruha Lakshmi Scheme: ಗೃಹಲಕ್ಷ್ಮಿ ಯೋಜನೆಯಿಂದ ಬದುಕಿಗೆ ಹೊಸ ಚೈತನ್ಯ; ಸಿಎಂ ಎದುರು ಗೃಹಲಕ್ಷ್ಮಿಯರ ಪ್ರಶಂಸೆ

ಪ್ರಹ್ಲಾದ್ ರಾವ್ ಪ್ರಶಸ್ತಿ ಪಡೆದ ಮಹಾಬಲ ಸೀತಾಳಭಾವಿ

Award ceremony

ತುಮಕೂರು: ನಗರದಲ್ಲಿ ಆಯೋಜಿಸಿದ್ದ 39 ನೇ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಮ್ಮೇಳನದಲ್ಲಿ, ಮೊದಲಬಾರಿಗೆ ಕೆ. ಪ್ರಹ್ಲಾದ್‌ರಾವ್ ದತ್ತಿ ಪ್ರಶಸ್ತಿಯನ್ನು ಸಂಯುಕ್ತ ಕರ್ನಾಟಕ ಪತ್ರಿಕೆಯ ಸಂಪಾದಕರಾದ ಮಹಾಬಲ ಸೀತಾಳಭಾವಿಗೆ ನೀಡಿ ಗೌರವಿಸಲಾಯಿತು. 30 ವರ್ಷ ಮಾಧ್ಯಮ ಕ್ಷೇತ್ರದಲ್ಲಿ ಸುಧೀರ್ಘ ಸೇವೆ ಸಲ್ಲಿಸಿದ್ದ ಮಂಡ್ಯದ ಹೆಸರಾಂತ ಹಿರಿಯ ಪತ್ರಕರ್ತ ಕೆ. ಪ್ರಹ್ಲಾದ್‌ರಾವ್ ರಾವ್ ಹೆಸರಿನಲ್ಲಿ ಅವರ ಪುತ್ರರಾದ ಕೆ.ಪಿ.ಎಸ್. ಪ್ರಮೋದ್ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ದತ್ತಿ ಸ್ಥಾಪಿಸಿದ್ದು, ಪ್ರತಿ ವರ್ಷವೂ ಸಹ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನಡೆಸುವ ಸಮ್ಮೇಳನದಲ್ಲಿ ಅತ್ಯುತ್ತಮ ಪತ್ರಕರ್ತರಿಗೆ ಪ್ರಶಸ್ತಿ ನೀಡಬೇಕೆಂದು ಮನವಿಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ಪತ್ರಕರ್ತರ ಸಂಘವು, ತುಮಕೂರಿನಲ್ಲಿ ಆಯೋಜಿಸಿದ್ದ 39 ನೇ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಮ್ಮೇಳನದಲ್ಲಿ ಮೊದಲ ಬಾರಿಗೆ ಸಂಯುಕ್ತ ಕರ್ನಾಟಕ ಪತ್ರಿಕೆಯ ಸಂಪಾದಕ ಮಹಾಬಲ ಸೀತಾಳಭಾವಿ ಅವರಿಗೆ ಕೆ. ಪ್ರಹ್ಲಾದ್‌ರಾವ್ ದತ್ತಿ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.

ಕೆ. ಪ್ರಹ್ಲಾದ್‌ರಾವ್ ರಾವ್ ಅವರ ಪುತ್ರರಾದ ಕೆ.ಪಿ.ಎಸ್. ಪ್ರಮೋದ್ ಅವರನ್ನು ಸನ್ಮಾನಿಸಲಾಯಿತು. ನನ್ನ ಎಲ್ಲ ಸಾಧನೆಗಳಗೆ ತಂದೆಯವರಾದ ಕೆ. ಪ್ರಹ್ಲಾದ್‌ರಾವ್ ಸ್ಪೂತಿಯಾಗಿದ್ದು, ಅವರಿಗೆ ಮಾಧ್ಯಮದ ಮೇಲಿದ್ದ ಅಪಾರವಾದ ಪ್ರೀತಿ, ಗೌರವ ಮತ್ತು ನಿಷ್ಠೆಯನ್ನು ನೆನೆಯುತ್ತಾ ಸಾರ್ಥಕ ಭಾವ ಮೆರೆದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು ಹಾಗೂ ಹಲವು ಗಣ್ಯರು ಭಾಗಿಯಾಗಿದ್ದರು.

Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?