ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ನರರೋಗ ತಜ್ಞ ಡಾ. ದರ್ಶನ್ ವಿಶೇಷ ಸೇವೆ; ತುಮಕೂರು ಜಿಲ್ಲಾಸ್ಪತ್ರೆಯಲ್ಲಿ 60ಕ್ಕೂ ಹೆಚ್ಚು ಕ್ಲಿಷ್ಟಕರ ಶಸ್ತ್ರಚಿಕಿತ್ಸೆ

Tumkur News: ತುಮಕೂರು ಜಿಲ್ಲಾಸ್ಪತ್ರೆಯ ನರರೋಗ ವಿಭಾಗದ ನುರಿತ ಶಸ್ತ್ರಚಿಕಿತ್ಸಾ ತಂಡ ಕಳೆದ 8 ತಿಂಗಳಲ್ಲಿ 60ಕ್ಕೂ ಹೆಚ್ಚು ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗಳನ್ನು ಉಚಿತವಾಗಿ ನಡೆಸುವ ಮೂಲಕ ರಾಜ್ಯದ ಗಮನ ಸೆಳೆದಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಅಸ್ಗರ್ ಬೇಗ್ ತಿಳಿಸಿದ್ದಾರೆ.

ನರರೋಗ ತಜ್ಞ ಡಾ. ದರ್ಶನ್‌ರಿಂದ 60ಕ್ಕೂ ಹೆಚ್ಚು ಕ್ಲಿಷ್ಟಕರ ಶಸ್ತ್ರಚಿಕಿತ್ಸೆ

-

Profile
Siddalinga Swamy May 15, 2026 10:49 PM

ತುಮಕೂರು, ಮೇ 15: ಜಿಲ್ಲಾಸ್ಪತ್ರೆಯ ನರರೋಗ ವಿಭಾಗದ ನುರಿತ ಶಸ್ತ್ರಚಿಕಿತ್ಸಾ ತಂಡ ಕಳೆದ 8 ತಿಂಗಳಲ್ಲಿ 60ಕ್ಕೂ ಹೆಚ್ಚು ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗಳನ್ನು ಉಚಿತವಾಗಿ ನಡೆಸುವ ಮೂಲಕ ರಾಜ್ಯದ ಗಮನ ಸೆಳೆದಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಅಸ್ಗರ್ ಬೇಗ್ ತಿಳಿಸಿದರು. (Tumkur News) ಜಿಲ್ಲಾಸ್ಪತ್ರೆಯ ನರರೋಗ ವಿಭಾಗದ ಈ ಸಾಧನೆ ಕುರಿತು ಅವರು ಮಾತನಾಡಿದರು.

ಕಳೆದ ಎಂಟು ತಿಂಗಳ ಹಿಂದೆ ಡಾ. ದರ್ಶನ್ ಅವರು ನಗರದ ಶ್ರೀದೇವಿ ಆಸ್ಪತ್ರೆಯಿಂದ ತುಮಕೂರು ಜಿಲ್ಲಾಸ್ಪತ್ರೆಗೆ ತಜ್ಞ ವೈದ್ಯರಾಗಿ ಬಂದಿದ್ದು, ಅವರೊಂದಿಗೆ ಅನಸ್ಥೇಸಿಯಾ, ಶ್ರುಶೂಷಕರ ತಂಡ ಸೇರಿ ಇದುವರೆಗೂ 60 ಶಸ್ತ್ರಚಿಕಿತ್ಸೆ ನಡೆಸಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಒಂದು ಶಸ್ತ್ರಚಿಕಿತ್ಸೆಗೆ 2.50 ಲಕ್ಷ ದಿಂದ 5 ಲಕ್ಷದವರೆಗೂ ಖರ್ಚಾಗುತ್ತದೆ. ಒಂದು ಶಸ್ತ್ರಚಿಕಿತ್ಸೆ ನಡೆಸಲು ಕನಿಷ್ಠ 2-30 ಗಂಟೆಯಿಂದ 4 ಗಂಟೆಗಳ ಕಾಲಾವಕಾಶ ಬೇಕು. ಕ್ಲಿಷ್ಟಕರ ಅಪರೇಷನ್‌ಗಳನ್ನು ನಮ್ಮ ವೈದ್ಯರು ಬಹಳ ಪರಿಶ್ರಮದಿಂದ ಮಾಡುವ ಮೂಲಕ ಸರ್ಕಾರಿ ಆಸ್ಪತ್ರೆಗೆ ಘನತೆ ತಂದಿದ್ದಾರೆ. ಇಡೀ ರಾಜ್ಯದಲ್ಲಿ ಮೆಡಿಕಲ್ ಕಾಲೇಜುಗಳ ಸಹಯೋಗವಿಲ್ಲದೆ ಈ ರೀತಿಯ ಶಸ್ತ್ರಚಿಕಿತ್ಸೆ ನಡೆಸಿ, ಯಶಸ್ವಿಯಾಗಿರುವ ಆಸ್ಪತ್ರೆ ಎಂದರೆ ಅದು ತುಮಕೂರು ಮಾತ್ರ. ಇದಕ್ಕಾಗಿ ಡಾ. ದರ್ಶನ್ ಮತ್ತು ತಂಡಕ್ಕೆ ಜಿಲ್ಲಾಸ್ಪತ್ರೆಯ ಪರವಾಗಿ ಅಭಿನಂದನೆ ಸಲ್ಲಿಸುತ್ತೇವೆ ಎಂದರು.

ಗೃಹಲಕ್ಷ್ಮಿ ಯೋಜನೆಯ ಸಾರ್ಥಕತೆ: ಎಸ್ಸೆಸ್ಸೆಲ್ಸಿಯಲ್ಲಿ 624 ಅಂಕ ಗಳಿಸಿದ ವಿದ್ಯಾರ್ಥಿನಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅಭಿನಂದನೆ

ಜಿಲ್ಲಾಸ್ಪತ್ರೆಯ ನರರೋಗ ತಜ್ಞ ಡಾ. ದರ್ಶನ್ ಮಾತನಾಡಿ, ತಮಿಳುನಾಡಿನ ತಂಜಾವೂರಿನಲ್ಲಿ ಎಂ.ಎಸ್ ಮುಗಿಸಿ, ಕೆಲ ದಿನ ಕೆಲಸ ಮಾಡಿ, ತದನಂತರ ನಮ್ಮ ಸ್ವತಃ ಜಿಲ್ಲೆಯ ಶ್ರೀದೇವಿ ಮೆಡಿಕಲ್ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದೆ. ಕಳೆದ ಎಂಟು ತಿಂಗಳಿನಿಂದ ಸರ್ಕಾರಿ ಅಸ್ಪತ್ರೆಯ ನರರೋಗ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುತ್ತೇನೆ. ಜಿಲ್ಲಾ ಸರ್ಜನ್ ಹಾಗೂ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಯ ಸಹಕಾರದೊಂದಿಗೆ ಇದುವರೆಗೂ 60ಕ್ಕೂ ಹೆಚ್ಚು ಅಪರೇಷನ್ ಮಾಡಿದ್ದು, ಶೇ.100 ಸಕ್ಸಸ್ ರೇಟ್ ಇದೆ. ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿಗಳು ನಮ್ಮ ತಂಡಕ್ಕೆ ಅಗತ್ಯವಿರುವ ಎಲ್ಲಾ ಸಕಲರಣೆಗಳನ್ನು ಸಕಾಲದಲ್ಲಿ ಒದಗಿಸುವ ಮೂಲಕ ಈ ಸಾಧನೆಗೆ ಕಾರಣೀಭೂತರಾಗಿದ್ದಾರೆ. ನಮ್ಮ ಸೇವೆ ದಿನ 24 ಗಂಟೆ, ವಾರದ ಏಳು ದಿನವೂ ಇರುತ್ತದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ವೈದ್ಯರಾದ ಡಾ. ನಾಗನಾಥ್ ಉಪಸ್ಥಿತರಿದ್ದರು.